ಸೊಪ್ಪು ಚಿಗುರೆಲೆಗಳ ಮೇಲೋಗರ ಸಾಂತ್ವನ ನೀಡುತ್ತದೆ

Webdunia
ಮಂಗಳವಾರ, 31 ಅಕ್ಟೋಬರ್ 2023 (15:14 IST)
ಬೇಸಿಗೆ ಬಂತೆಂದರೆ ಉಷ್ಣ ಪ್ರಕೃತಿಯವರ ಪಾಡು ಹೇಳಿ ತೀರದು. ಸೂಕ್ಷ್ಮ ದೇಹ ಪ್ರಕೃತಿಯ ಇಂತಹವರಿಗೆ ಎಲ್ಲಾ ಹವಾಮಾನ ಬದಲಾವಣೆಗಳಲ್ಲೂ ಶಾರೀರಿಕ ಅಸ್ವಾಸ್ಥ್ಯ ಅನುಭವಿಸುತ್ತಾರೆ. 
 
ಇವರಿಗೆ ಸೊಪ್ಪು ಚಿಗುರೆಲೆಗಳ ಮೇಲೋಗರ ಸಾಂತ್ವನ ನೀಡುತ್ತದೆ.ವಿವಿಧ ಮರಗಳ ಚಿಗುರನ್ನು ಸಂಗ್ರಹಿಸಿ ನೀರು-ಚಟ್ನಿಯಾಗಿ ಅರೆದು ಬಳಸುವುದು ಬೇಸಗೆ ಕಾಲದಲ್ಲಿ 
 
ಆರೋಗ್ಯ ಸಂರಕ್ಷಣೆಗೆ ಉಪಯುಕ್ತ. ಪೇರಳೆ,ದಡಸೆ,ಮಾವು ಇತ್ಯಾದಿಗಳನ್ನು ತೆಂಗಿನ ತುರಿ, ಉಪ್ಪು ಇತ್ಯಾದಿಗಳನ್ನು ಸೇರಿಸಿ ಅರೆದು ತಯಾರಿಸುವ ಮೇಲೋಗರ ಅಧರಕ್ಕೂ ಉದರ್ಕೂ 
ಹಿತಕರವಾಗಿರುತ್ತದೆ.
 
ನೀರುಬೀಳುವ ಜವುಗು ನೆಲದಲ್ಲಿ ಸಮೃದ್ಧವಾಗಿ ಬೆಳೆಯುವ ಒಂದೆಲಗ (ತಿಮರೆ) ಗಿಡದ ಸಸ್ಯದ ಎಲೆ ಸಂಗ್ರಹಿಸಿ ನೀರು ಚಟ್ನಿಯಾಗಿ ಅರೆದು ಅನ್ನ , ದೋಸೆ ಇತ್ಯಾದಿಗಳಿಗೆ ಸೇರಿಕೆಯಾಗಿ ಸೇವಿಸುವುದು 
 
ಆಹಾರವೂ ಹೌದು ಔಷಧವೂ ಹೌದು. ಬೇಸಗೆಯಲ್ಲಿ ಒಂದೆಲಗ ನೀರು ಚೆಲ್ಲುವ ಪ್ರದೇಶಗಳಲ್ಲಿ ಮಾತ್ರ ಕಾಣಸಿಗುತ್ತದೆ.ಇದೇ ರೀತಿ ಬಸಲೆ, ಹರಿವೆ ಇತ್ಯಾದಿ ಹಸುರೆಲೆಗಳೂ ಸೇರಿದಂತೆ ವಿವಿಧ ಸೊಪ್ಪು, ಚಿಗುರುಗಳನ್ನು ಸೇವಿಸುವುದರಿಂದ ಆಹಾರದ ರುಚಿಯೂ ಹೆಚ್ಚುತ್ತದೆ. ಆರೋಗ್ಯ ಸಂರಕ್ಷಣೆಯೂ ಆಗುತ್ತದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಊಟವಾದ ತಕ್ಷಣ ವಾಕಿಂಗ್ ಮಾಡ್ತೀರಾ, ಹಾಗಿದ್ದರೆ ಇದನ್ನು ತಪ್ಪದೇ ಓದಿ

ಪಿರಿಯಡ್ಸ್ ನೋವು ಶಮನವಾಗಲು ಓಂ ಕಾಳನ್ನು ಹೇಗೆ ಸೇವಿಸಬೇಕು

ಜ್ವರ ಬಂದ ಮೇಲೆ ನಾಲಿಗೆ ರುಚಿ ಮರಳಲು ಏನು ಮಾಡಬೇಕು ತಪ್ಪದೇ ನೋಡಿ

ಉಗುರು ಕಡಿಯುವ ಅಭ್ಯಾಸ ನಿಲ್ಲಿಸಬೇಕೇ, ಹಾಗಿದ್ದರೆ ಈ ರೀತಿ ಮಾಡಿ

ಪುರುಷರಿಗೆ ಹಲಸಿನ ಬೀಜ ಸೇವನೆಯ ಪ್ರಯೋಜನ ತಿಳಿದರೆ ಖಂಡಿತಾ ಬಿಡಲಾರಿರಿ

ಮುಂದಿನ ಸುದ್ದಿ
Show comments