Webdunia - Bharat's app for daily news and videos

Install App

ನಿಮಗೆ ಹೀಗಾಗುತ್ತಿದ್ದರೆ ಅದು ಮಾನಸಿಕ ಖಿನ್ನತೆಯ ಲಕ್ಷಣಗಳು

Webdunia
ಮಂಗಳವಾರ, 16 ಜೂನ್ 2020 (09:28 IST)
ಬೆಂಗಳೂರು: ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ ಸುಶಾಂತ್ ಸಿಂಗ್ ರಜಪೂತ್ ಎಂಬ ನಟ ಮಾನಸಿಕ ಖಿನ್ನತೆಗೊಳಗಾಗಿದ್ದರು ಎಂಬ ವಿಚಾರ ಈಗ ಬೆಳಕಿಗೆ ಬಂದಿದೆ. ಇದುವೇ ಅವರ ಸಾವಿಗೆ ಕಾರಣವಾಯಿತು ಎಂಬ ಚರ್ಚೆಯೂ ನಡೆಯುತ್ತಿದೆ. ಅಷ್ಟಕ್ಕೂ ಡಿಪ್ರೆಷನ್ ಅಥವಾ ಖಿನ್ನತೆಗೊಳಗಾಗಿದ್ದೇವೆ ಎಂದು ತಿಳಿದುಕೊಳ್ಳುವುದು ಹೇಗೆ?


ಜೀವನದಲ್ಲಿ ವೃತ್ತಿ ಅಥವಾ ವೈಯಕ್ತಿಕ ಬದುಕಿನಲ್ಲಿ ಅಭದ್ರತೆ, ಕಷ್ಟ-ನಷ್ಟಗಳಾದಾಗ ಮಾನಸಿಕವಾಗಿ ಕುಗ್ಗಿ ಹೋಗುತ್ತೇವೆ. ಒಂದು ವೇಳೆ ಈ ಸಂದರ್ಭದಲ್ಲಿ ನಮಗೆ ಮಾನಸಿಕವಾಗಿ ಆಸರೆ ದೊರೆತರೆ ದುಃಖದಿಂದ ಹೊರಬರಬಹುದು. ಇಲ್ಲದೇ ಹೋದರೆ ಮತ್ತಷ್ಟು ಕುಗ್ಗಿಹೋಗುತ್ತೇವೆ. ಇದು ಮಾನಸಿಕ ಖಿನ್ನತೆಗೆ ದಾರಿಯಾಗುತ್ತದೆ.

ಆಗಾಗ ಮೂಡ್ ಬದಲಾಗುವುದು. ಈಗ ಇರುವಂತೆ ಇನ್ನೊಂದು ಕ್ಷಣ ಇಲ್ಲದೇ ಇರುವುದು, ತೀರಾ ಭಾವುಕರಾಗುವುದು, ಸಣ್ಣ ವಿಚಾರಕ್ಕೆ ಅಳುವುದು, ಅತಿಯಾಗಿ ಪ್ರತಿಕ್ರಿಯಿಸುವುದು ಅಥವಾ ಪ್ರತಿಕ್ರಿಯಿಸದೇ ಇರುವುದು. ನಿಮಗೆ ಯಾವತ್ತೂ ಇಷ್ಟವೆನಿಸುತ್ತಿದ್ದ ಕೆಲಸಗಳಲ್ಲಿ, ತಿಂಡಿ-ತಿನಿಸುಗಳಲ್ಲಿ ಅಥವಾ ಯಾವುದೇ ಚಟುವಟಿಕೆಗಳಲ್ಲಿ ನಿರಾಸಕ್ತಿ ಮೂಡುವುದು. ಯೋಚಿಸುವ ಶಕ್ತಿ ಕುಂಠಿತವಾಗುವುದು, ನಿದ್ರಾ ಹೀನತೆ, ಬೇಗನೇ ಸುಸ್ತಾದಂತಾಗುವುದು ಇತ್ಯಾದಿ ಮಾನಸಿಕ ಖಿನ್ನತೆಯ ಲಕ್ಷಣಗಳು.

ಆದರೆ ಇದನ್ನು ಹಾಗೆಯೇ ಬಿಟ್ಟರೆ ಆ ವ್ಯಕ್ತಿ ಅತಿರೇಕದ ನಿರ್ಧಾರ ತೆಗೆದುಕೊಳ್ಳಲು ಮುಂದಾಗಬಹುದು. ಅಂತಹ ಸಂದರ್ಭದಲ್ಲಿ ಸಂಕೋಚವಿಲ್ಲದೇ ನಿಮಗೆ ಏನಾಗುತ್ತಿದೆ ಎನ್ನುವುದನ್ನು ಆಪ್ತರ ಬಳಿ ಹೇಳಿಕೊಂಡು ಪರಿಹಾರ ಕಂಡುಕೊಳ್ಳಬೇಕು. ಆದರೆ ಇದೊಂದು ಮಾನಸಿಕ ಖಾಯಿಲೆ ಎಂದು ಆ ವ್ಯಕ್ತಿಯನ್ನು ದೂರ ತಳ್ಳಿದರೆ ಅದಕ್ಕಿಂತ ದೊಡ್ಡ ಅಪರಾಧ ಇನ್ನೊಂದಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಗರ್ಭಿಣಿಯರು ಕ್ಯಾರೆಟ್‌ನ್ನು ಸೇವಿಸುವುದರಿಂದ ಏನೆಲ್ಲಾ ಪ್ರಯೋಜವಿದೆ ಗೊತ್ತಾ

Health Tips: ನಿಮ್ಮ ಆಹಾರದಲ್ಲಿ ಈ ಬೀಜಗಳನ್ನು ಸೇರಿಸಿ, ಪವರ್‌ಫುಲ್ ಚೇಂಜಸ್‌ ಕಂಡುಕೊಳ್ಳಿ

Heart health: ನಿಮ್ಮ ಹೃದಯ ಜೋರಾಗಿ ಹೊಡೆದುಕೊಳ್ಳುತ್ತಿದೆಯೇ, ನಿರ್ಲ್ಯಕ್ಷ ಬೇಡ

Hair Care: ಕಂಡೀಷನರ್ ಹಚ್ಚುವಾಗ ಈ ತಪ್ಪನ್ನು ಮಾಡಲೇಬೇಡಿ

Skin Care: ಬೇಸಿಗೆ ಕಾಲದಲ್ಲಿ ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬೇಡಿ

ಮುಂದಿನ ಸುದ್ದಿ
Show comments