Webdunia - Bharat's app for daily news and videos

Install App

ಗಂಟಲ ಕಿರಿಕಿರಿಯಿಂದ ಮಾತನಾಡಲು ಕಷ್ಟವಾಗುತ್ತಿದ್ದರೆ ಹೀಗೆ ಮಾಡಿ

Webdunia
ಬುಧವಾರ, 13 ಫೆಬ್ರವರಿ 2019 (08:08 IST)
ಬೆಂಗಳೂರು : ಕೆಲವೊಮ್ಮೆ ಧೂಳು ಇದ್ದ ಕಡೆ ಹೋದಾಗ ಗಂಟಲಿನಲ್ಲಿ ಕಿರಿಕಿರಿ ಗಂಟಲಿನ ಸಮಸ್ಯೆ ಹೆಚ್ಚಾಗಿ ಬರುತ್ತದೆ. ಇದರಿಂದ ಮಾತನಾಡಲು ಕಷ್ಟವಾಗುತ್ತದೆ. ಈ ಗಂಟಲ ಸಮಸ್ಯೆಯನ್ನು ಹೋಗಲಾಡಿಸಲು ಹೀಗೆ ಮಾಡಿ.


ಬಿಸಿನೀರಿಗೆ ಸ್ವಲ್ಪ ಹಸಿಶುಂಠಿಯನ್ನು ಹಾಕಿ ಕುದಿಸಿ ಸೋಸಿ. ಈ ಟೀಯನ್ನು ದಿನಕ್ಕೆರಡು ಕಪ್‌ನಂತೆ ಕುಡಿಯಿರಿ. ಗಂಟಲ ಬೇನೆಗೆ ತಕ್ಷ ಣದ ಪರಿಹಾರ ನೀಡಲು ಈ ವಿಧಾನ ಉತ್ತಮವಾಗಿದೆ. ಒಂದು ವೇಳೆ ಕಫ ಗಟ್ಟಿಯಾಗಿದ್ದಂತೆ ಅನ್ನಿಸಿದರೆ ಈ ಟೀ ಯಲ್ಲಿ ಒಂದು ಚಮಚ ಜೇನುತುಪ್ಪ ಬೆರೆಸಿ ಕುಡಿಯಿರಿ


ಎರಡು ಲವಂಗವನ್ನು ಬಾಯಿಗೆ ಹಾಕಿಕೊಂಡು ಅದು ಮೆತ್ತಗೆ ಆಗುವ ತನಕ ಜಗಿಯುತ್ತಾ ಇರಿ. ಜಗಿದ ಬಳಿಕ ಇದನ್ನು ನುಂಗಿ. ಗಂಟಲು ನೋವು ನಿವಾರಣೆ ಇದು ಉತ್ತಮ.


ಒಂದು ಲೀಟರ್‌ ನೀರಿಗೆ 2 ಮೆಂತೆಕಾಳುಗಳನ್ನು ಹಾಕಿ ಚಿಕ್ಕ ಉರಿಯಲ್ಲಿ ಕುದಿಸಿ. ನೀರು ಕುದಿಯುತ್ತಿದ್ದಂತೆಯೇ ಉರಿ ಆರಿಸಿ ನೀರನ್ನು ಹಾಗೇ ತಣಿಯಲು ಬಿಡಿ. ಈ ನೀರಿನಿಂದ ಬಾಯಿಯನ್ನು ದಿನಕ್ಕೆ ಎರಡು ಬಾರಿ ಅಥವಾ ಮೂರು ಬಾರಿ ಗಂಟಲಿನಲ್ಲಿ ಗಳಗಳ ಮಾಡಿ ಮುಕ್ಕಳಿಸುತ್ತಿರಿ. ಹೀಗೆ ಮಾಡಿದರೆ ಗಂಟಲ ಬೇನೆ ಶೀಘ್ರವಾಗಿ ಕಡಿಮೆಯಾಗುತ್ತದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.


 

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕಲ್ಲಂಗಡಿ ಹಣ್ಣನ್ನು ಫ್ರಿಡ್ಜ್ ನಲ್ಲಿಟ್ಟು ಸೇವಿಸುತ್ತಿದ್ದೀರೆ ಇದನ್ನು ಓದಿ

ಪೇಟೆಯಿಂದ ತಂದ ಮಾವಿನ ಹಣ್ಣು ಸೇವಿಸುವ ಮೊದಲು ಈ ಟಿಪ್ಸ್ ಫಾಲೋ ಮಾಡಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ಮುಂದಿನ ಸುದ್ದಿ
Show comments