Webdunia - Bharat's app for daily news and videos

Install App

Red Banana: ಖಿನ್ನತೆ ಇರುವವರು ಕೆಂಪು ಬಾಳೆ ಹಣ್ಣು ಸೇವಿಸಿ ನೋಡಿ

Krishnaveni K
ಗುರುವಾರ, 22 ಫೆಬ್ರವರಿ 2024 (10:20 IST)
File photo
ಬೆಂಗಳೂರು: ಸಾಮಾನ್ಯವಾಗಿ ನಾವು ಬಾಳೆ ಹಣ್ಣು ಎಂದ ತಕ್ಷಣ ಏಲಕ್ಕಿ, ಪಚ್ಚೆ ಬಾಳೆ ಹಣ‍್ಣು ಅಥವಾ ಕೇರಳ ಬಾಳೆ ಹಣ್ಣನ್ನು ಆಯ್ಕೆ ಮಾಡಿಕೊಳ್ಳುತ್ತೇವೆ. ಆದರೆ ಎಲ್ಲಕ್ಕಿಂತ ಹೆಚ್ಚು ಕೆಂಪು ಬಾಳೆ ಹಣ್ಣಿನಲ್ಲಿ ಹೆಚ್ಚು ಪೋಷಕಾಂಶವಿರುತ್ತದೆ.

ಕೆಂಪು ಬಾಳೆ ಹಣ್ಣಿನಲ್ಲಿ ವಿಟಮಿನ್ ಬಿ6 ಹೇರಳವಾಗಿದೆ. ಇದು ನಿಮಗೆ ಅನೇಕ ಆರೋಗ್ಯಕರ ಉಪಯೋಗಗಳನ್ನು ನೀಡುತ್ತದೆ. ಹೊರಗಿನಿಂದ ಸಿಪ್ಪೆ ಕೆಂಪಗಾಗಿದ್ದರೂ ಒಳಗಿನ ತಿರುಳಿನ ರುಚಿ ಇತರೆ ಬಾಳೆ ಹಣ್ಣಿನಂತೇ ಇರುತ್ತದೆ. ಇದು ಮಧುಮೇಹಿಗಳಿಗೆ, ಪುರುಷರಲ್ಲಿ ಬಂಜೆತನ ನಿವಾರಣೆ ಅತ್ಯುತ್ತಮವಾಗಿದೆ. ಇದರಲ್ಲಿ ಕ್ಯಾಲ್ಶಿಯಂ ಅಂಶವೂ ಹೇರಳವಾಗಿದ್ದು, ಎಲುಬಿನ ಸಂರಕ್ಷಣೆಗೂ ಅತ್ಯುತ್ತಮವಾಗಿದೆ. ಅಲ್ಲದೆ ನಮ್ಮ ರೋಗ ನಿರೋಧಕ ಶಕ್ತಿಯನ್ನೂ ಹೆಚ್ಚಿಸುವ ಸಾಮರ್ಥ್ಯ ಹೊಂದಿದೆ. ಅಲ್ಲದೆ, ರಕ್ತ ಶುದ್ಧೀಕರಣ ಮಾಡುವ ಗುಣವನ್ನೂ ಹೊಂದಿರುತ್ತದೆ.

ಖಿನ್ನತೆ ದೂರ ಮಾಡುತ್ತದೆ
ಕೆಂಪು ಬಾಳೆಹಣ್ಣಿನಲ್ಲಿರುವ ವಿಟಮಿನ್ ಬಿ6 ಅಂಶ ಹಾರ್ಮೋನ್ ಒಂದನ್ನು ಬಿಡುಗಡೆ ಮಾಡಲು ಸಹಾಯ ಮಾಡುತ್ತದೆ. ಇದು ನಮ್ಮ ಮನಸ್ಸನ್ನು ಸಂತೋಷವಾಗಿರುವಂತೆ ನೋಡಿಕೊಳ್ಳುತ್ತದೆ. ಹೀಗಾಗಿ ಮಾನಸಿಕ ಒತ್ತಡ, ಖಿನ್ನತೆಯಿಂದ ಬಳಲುತ್ತಿರುವವರು ತಪ್ಪದೇ ಕೆಂಪು ಬಾಳೆ ಹಣ್ಣು ಸೇವಿಸಬೇಕು.

ಅಷ್ಟೇ ಅಲ್ಲದೆ, ಹೃದಯದ ಆರೋಗ್ಯಕ್ಕೂ ಕೆಂಪು ಬಾಳೆ ಹಣ್ಣು ಉತ್ತಮ. ಅಲ್ಲದೆ ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುವ ಸಾಮರ್ಥ್ಯ ಕೆಂಪು ಬಾಳೆಹಣ್ಣಿಗಿದೆ. ಇದರಲ್ಲಿ ನೈಸರ್ಗಿಕ ಸಕ್ಕರೆಯಿದ್ದು, ಮಧುಮೇಹಿಗಳೂ ಯಾವುದೇ ಭಯವಿಲ್ಲದೇ ಸೇವಿಸಬಹುದಾಗಿದೆ. ಒಟ್ಟಾರೆಯಾಗಿ ನಮ್ಮ ದೇಹದ ಎಲ್ಲಾ ರೀತಿಯ ಆರೋಗ್ಯ ಸಮಸ್ಯೆಗಳಿಗೂ ಪರಿಹಾರ ನೀಡುವ ಸಾಮರ್ಥ್ಯ ಹೊಂದಿರುವ ಪೌಷ್ಠಿಕ ಹಣ್ಣು ಇದಾಗಿದೆ.

 

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಖಾಲಿ ಹೊಟ್ಟೆಯಲ್ಲಿ ಜಾಗಿಂಗ್ ಮಾಡುವಾಗ ಅಡ್ಡಪರಿಣಾಮಗಳ ಬಗ್ಗೆ ಎಚ್ಚರಿಕೆಯಿರಲಿ

ಪುದೀನಾ ಸೊಪ್ಪು ಬಳಸಿ ಕಲೆ ನಿವಾರಿಸಲು ಹೀಗೆ ಮಾಡಿ

ದೇಸೀ ಸನ್ ಸ್ಕ್ರೀನ್ ಲೋಷನ್ ಮನೆಯಲ್ಲಿಯೇ ಮಾಡಿ

ಸೆಕೆಗಾಲದಲ್ಲಿ ಪದೇ ಪದೇ ಕೋಲ್ಡ್ ಡ್ರಿಂಕ್ಸ್ ಸೇವನೆ ಮಾಡುತ್ತಿದ್ದರೆ ಇದನ್ನು ತಪ್ಪದೇ ಓದಿ

ಅಸ್ತಮಾ ರೋಗಿಗಳು ಹಾಲು ಹೇಗೆ ಸೇವಿಸಬೇಕು ಮತ್ತು ಬೆಸ್ಟ್ ಟೈಮ್ ಯಾವುದು ತಿಳಿಯಿರಿ

ಮುಂದಿನ ಸುದ್ದಿ
Show comments