ಕೂದಲು ಉದುರುವಿಕೆಗೆ ಈರುಳ್ಳಿಯೇ ರಾಮಬಾಣ

Webdunia
ಗುರುವಾರ, 2 ಫೆಬ್ರವರಿ 2017 (10:31 IST)
ಬೆಂಗಳೂರು: ಹಲವರಿಗೆ ಇದೊಂದು ಸಮಸ್ಯೆ. ತಲೆ ಬಾಚಿಕೊಂಡರೆ ಸಾಕು ಬಾಚಣಿಗೆ ತುಂಬಾ ಕೂದಲು. ಇನ್ನೂ ನಲ್ವತ್ತರ ಹರೆಯ ದಾಟಿಲ್ಲ. ಆಗಲೇ ಬಾಂಡ್ಲಿ ತಲೆ. ಕೂದಲು ಉದುರುವುದು ನಿಲ್ಲಲು ಏನು ಮಾಡಬೇಕು?

 
ಇದಕ್ಕೆ ರಾಮಬಾಣ ಅಡುಗೆಗೆ ಬಳಸುವ ಈರುಳ್ಳಿ. ಈರುಳ್ಳಿಯಲ್ಲಿ ಸಲ್ಫರ್ ನ ಅಂಶ ಜಾಸ್ತಿಯಿರುವುದರಿಂದ ಕೂದಲಿನ ಆರೋಗ್ಯಕ್ಕೆ ಭಾರೀ ಒಳ್ಳೆಯದು. ಇದರಿಂದ ಸೀಳು ಕೂದಲು ಮತ್ತು ಉದುರುವಿಕೆ ಕೂಡಾ ನಿಯಂತ್ರಣಕ್ಕೆ ಬರುವುದು.

ಈರುಳ್ಳಿಯ ರಸವನ್ನು ಕೂದಲುಗಳಿಗೆ ಹಚ್ಚಿಕೊಂಡು ಮಸಾಜ್ ಮಾಡುತ್ತಿದ್ದರೆ ಕೂದಲು ಉದುರುವಿಕೆ ನಿಲ್ಲುವುದು. ಇದರಲ್ಲಿರುವ ಆಂಟಿ ಬ್ಯಾಕ್ಟೀರಿಯಾ ಅಂಶ ತಲೆ ಹೊಟ್ಟಿನ ಸಮಸ್ಯೆಗೆ ಪರಿಹಾರ ಒದಗಿಸುವುದು.

ಈರುಳ್ಳಿ ಕಾಣುವಾಗ ಎಷ್ಟು ಹೊಳೆಯುತ್ತವೆಯೋ ಹಾಗೆಯೇ ನಿಮ್ಮ ಕೂದಲಿಗೆ ಹೊಳಪು ನೀಡಲೂ ಇದರ ರಸವನ್ನು ಹಚ್ಚಿಕೊಳ್ಳಬಹುದು. ಅಲ್ಲದೆ ಬೇಗನೇ ಕೂದಲು ಬೆಳ್ಳಗಾಗುವ ಸಮಸ್ಯೆಗೂ ಪರಿಹಾರ ಒದಗಿಸುತ್ತದೆ.

ಎಲ್ಲಕ್ಕಿಂತ ಪ್ರಮುಖ ಅಂಶವೆಂದರೆ ಈರುಳ್ಳಿಗೆ ತಲೆ ಮತ್ತು ಕುತ್ತಿಗೆ ಭಾಗದಲ್ಲಿ ಬರಬಹುದಾದ ಕ್ಯಾನ್ಸರ್ ತಡೆಗಟ್ಟುವ ಸಾಮರ್ಥ್ಯವಿದೆಯಂತೆ. ಅಲ್ಲದೆ ತಲೆ ಹೇನು ಸಮಸ್ಯೆಗೂ ಇದರ ರಸವನ್ನು ಬಳಸಬಹುದು. ಇದು ನಮ್ಮ ತಲೆಯ ಭಾಗದಲ್ಲಿ ರಕ್ತ ಸಂಚಾರ ಸುಗಮಗೊಳಿಸುವುದರಿಂದ ಕೂದಲೂ ಸಮೃದ್ಧವಾಗಿ ಬೆಳೆಯಲು ಕಾರಣವಾಗುತ್ತದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಆರ್ಥರೈಟಿಸ್ ನೋವಿದ್ದರೆ ಈ ಒಂದು ಹಣ್ಣು ಸೇವಿಸಿ

ಚಳಿಗಾಲದಲ್ಲಿ ಶುಂಠಿ ಸೇವಿಸುವುದರ ಲಾಭವೇನು ತಿಳಿದುಕೊಳ್ಳಿ

ಚಳಿಗಾಲದಲ್ಲಿ ಬೆಲ್ಲವನ್ನು ಆಹಾರದಲ್ಲಿ ಸೇವಿಸುವುದರಲ್ಲಿ ಏನೆಲ್ಲಾ ಪ್ರಯೋಜನವಿದೆ ಗೊತ್ತಾ

ಚಳಿಗಾಲದಲ್ಲಿ ಚರ್ಮದ ತುರಿಕೆಗೆ ಏನು ಮಾಡಬೇಕು

ಈ ಸಂದರ್ಭದಲ್ಲಿ ಕೈಗೆ ಮೆಹಂದಿ ಹಾಕಿಕೊಳ್ಳಬಾರದು

ಮುಂದಿನ ಸುದ್ದಿ
Show comments