Webdunia - Bharat's app for daily news and videos

Install App

ಮಜ್ಜಿಗೆ ಕುಡಿಯುವುದರಿಂದ ಇಷ್ಟೊಂದು ಲಾಭವೇ?!

Webdunia
ಮಂಗಳವಾರ, 12 ಡಿಸೆಂಬರ್ 2017 (08:10 IST)
ಬೆಂಗಳೂರು: ಊಟದ ಕೊನೆಯಲ್ಲಿ ಒಂಚೂರು ಮಜ್ಜಿಗೆ ಕುಡಿಯುವುದು ಸಾಮಾನ್ಯ. ಹೀಗೆ ಮಜ್ಜಿಗೆ ಕುಡಿಯುವುದರಿಂದ ಎಷ್ಟೊಂದು ಆರೋಗ್ಯಕರ ಲಾಭವಿದೆ ಗೊತ್ತಾ?
 

ಮಜ್ಜಿಗೆ ದಾಹ ತಣಿಸುವುದಷ್ಟೇ ಅಲ್ಲ, ಇದರಿಂದ ತೆರೆದ ಗಾಯ, ಬಾಯಿ ಹುಣ್ಣು, ರಕ್ತಸ್ರಾವ ನಿಯಂತ್ರಿಸಬಹುದು. ಆಯುರ್ವೇದದಲ್ಲಿ ಪಂಚಕರ್ಮ ಚಿಕಿತ್ಸೆಯಲ್ಲೂ ಮಜ್ಜಿಗೆಯ ಬಳಕೆಯಿದೆಯಂತೆ.

ಮಜ್ಜಿಗೆಯಲ್ಲಿ ಖನಿಜಾಂಶಗಳು ಸಾಕಷ್ಟು ಇದೆ. ಹೀಗಾಗಿ ಅನಿಮೀಯಾ, ಮಾನಸಿಕ ಒತ್ತಡ ನಿಭಾಯಿಸುವ ಗುಣವಿದೆ. ಹಾಗೆಯೇ ಮಜ್ಜಿಗೆಯಲ್ಲಿರುವ ಪೊಟೇಶಿಯಂ ಅಂಶ ರಕ್ತದೊತ್ತಡ ಕಡಿಮೆಗೊಳಿಸುತ್ತದೆ.

ಅಷ್ಟೇ ಅಲ್ಲ, ಮಜ್ಜಿಗೆ ರಕ್ತನಾಳಗಳಲ್ಲಿ ಅಂಟಿಕೊಂಡಿರುವ ಕೊಬ್ಬಿನಂಶ ಕರಗಿಸುತ್ತದೆ. ಹಾಗೆಯೇ ಹೊಟ್ಟೆಯುರಿ, ಎದೆಯುರಿ, ಅಜೀರ್ಣವಾದರೂ ಮಜ್ಜಿಗೆ ಸೇವಿಸಬಹುದು. ಮಜ್ಜಿಗೆಯನ್ನು ನಿಂಬೆ ರಸದೊಂದಿಗೆ ಸೇವಿಸುವುದರಿಂದ ತಲೆ ನೋವು ಮತ್ತು ರಕ್ತದೊತ್ತಡ ನಿವಾರಣೆಯಾಗುತ್ತದೆ.

ಮಜ್ಜಿಗೆಗೆ ಶುಂಠಿ ರಸ ಮತ್ತು ಉಪ್ಪು ಸೇರಿಸಿ ಸೇವಿಸುವುದರಿಂದ ವಾಂತಿ ಉಪಶಮನವಾಗುತ್ತದೆ. ಸಕ್ಕರೆ ಖಾಯಿಲೆ ಇರುವವರಂತೂ ಪ್ರತಿದಿನ ಮಜ್ಜಿಗೆ ಕುಡಿದರೆ ಉತ್ತಮ. ಮಜ್ಜಿಗೆಗೆ ಎಷ್ಟೊಂದು ಶಕ್ತಿಯಿದೆ ನೋಡಿ..!

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

Beetal leaves: ಈ ಆರೋಗ್ಯ ಸಮಸ್ಯೆಯಿದ್ದರೆ ಪ್ರತಿನಿತ್ಯ ವೀಳ್ಯದೆಲೆ ಸೇವಿಸಿ

ಹೀಗೇ ಮಾಡಿದರೆ ಮಕ್ಕಳಲ್ಲಿ ಕಟ್ಟುನಿಟ್ಟಾಗಿರದೆ ಶಿಸ್ತುಬದ್ಧವಾಗಿ ಬೆಳೆಸಬಹುದು

Men health: ಪುರುಷರಲ್ಲಿ ಬಂಜೆತನ ನಿವಾರಣೆಯಾಗಬೇಕೆಂದರೆ ಇದೊಂದು ಜ್ಯೂಸ್ ಸಾಕು

Baby tips: ಚಿಕ್ಕ ಮಕ್ಕಳಿಗೆ ತಲೆನೋವಾಗುತ್ತಿದ್ದರೆ ಇದುವೇ ಬೆಸ್ಟ್ ಮೆಡಿಸಿನ್

ನಿಮ್ಮ ಮಕ್ಕಳ ಶಬ್ದ ಭಂಡಾರವನ್ನು ಹೆಚ್ಚಿಸಲು ಇಲ್ಲಿದೆ ಕೆಲ ಟಿಪ್ಸ್‌

ಮುಂದಿನ ಸುದ್ದಿ
Show comments