ಒಮಿಕ್ರಾನ್ ವಿರುದ್ಧ ಹೋರಾಡಲು ಇಲ್ಲಿದೆ ಉಪಾಯ

Webdunia
ಮಂಗಳವಾರ, 4 ಜನವರಿ 2022 (18:39 IST)
ಕೊರೊನಾ ಲಸಿಕೆಯನ್ನು ಪಡೆಯುವುದು ಮತ್ತು ದೇಹದ ಪ್ರತಿರಕ್ಷಣಾ ವ್ಯವಸ್ಥೆಯನ್ನು ಪರಿಣಾಮಕಾರಿಯಾಗಿ ಹೆಚ್ಚಿಸುವುದು ಬಹಳ ಮುಖ್ಯ.

ಆಗ ಮಾತ್ರ ವೈರಸ್ಗಳ ವಿರುದ್ಧ ನಾವು ಹೋರಾಡಲು ಸಾಧ್ಯ. ಕೊವಿಡ್-19 ಸೋಂಕಿನಿಂದ ದೂರ ಇರಲು ಆಹಾರ, ವ್ಯಾಯಾಮ, ನಿದ್ರೆ ಮತ್ತು ಹೆಚ್ಚು ಸಕ್ರಿಯ ಜೀವನಶೈಲಿಯೊಂದಿಗೆ ಕಾಲ ಕಳೆಯುವುದು ಬಹಳ ಮುಖ್ಯ ಎಂದು ತಜ್ಞರು ಸಲಹೆ ನೀಡಿದ್ದಾರೆ.

ಟಿ-ಕೋಶಗಳು ಸೋಂಕಿನಿಂದ ದೂರ ಇರಲು ಸಹಾಯ ಮಾಡುತ್ತದೆ ಮತ್ತು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಹೀಗಾಗಿ ಕೊವಿಡ್- 19ನ ಹೊಸ ತಳಿಗಳಿಂದ ದೂರ ಇರಲು ಟಿ- ಕೋಶಗಳು ಪ್ರಮುಖ ಪಾತ್ರವಾಹಿಸುತ್ತದೆ.

ವಿಟಮಿನ್ ಡಿ

ಪ್ರತಿರಕ್ಷಣಾ ವ್ಯವಸ್ಥೆ, ಸೋಂಕು ತಡೆಗಟ್ಟುವಿಕೆ ಮತ್ತು ಚೇತರಿಕೆಗೆ ವಿಟಮಿನ್ ಡಿ ಅತ್ಯಗತ್ಯ. ವಿಟಮಿನ್ ಡಿ ಹೆಚ್ಚಳಕ್ಕೆ ಸಾಕಷ್ಟು ಸೂರ್ಯನ ಬೆಳಕನ್ನು ಪಡೆಯಿರಿ ಎಂದು ಕುಟಿನ್ಹೋ ಹೇಳಿದ್ದಾರೆ.

ನಿದ್ರೆ

ನಿದ್ರೆ ಪಡೆಯುವುದು ಬಹಳ ಮುಖ್ಯ. ಏಕೆಂದರೆ ಇದು ಮರುದಿನ ಹೆಚ್ಚು ಶಕ್ತಿ ಮತ್ತು ಚೈತನ್ಯದಿಂದ ಇರಲು ಸಹಾಯ ಮಾಡುತ್ತದೆ. ಜತೆಗೆ ರೋಗನಿರೋಧಕ ಶಕ್ತಿ ನಮ್ಮಲ್ಲಿ ಹೆಚ್ಚಾಗಲು ನಿದ್ರೆ ಬಹಳ ಮುಖ್ಯ. ಒಟ್ಟಾರೆ ದೇಹ ಮತ್ತು ಮನಸ್ಸನ್ನು  ಪುನರ್ಯೌವನಗೊಳಿಸುತ್ತದೆ.

ವ್ಯಾಯಾಮ

ಮಿತವಾಗಿ ವ್ಯಾಯಾಮ ಮಾಡುವುದು, ಆಹಾರ ಸೇವನೆ ಮತ್ತು ಸಕ್ರಿಯವಾಗಿರುವುದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಬೆಳ್ಳುಳ್ಳಿ, ಶುಂಠಿ, ಗರಂ ಮಸಾಲಾ, ಅರಿಶಿಣ, ಜೇನುತುಪ್ಪ, ತುಳಸಿ, ನೆಲ್ಲಿಕಾಯಿ, ಅಮೃತಬಳ್ಳಿ, ಜೊತೆಗೆ ಉತ್ತಮ ಆರೋಗ್ಯಕ್ಕಾಗಿ ವಿಟಮಿನ್ ಸಿ ಭರಿತ ಆಹಾರಗಳು ಮತ್ತು ಸತುಭರಿತ ಆಹಾರಗಳನ್ನು ತಿನ್ನಿ ಎಂದು ತಜ್ಞರು ಶಿಫಾರಸು ಮಾಡುತ್ತಾರೆ.

ಜೀವನಶೈಲಿ

ಉತ್ತಮ ಜೀವನಶೈಲಿಯು ಆರೋಗ್ಯದ ದೃಷ್ಟಿಯಿಂದ ಬಹಳ ಮುಖ್ಯ. ಆದಷ್ಟು ಧೂಮಪಾನ, ಮದ್ಯಪಾಲದಿಂದ ದೂರ ಇರಿ. ಉತ್ತಮ ಜೀವನಶೈಲಿಯನ್ನು ಮೈಗೂಡಿಸಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಅಡುಗೆಮನೆಯಲ್ಲಿಯೇ ಇದೆ ದಿನನಿತ್ಯ ಕಾಡುವ ಗ್ಯಾಸ್ಟ್ರಿಕ್‌ಗೆ ರಾಮಬಾಣ

ಟೀ, ಕಾಫಿ ಬದಲು ಮಕ್ಕಳಿಗೆ ಈ ಪಾನೀಯ ನೀಡಿ

ಈ ಔಷಧಿಗಳನ್ನು ಎಕ್ಸಪೈರಿ ಡೇಟ್ ಆದ ಮೇಲೆ ತಗೊಂಡ್ರೆ ಜೀವಕ್ಕೇ ಕುತ್ತು video

ತಲೆಹೊಟ್ಟು ನಿವಾರಣೆಗೆ ಸರಳ ಮನೆಮದ್ದು ಇಲ್ಲಿದೆ

ಚಳಿಗಾಲದಲ್ಲಿ ಹಣ್ಣು ಸೇವನೆ ಮಾಡುವಾಗ ನೆನಪಿಡಬೇಕಾದ ವಿಚಾರಗಳು

ಮುಂದಿನ ಸುದ್ದಿ
Show comments