Webdunia - Bharat's app for daily news and videos

Install App

ತುಳಸಿ ಗಿಡ ಮನೆ ಮುಂದೆ ನೆಡುವುದರ ಲಾಭವೇನು ಗೊತ್ತಾ?

Webdunia
ಬುಧವಾರ, 20 ಸೆಪ್ಟಂಬರ್ 2017 (08:45 IST)
ಬೆಂಗಳೂರು: ಹಿಂದೂ ಸಂಪ್ರದಾಯ ಪಾಲಿಸುವ ಹೆಚ್ಚಿನವರ ಮನೆಯಲ್ಲಿ ತುಳಸಿ ಗಿಡ ಇದ್ದೇ ಇರುತ್ತದೆ. ತುಳಸಿ ಹಲವು ರೋಗಗಳಿಗೆ ಮದ್ದು ಎಂದು ಆಯುರ್ವೇದ ಹೇಳುತ್ತದೆ. ಹೀಗಾಗಿ ತುಳಸಿ ಗಿಡ ಮನೆ ಸುತ್ತ ಇರುವುದರಿಂದ ಆಗುವ ಲಾಭಗಳೇನು ನೋಡೋಣ.

 
ಸೊಳ್ಳೆ ಬರಲ್ಲ
ಸಂಜೆಯಾದರೆ ಸಾಕು ಸೊಳ್ಳೆ ಕಾಟ ಎನ್ನುವವರು ಮನೆಯ ಸುತ್ತ ಹೆಚ್ಚು ಹೆಚ್ಚು ತುಳಸಿ ಗಿಡ ನೆಟ್ಟು ನೋಡಿ. ಇದರ ಸುವಾಸನೆಗೆ ಸೊಳ್ಳೆ ಹೆಚ್ಚು ಸುಳಿಯಲಾರದು. ಇದು ಗಾಳಿಯನ್ನು ನಿರ್ಮಲಗೊಳಿಸುತ್ತದೆ.

ನಿರ್ಮಲ ಗಾಳಿ
ಮೊದಲೇ ಹೇಳಿದಂತೆ ಇದರಿಂದ ಗಾಳಿ ನಿರ್ಮಲವಾಗುತ್ತದೆ. ಬೇರೆ ಸಸ್ಯ ಸಂಕುಲಗಳಿಗೆ ಹೋಲಿಸಿದರೆ ತುಳಸಿ ಹೆಚ್ಚು ಆಮ್ಲಜನಕ ಬಿಡುಗಡೆ ಮಾಡುತ್ತದೆ. ಅಂದಾಜು ದಿನಕ್ಕೆ 20 ಗಂಟೆಗಳ ಕಾಲ ಇದು ಆಮ್ಲಜನಕ ಹೊರಸೂಸುತ್ತವೆ ಎನ್ನಲಾಗಿದೆ. ಅಲ್ಲದೆ ಇದರಿಂದ ಹೊರಹೊಮ್ಮುವ ಸುವಾಸನೆ ನಮ್ಮ ಲಹರಿಯನ್ನು ಉತ್ತಮಗೊಳಿಸುತ್ತದೆ.

ರೋಗಗಳಿಗೆ ರಾಮಬಾಣ
ಹಲವು ಶೀತ ಸಂಬಂಧೀ ರೋಗಗಳಿಗೆ ತುಳಸಿ ಮದ್ದು ಎಂದು ಆಯುರ್ವೇದದಲ್ಲಿ ಹೇಳಲಾಗಿದೆ. ಪ್ರತಿ ನಿತ್ಯ ಇದರ ಎಲೆಯನ್ನು ಜಗಿಯುತ್ತಿದ್ದರೆ ಶೀತ, ಕಫ, ಅಲರ್ಜಿ ಸಮಸ್ಯೆಗಳಿಗೆ ಪರಿಹಾರ ಸಿಗಬಹುದು.

ಕಿಡ್ನಿ ಕಲ್ಲು
ನಿಮಗೆ ಗೊತ್ತೇ? ಮೂತ್ರಪಿಂಡದ ಕಲ್ಲು ಸಮಸ್ಯೆಯಿಂದ ಬಳಲುತ್ತಿರುವವರು ಪ್ರತಿನಿತ್ಯ ತುಳಸಿ ಎಲೆಯ ರಸದ ಜತೆಗೆ ಜೇನು ತುಪ್ಪ ಸೇರಿಸಿ ಕುಡಿಯುತ್ತಿದ್ದರೆ ಒಳ್ಳೆಯದು. ಹಾಗಾಗಿ ಮನೆಯ ಸುತ್ತ ತುಳಸಿ ಗಿಡ ನೆಡುವುದು ಉತ್ತಮ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕಲ್ಲಂಗಡಿ ಹಣ್ಣನ್ನು ಫ್ರಿಡ್ಜ್ ನಲ್ಲಿಟ್ಟು ಸೇವಿಸುತ್ತಿದ್ದೀರೆ ಇದನ್ನು ಓದಿ

ಪೇಟೆಯಿಂದ ತಂದ ಮಾವಿನ ಹಣ್ಣು ಸೇವಿಸುವ ಮೊದಲು ಈ ಟಿಪ್ಸ್ ಫಾಲೋ ಮಾಡಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ಮುಂದಿನ ಸುದ್ದಿ
Show comments