ಭಾರತದ ಕುರಿತು ವಿವಾದಿತ ಹೇಳಿಕೆ:ವೀರ್ ದಾಸ್ ವಿರುದ್ಧ ದೂರು ದಾಖಲು

Webdunia
ಬುಧವಾರ, 17 ನವೆಂಬರ್ 2021 (12:07 IST)
ಕಾಮಿಡಿಯನ್ ವೀರ್ ದಾಸ್ ಕೆನಡಿ ಸೆಂಟರ್ನಲ್ಲಿ ನೀಡಿದ್ದ ‘ನಾನು ಎರಡು ರೀತಿಯ ಭಾರತದಿಂದ ಬಂದಿದ್ದೇನೆ’ ಎಂಬ ಸ್ವಗತ ತೀವ್ರ ವಿವಾದ ಸೃಷ್ಟಿಸಿದೆ.
ಆ ಸ್ವಗತದಲ್ಲಿ ವೀರ್ ದಾಸ್ ಮಾತನಾಡುತ್ತಾ, ‘‘ನಾನು ಎರಡು ರೀತಿಯ ಭಾರತದಿಂದ ಬಂದಿದ್ದೇನೆ. ಭಾರತದಲ್ಲಿ ಹಗಲು ವೇಳೆ ಸ್ತ್ರೀಯರನ್ನು ಪೂಜಿಸುತ್ತೇವೆ, ರಾತ್ರಿ ವೇಳೆ ಸ್ತ್ರೀಯರನ್ನು ಗ್ಯಾಂಗ್‌ರೇಪ್ ಮಾಡುತ್ತೇವೆ. ಭಾರತದಲ್ಲಿ ಏರ್ ಕ್ವಾಲಿಟಿ ಇಂಡೆಕ್ಸ್ 900 ಇರುತ್ತೆ, ಆದರೂ ರಾತ್ರಿ ಆಕಾಶದಲ್ಲಿ ನಕ್ಷತ್ರ ನೋಡಲು ಬಯಸುತ್ತೇವೆ. ನಾವು ಪರಸ್ಪರರನ್ನು ಆಲಂಗಿಸುತ್ತೇವೆ, ಆದರೆ ಮಾಸ್ಕ್ ಧರಿಸಲ್ಲ’’ ಎಂದು ಹೇಳಿದ್ದರು. ಅವರ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತವಾಗಿದ್ದು, ‘ಭಾರತ, ಹಿಂದುತ್ವವನ್ನು ವೀರ್ ದಾಸ್ ಅಪಮಾನ ಮಾಡಿದ್ದಾರೆ. ಆದ್ದರಿಂದ ಅವರು ಕ್ಮೆ ಕೇಳಬೇಕು’ ಎಂದು ಸಾಮಾಜಿಕ ಜಾಲತಾಣದಲ್ಲಿ ಆಗ್ರಹ ಕೇಳಿಬಂದಿದೆ. ಈ ಹೇಳಿಕೆಯ ಕುರಿತಂತೆ ವೀರ್ ದಾಸ್ ಪ್ರತಿಕ್ರಿಯಿಸಿ, ಸ್ಪಷ್ಟನೆ ನೀಡಿದ್ದಾರೆ.
ವೀರ್ ದಾಸ್ ಹೇಳಿಕೆಯ ವಿರುದ್ಧ ಮುಂಬೈನಲ್ಲಿ ದೂರು ದಾಖಲಾಗಿದೆ. ಮಹಾರಾಷ್ಟ್ರದ ಪಾಲಘಾರ್ ಜಿಲ್ಲೆ ಬಿಜೆಪಿಯ ಕಾನೂನು ಸಲಹೆಗಾರ ಹಾಗೂ ಮುಂಬೈ ಹೈಕೋರ್ಟ್ ವಕೀಲ ಆಶುತೋಷ್ ದುಬೆ ದೂರು ನೀಡಿದ್ದಾರೆ. ವೀರ್ ಮಂಗಳವಾರ, ತಮ್ಮ ಹೇಳಿಕೆಯ ಕುರಿತು ಸ್ಪಷ್ಟನೆ ನೀಡಿದ್ದು, ತಮ್ಮ ಉದ್ದೇಶ ದೇಶವನ್ನು ಅಪಮಾನಿಸುವುದು ಆಗಿರಲಿಲ್ಲ ಎಂದಿದ್ದಾರೆ. ಸದ್ಯ ಅಮೇರಿಕಾದಲ್ಲಿರುವ ಅವರು, ವಾಷಿಂಗ್ಟನ್ ಡಿಸಿಯ ಜಾನ್ ಎಫ್ ಕೆನಡಿ ಸೆಂಟರ್ನಲ್ಲಿ ಮಾತನಾಡುವಾಗ ಹೇಳಿದ ಸ್ವಗತ ವಿವಾದ ಸೃಷ್ಟಿಸಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜಸ್ಟ್ ಫ್ರೆಂಡ್ಸ್ ಎನ್ನುತ್ತಲೇ ದಾಂಪತ್ಯ ಜೀವನಕ್ಕಿಡಲು ಸಜ್ಜಾದ ಮಾನಸ ಶಿವು ಜೋಡಿ

BBK12: ನಿಮಗೆ ಗೌರವ ಬೇಕು ಅಂದ್ರೆ ಬೇರೆಯವರಿಗೂ ಕೊಡೋದನ್ನು ಕಲಿಯಿರಿ: ಅಶ್ವಿನಿಗೆ ಕಿಚ್ಚ ಸುದೀಪ್ ಕ್ಲಾಸ್ video

ವಿಜಯಲಕ್ಷ್ಮಿ ಟೆಂಪಲ್ ರನ್‌, ಇತ್ತ ಡಿ ಬಾಸ್ ಅಭಿಮಾನಿಗಳಿಗೆ ಗುಡ್‌ನ್ಯೂಸ್

ಕೊನೆಗೂ ಊಹಾಪೋಹಾಗಳಿಗೆ ಅಂತ್ಯ ಹಾಡಿದ ಸೋನಂ ಕಪೂರ್

ಬಿಗ್‌ಬಾಸ್‌ ಮನೆಯಲ್ಲಿ ಗಿಲ್ಲಿ ಮೇಲೆ ಹಲ್ಲೆ: ಸಹಸ್ಪರ್ಧಿ ರಿಷಾ ವಿರುದ್ಧ ಪೊಲೀಸರಿಗೆ ದೂರು

ಮುಂದಿನ ಸುದ್ದಿ
Show comments