Webdunia - Bharat's app for daily news and videos

Install App

ದಾರಿಯಲ್ಲಿ ಕಾಣಸಿಗುವ ಉತ್ತರಣೆ ಗಿಡದಲ್ಲಿರುವ ಔಷಧಿಯ ಗುಣಗಳನ್ನು ತಿಳಿಬೇಕಾ…?

Webdunia
ಗುರುವಾರ, 31 ಮೇ 2018 (06:23 IST)
ಬೆಂಗಳೂರು : ಉತ್ತರಣೆ ಗಿಡವನ್ನು ನಾವು ಹಲವು ಕಡೆಗಳಲ್ಲಿ ಕಂಡಿರುತ್ತೇವೆ. ಇದು ನಾವು ದಾರಿಯಲ್ಲಿ. ಪೊದೆಗಳಲ್ಲಿ ಬೆಳೆಯುತ್ತದೆ. ಎಲ್ಲೆಂದರಲ್ಲಿ ಹದವಾಗಿ , ಸೋಮಪಾಗಿ ಬೆಳೆಯುವ ಈ ಉತ್ತರಣೆ ಗಿಡ ಹಲವು ರೋಗಗಳನ್ನು, ಸಮಸ್ಯೆಗಳನ್ನು  ನಿವಾರಿಸುತ್ತದೆಯಂತೆ.


*ಜಾಂಡೀಸ್ ನಿವಾರಣೆಗೆ : 10 ಗ್ರಾಂ ಉತ್ತರಣೆ ಬೀಜಗಳನ್ನು ರಾತ್ರಿ ನೆನೆಹಾಕಿ ಬೆಳೆಗ್ಗೆ ಚೆನ್ನಾಗಿ ರುಬ್ಬಿ, ಮಜ್ಜಿಗೆಯೊಂದಿಗೆ ಸೇವಿಸಬೇಕು. (ಒಂದು ವಾರ) ಪಥ್ಯ: ತಿಳಿಸಾರು, ಅನ್ನ, ಎಣ್ಣೆ ಸೇವಿಸಕೂಡದು.

*ಸರ್ಪ ವಿಷ ನಿವಾರಣೆಗೆ: ಉತ್ತರಣೆಯ ಬೇರು, ಕರಿಮೆಣಸು, ಎರಡನ್ನು ಸಮ ಪ್ರಮಾಣದಲ್ಲಿ ಚೂರ್ಣಿಸಿಕೊಂಡು, ಒಂದು ಚಮಚದಷ್ಟು ನುಣ್ಣನೆಯ ಪುಡಿಯನ್ನು ನೀರಿನೊಂದಿಗೆ ಬೆರೆಸಿ ಕುಡಿಸಬೇಕು. ವಿಷವು ನಿವಾರಣೆಯಾಗುವವರೆಗೂ ಆಗಾಗ ಕುಡಿಸುತ್ತಿರಬೇಕು.

*ಬಂಜೆತನದಲ್ಲಿ: ಉತ್ತರಾಣಿ ಗಿಡದ ಹೂಗೊಂಚಲುಗಳನ್ನು ತಂದು ಎಮ್ಮೆ ಹಾಲಿನಲ್ಲಿ ನಯವಾಗಿ ಅರೆದು ಬಟ್ಟೆಯಲ್ಲಿ ಶೋಧಿಸುವುದು. ದಿವಸಕ್ಕೆ 10 ಗ್ರಾಂನಷ್ಟು ಹಾಲನ್ನು ಮುಟ್ಟಾಗಿರುವಾಗ ಐದು ದಿವಸ ಸೇವಿಸುವುದು. ಹಾಲು ಅನ್ನ ಪಥ್ಯ, ಶಾಂತಚಿತ್ತರಾಗಿರುವುದು. ಹೀಗೆ ಕ್ರಮವಾಗಿ ಮೂರು ಮುಟ್ಟಿನಲ್ಲಿ ಮಾಡಬೇಕು.

*ಇಸಬಿಗೆ : ಕೆಂಪು ಉತ್ತರಾಣಿ ಗಿಡವನ್ನು ಬೇರು ಸಹಿತ ತಂದು, ಸುಟ್ಟು ಬೂದಿ ಮಾಡುವುದು. 20 ಗ್ರಾಂ ಈ ಬೂದಿಗೆ 5 ಗ್ರಾಂ ವೀಳೆದೆಲೆಗೆ ಹಾಕುವ ಸುಣ್ಣ ಮತ್ತು 5 ಗ್ರಾಂ ಅರಿಶಿಣದ ಪುಡಿ ಹಾಕಿ ಚೆನ್ನಾಗಿ ಮಿಶ್ರ ಮಾಡಿ, ಶೋಧಿಸಿದ ಗೋಮೂತ್ರದಲ್ಲಿ ಅರೆದು ಹಚ್ಚುವುದು.

*ಪೆಟ್ಟು ತಾಗಿ, ರಕ್ತ ಸೋರುತ್ತಿದ್ದರೆ:  ಕೆಂಪು ಉತ್ತರಾಣಿ ಗಿಡದ ಸೊಪ್ಪಿನ ರಸವನ್ನು ಗಾಯದ ಮೇಲೆ ಹಿಂಡುವುದು. ತಕ್ಷಣ ರಕ್ತಸ್ರಾವ ನಿಲ್ಲುವುದು ಮತ್ತು ಗಾಯವು ಕ್ರಮೇಣ ವಾಸಿಯಾಗುವುದು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ                       

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ರಕ್ತದೊತ್ತಡ ಕಡಿಮೆ ಮಾಡಲು ಈ ಒಂದು ಸಿಂಪಲ್ ಜ್ಯೂಸ್ ಸಾಕು

ತಲೆಕೂದಲಿನ ಸಂರಕ್ಷಣೆಗೆ ತೆಂಗಿನ ಹಾಲು ಬಳಸಿ ಈ ರೀತಿ ಮಾಡಿ

ಮುಂದಿನ ಸುದ್ದಿ
Show comments