Webdunia - Bharat's app for daily news and videos

Install App

ಹಲವು ಸಮಸ್ಯೆಗೆ ರಾಮಬಾಣ ಈ ಗರಿಕೆ ಹುಲ್ಲು

Webdunia
ಮಂಗಳವಾರ, 15 ಮೇ 2018 (06:00 IST)
ಬೆಂಗಳೂರು : ಗಣಪನಿಗೆ ಪ್ರಿಯವಾದ ಗರಿಕೆ ಹುಲ್ಲು ಆರೋಗ್ಯದ ದೃಷ್ಟಿಯಿಂದಲೂ ಒಳ್ಳೆಯದು. ಹಾಗೆಂದು ಹಸಿ ಹುಲ್ಲನ್ನೇ ತಿನ್ನಬೇಕಾಗಿಲ್ಲ. ಏನು ಮಾಡಬಹುದು ನೋಡೋಣ.

*ಬೇರೆ ಬೇರೆ ತೊಂದರೆಗಳಿಗೆ ನಾವು ಡಾಕ್ಟರ್ ಹೇಳಿದ ಮಾತ್ರೆಯನ್ನು ತೆಗೆದುಕೊಂಡಿರುತ್ತೇವೆ. ಖಾಯಿಲೆ ವಾಸಿಯಾದರೂ ಮಾತ್ರೆಯ ಅಡ್ಡ ಪರಿಣಾಮ ಸ್ವಲ್ಪವಾದರೂ ಕಂಡುಬರುತ್ತದೆ. ಇಂತಹ ಸಮಯದಲ್ಲಿ ಒಂದು ಹಿಡಿ ಗರಿಕೆಯನ್ನು ಎರಡು ಲೋಟ ನೀರಿನಲ್ಲಿ ಹಾಕಿ, ಆ ನೀರು ಸ್ವಲ್ಪ ಬತ್ತುವವರೆಗೆ ಕುದಿಸಿ ನಂತರ ಆ ನೀರನ್ನು ಕುಡಿದರೆ ಹಳೆಯ ಔಷಧಿಗಳ ಅವಶೇಷಗಳೆಲ್ಲ ಶರೀರದಿಂದ ಮಾಯವಾಗುತ್ತದೆ. ಒಂದು ತಿಂಗಳವರೆಗೆ ಈ ಕಷಾಯವನ್ನು ಕುಡಿಯಬೇಕಾಗುತ್ತದೆ.

 

*ಗರಿಕೆ ಮತ್ತು ಸ್ವಲ್ಪ ಜೀರಿಗೆಯನ್ನು ನೀರಿನಲ್ಲಿ ಕುದಿಸಿ ಆ ಕಷಾಯವನ್ನು ಕುಡಿದರೆ ವಾಯುವಿನಿಂದಾಗುವ ಬೆನ್ನು ಮತ್ತು ಸೊಂಟನೋವು ಕಡಿಮೆಯಾಗುತ್ತದೆ . ಈ ಕಷಾಯವನ್ನು ಸುಮಾರು ಒಂದು ತಿಂಗಳ ಕಾಲ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸುವುದರಿಂದ ಅಜೀರ್ಣದ ಸಮಸ್ಯೆಗಳು , ಹಸಿವಿಲ್ಲದಿರುವುದು ಎಲ್ಲದಕ್ಕೂ ಒಳ್ಳೆಯದು. ಅನಗತ್ಯ ಕೊಲೆಸ್ಟರಾಲ್ ಕೂಡಾ ಕಡಿಮೆಯಾಗುತ್ತದೆ .

 

*ತೆಂಗಿನ ಎಣ್ಣೆಯಲ್ಲಿ ಗರಿಕೆಯನ್ನು ಕುದಿಸಿ ಆರಿಸಿ ತಲೆಗೆ ಹಚ್ಚಿದರೆ, ಶರೀರದ ಉಷ್ಣದಿಂದಾಗುವ ತಲೆಹೊಟ್ಟು ಕಡಿಮೆಯಾಗುವುದು.
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಕೂತು ಕೂತು ಹೊಟ್ಟೆ ಬೆಳೆಯುತ್ತಿದೆಯೇ, ಏನು ಮಾಡಬೇಕು

ಮೊಬೈಲ್ ನೋಡಿ ಕಣ್ಣು ನೋವು ಬರ್ತಿದೆಯಾ, ಏನು ಮಾಡಬೇಕು

ಪುರುಷರು ತೊಡೆ ಮೇಲೆ ಲ್ಯಾಪ್ ಟಾಪ್ ಇಟ್ಟುಕೊಳ್ಳುವುದು ಎಷ್ಟು ಅಪಾಯಕಾರಿ ಗೊತ್ತಾ

ತರಕಾರಿ ರಾತ್ರಿ ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟು ಮರುದಿನ ಬಳಸಿದರೆ ಹಾನಿಕಾರಕವೇ, ಈ ಟಿಪ್ಸ್ ತಪ್ಪದೇ ಪಾಲಿಸಿ

ಊಟವಾದ ತಕ್ಷಣ ಏನಾದರೂ ತಿನ್ನಬೇಕು ಎನಿಸುವುದು ಯಾಕೆ, ತಿಂದರೆ ಆರೋಗ್ಯಕ್ಕೆ ಸಮಸ್ಯೆಯೇ

ಮುಂದಿನ ಸುದ್ದಿ
Show comments