Webdunia - Bharat's app for daily news and videos

Install App

ಒಣದ್ರಾಕ್ಷಿಯನ್ನು ನೆನೆಹಾಕಿ ಸೇವಿಸುವುದರ ಲಾಭ ತಿಳಿಯಿರಿ

Krishnaveni K
ಸೋಮವಾರ, 20 ಮೇ 2024 (12:24 IST)
Photo Courtesy: Instagram
ಬೆಂಗಳೂರು: ನಮ್ಮ ಹಿರಿಯರು ಪ್ರತಿನಿತ್ಯ ಒಣದ್ರಾಕ್ಷಿಯನ್ನು ನೆನೆ ಹಾಕಿ ಸೇವಿಸಲು ಸಲಹೆ ನೀಡುತ್ತಿದ್ದರು. ಆರೋಗ್ಯ ತಜ್ಞರೂ ಇದನ್ನೇ ಹೇಳುತ್ತಾರೆ. ಆದರೆ ಇದನ್ನು ಸೇವಿಸುವುದರಿಂದ ಆಗುವ ಪ್ರಯೋಜನಗಳ ಬಗ್ಗೆ ನೀವು ತಿಳಿದುಕೊಳ್ಳಲೇಬೇಕು.

ಒಣ ದ್ರಾಕ್ಷಿಯಲ್ಲಿ ಕಬ್ಬಿಣದಂಶ ಹೇರಳವಾಗಿದೆ. ಇದು ನಮ್ಮ ದೇಹಕ್ಕೆ ಅತ್ಯಗತ್ಯವಾಗಿ ಬೇಕಾಗುವ ಅಂಶವಾಗಿದೆ. ಹೀಗಾಗಿ ಒಣದ್ರಾಕ್ಷಿಯನ್ನು ಹೇರಳವಾಗಿ ಸೇವಿಸಬೇಕು ಎಂದು ಸಲಹೆ ನೀಡುತ್ತಾರೆ. ಆದರೆ ಅದನ್ನು ಹಾಗೆಯೇ ಸೇವಿಸುವುದಕ್ಕಿಂತ ನೀರಿನಲ್ಲಿ ನೆನೆ ಹಾಕಿ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನೀರು ಸಮೇತ ಸೇವಿಸುವುದು ಉತ್ತಮ.

ಖಾಲಿ ಹೊಟ್ಟೆಯಲ್ಲಿ ಒಣದ್ರಾಕ್ಷಿ ನೀರನ್ನು ಸೇವಿಸುವುದರಿಂದ ಮಲಬದ್ಧತೆಯ ಸಮಸ್ಯೆಗಳು ದೂರವಾಗುತ್ತದೆ. ಅದೇ ರೀತಿ ಈ ಪಾನೀಯವನ್ನು ಸೇವಿಸುವುದರಿಂದ ನಮ್ಮ ದೇಹಕ್ಕೆ ಸಾಕಷ್ಟು ಕಬ್ಬಿಣದಂಶ ಸೇರ್ಪಡೆಯಾಗುತ್ತದೆ. ಇದರಿಂದ ದೇಹದಲ್ಲಿ ಕಬ್ಬಿಣದಂಶದ ಕೊರತೆ ಬಾರದು ಮತ್ತು ಚರ್ಮವೂ ಹೊಳಪಾಗುತ್ತದೆ.

ಪ್ರತಿನಿತ್ಯ ರಾತ್ರಿ ಮಲಗುವ ಮುನ್ನ 8-10 ಒಣದ್ರಾಕ್ಷಿಯನ್ನು ಚೆನ್ನಾಗಿ ತೊಳೆದು ಶುದ್ಧ ನೀರಿನಲ್ಲಿ ನೆನೆ ಹಾಕಿ. ಬೆಳಿಗ್ಗೆ ಇದು ಮತ್ತಷ್ಟು ಮೃದುವಾಗಿರುತ್ತದೆ. ಇದನ್ನು ಚೆನ್ನಾಗಿ ಹಿಚುಕಿಕೊಂಡು ನೀರು ಸಮೇತ ಹಾಗೆಯೇ ಕುಡಿಯಿರಿ. ಇದು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಹೆಚ್ಚುತ್ತಿರುವ ಡೆಂಗ್ಯೂ ತಡೆಯಲು ಈ ಸಲಹೆಗಳನ್ನು ಪಾಲಿಸಿ

ಮಳೆ ಸುರಿಯುತ್ತಿರುವಾಗ ಈ ತಿಂಡಿ ಕೊಟ್ರೇ ಹತ್ತು ಪ್ಲೇಟ್ ಬೇಕಾದ್ರು ತಿನ್ಬೋದು

ಅಂತಾರಾಷ್ಟ್ರೀಯ ಯೋಗ ದಿನ ಹುಟ್ಟಿಕೊಂಡಿದ್ದು ಹೇಗೆ

ವಿಶ್ವ ಸಂಗೀತ ದಿನ 2024: ಸಂಗೀತದಿಂದ ಆಗುವ ಅದ್ಭುತ ಪ್ರಯೋಜನಗಳು

ಚಿಯಾ ಬೀಜಗಳನ್ನು ಸೇವಿಸಿದರೆ ಎಷ್ಟೊಂದು ಲಾಭವಾಗುತ್ತದೆ ಗೊತ್ತಾ

ಮುಂದಿನ ಸುದ್ದಿ
Show comments