Webdunia - Bharat's app for daily news and videos

Install App

ನೈಜಿರಿಯಾದಲ್ಲಿ 3 ಭಾರತೀಯರ ಅಪಹರಣ

ಇಳಯರಾಜ
ಭಾನುವಾರ, 3 ಜೂನ್ 2007 (18:48 IST)
ಪೆಟ್ರೊಕೆಮಿಕಲ್‌ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಸೇರಿದಂತೆ ಒಟ್ಟು ಮೂವರು ಭಾರತೀಯ ಪ್ರಜೆಗಳನ್ನು ಅಪಹರಿಸಿರುವ ಘಟನೆ ನೈಜಿರಿಯಾದಲ್ಲಿ ಶನಿವಾರ ಶನಿವಾರ ಸಂಭವಿಸಿದೆ.

ಕೆಲವೇ ವಾರಗಳಲ್ಲಿ ಪಶ್ಚಿಮ ಆಫ್ರಿಕಾದಲ್ಲಿ ನಡೆಯುತ್ತಿರುವ ಮೂರನೇ ಘಟನೆ ಇದಾಗಿದೆ ಎಂದು ಹೇಳಲಾಗಿದೆ.

ಈ ಮೂವರ ಪೈಕಿ ಒಬ್ಬರನ್ನು ದೇಬಾಶಿಷ್ ಕೆ.ದವಲೆ ಎಂದು ಪತ್ತೆ ಹಚ್ಚಲಾಗಿದ್ದು, ಇನ್ನಿಬ್ಬರನ್ನು ಗುರುತಿಸಲು ಸಾಧ್ಯವಾಗಿಲ್ಲ. ದಕ್ಷಿಣ ನೈಜಿರಿಯಾದ ಪೊರ್ಟ್ ಹಾರ್ಕೊಟ್‌ನ ಮನೆಗಳಲ್ಲಿ ವಾಸವಾಗಿದ್ದ ಈ ಭಾರತೀಯರ ಮೇಲೆ ಶನಿವಾರ ಅಪಹರಣಕಾರರು ಗುಂಡಿನ ದಾಳಿ ನಡೆಸಿ ಅಪಹರಿಸಿದ್ದಾರೆ. ಈ ದಾಳಿಯಲ್ಲಿ ನೈಜಿರಿಯಾದ ಒಬ್ಬ ವ್ಯಕ್ತಿ ಮೃತಪಟ್ಟಿದ್ದಾನೆ ಎನ್ನಲಾಗಿದೆ.

ಈ ಘಟನೆಯು ನೈಜಿರಿಯಾದಲ್ಲಿರುವ ಭಾರತದ ಸಾವಿರಾರು ಉದ್ಯೋಗಿಗಳು ಹಾಗೂ ಅವರ ಕುಟುಂಬದ ಮೇಲೆ ಭಾರೀ ಪರಿಣಾಮ ಬೀರಿದ್ದು, ಅವರು ಸ್ವದೇಶಕ್ಕೆ ಮರಳುವ ವಿಚಾರ ಮಾಡುತ್ತಿದ್ದಾರೆ ಎಂದು ಹೇಳಲಾಗಿದೆ.

ಅಪಹರಣಕ್ಕೊಳಗಾಗಿರುವ ಈ ಮೂವರು ಭಾರತೀಯರನ್ನು ಸುಭದ್ರವಾಗಿ ಮರಳಲು ಬೇಕಾದ ಎಲ್ಲ ಕ್ರಮ ಕೈಗೊಳ್ಳುವಂತೆ ನೈಜಿರಿಯಾ ಸರಕಾರದೊಂದಿಗೆ ಹಾಗೂ ಅಲ್ಲಿನ ಭಾರತದ ಉನ್ನತ ಆಯುಕ್ತರೊಂದಿಗೆ ಸಂಪರ್ಕ ಇಟ್ಟುಕೊಳ್ಳಲಾಗಿದೆ ಎಂದು ಕೇಂದ್ರ ವಿದೇಶಾಂಗ ರಾಜ್ಯ ಖಾತೆ ಸಚಿವ ಆನಂದ್ ಶರ್ಮಾ ಹೇಳಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments