Webdunia - Bharat's app for daily news and videos

Install App

ಪೇಶಾವರದಲ್ಲಿ ಬಾಂಬ್ ಸ್ಫೋಟಕ್ಕೆ 10 ಬಲಿ

Webdunia
ಶನಿವಾರ, 16 ಮೇ 2009 (19:03 IST)
ಪಾಕಿಸ್ತಾನದ ಪ್ರಕ್ಷುಬ್ಧ ಎನ್‌ಡಬ್ಲ್ಯುಎಫ್‌ಪಿಯಲ್ಲಿ ಹಿಂಸಾಚಾರ ಮೇರೆಮೀರಿದ್ದು, ಸ್ಫೋಟಕ ತುಂಬಿದ ಕಾರೊಂದು ಪೇಶಾವರದ ಹಳೆ ನಗರ ಕೇಂದ್ರದಲ್ಲಿ ಸ್ಫೋಟಿಸಿದ್ದರಿಂದ ಇಬ್ಬರು ಮಕ್ಕಳು ಸೇರಿದಂತೆ 10 ಜನರನ್ನು ಬಲಿತೆಗೆದುಕೊಂಡಿದೆ.

ಈ ದಾಳಿಗೆ ಯಾವುದೇ ಗುಂಪು ಹೊಣೆ ಹೊತ್ತುಕೊಂಡಿಲ್ಲ. ಆದರೆ ಸ್ವಾತ್‌ ಮತ್ತು ಬುನೇರ್‌ನಲ್ಲಿ ಸೇನಾಕಾರ್ಯಾಚರಣೆ ಮತ್ತು ಬುಡಕಟ್ಟು ಪ್ರದೇಶದಲ್ಲಿ ಡ್ರೋನ್ ದಾಳಿಗಳಿಗೆ ಪ್ರತೀಕಾರವಾಗಿ ಆತ್ಮಾಹುತಿ ದಾಳಿಗಳನ್ನು ನಡೆಸುವುದಾಗಿ ತಾಲಿಬಾನ್ ಮುಂತಾದ ಗುಂಪುಗಳು ಬೆದರಿಕೆ ಹಾಕಿದೆ.

ಪೇಶಾವರದ ಹಳೆ ಕೇಂದ್ರವಾದ ಕಾಕ್ಶಾಲ್‌ನಲ್ಲಿ ನಿಲ್ಲಿಸಿದ್ದ ಕಾರಿನಲ್ಲಿ ಸ್ಫೋಟಕಗಳನ್ನು ಅಡಗಿಸಿಡಲಾಗಿದ್ದು, ಜನರಿಂದ ಪ್ರದೇಶ ಕಿಕ್ಕಿರಿದು ತುಂಬಿದ್ದಾಗ ಬಾಂಬ್ ಸ್ಫೋಟಿಸಿತೆಂದು ತಿಳಿದುಬಂದಿದೆ. ಸ್ಫೋಟದಿಂದಾಗಿ ಶಾಲಾ ಬಸ್ ಸೇರಿದಂತೆ ಅನೇಕ ವಾಹನಗಳು ಹಾನಿಯಾಗಿವೆ. ಸೈಬರ್ ಕೆಫೆ ಹೊರಗೆ ಸ್ಫೋಟಕ ತುಂಬಿದ ಕಾರನ್ನು ನಿಲ್ಲಿಸಲಾಗಿದ್ದು, ಸ್ಫೋಟದಿಂದ ತೀವ್ರ ಹಾನಿಗೊಳಲಾಗಿದೆ.

ಸ್ಫೋಟದಿಂದಾಗಿ ನಗರದಲ್ಲಿ ಭಯಭೀತ ವಾತಾವರಣ ಮ‌ೂಡಿದ್ದು, ಸ್ಫೋಟದ ಬಳಿಕ ಅನೇಕ ಮಂದಿ ಶಂಕಿತರನ್ನು ಬಂಧಿಸಿ ಅಜ್ಞಾತ ಸ್ಥಳವೊಂದಕ್ಕೆ ತನಿಖೆಗಾಗಿ ಕರೆದೊಯ್ಯಲಾಯಿತು.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಾತೃಪಕ್ಷಕ್ಕೆ ಮೋಸಮಾಡಿದ ಸಿದ್ದರಾಮಯ್ಯನವರು ಹೆತ್ತ ತಾಯಿಗೆ ಮಾಡಿದ ದ್ರೋಹಕ್ಕೆ ಸಮ: ನಿಖಿಲ್ ಕುಮಾರಸ್ವಾಮಿ

ಇರಾನ್ ದಾಳಿ ಬೆನ್ನಲ್ಲೇ ಅಮೆರಿಕ ಪ್ರವಾಸ ಕೈಗೊಂಡ ಇಸ್ರೇಲ್‌ ಪ್ರಧಾನಿ ನೆತನ್ಯಾಹು

ಬೆಲೆ ಏರಿಕೆಯ ಮಧ್ಯೆ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆ ₹58.50ಕಡಿತ

ಕೈಲಾಗದವನು ಮೈಪರಚಿಕೊಂಡ, ಕೋವಿಡ್ ಲಸಿಕೆ ಬಿಜೆಪಿ ಲಸಿಕೆಯಲ್ಲ: ಸಿಎಂಗೆ ಟಾಂಗ್ ಕೊಟ್ಟ ಆರ್‌ ಅಶೋಕ್‌

ಏರ್‌ ಇಂಡಿಯಾ ವಿಮಾನ ದುರಂತ: ವಾರದೊಳಗೆ ಪ್ರಾಥಮಿಕ ವರದಿ ಹೊರಬೀಳುವ ಸಾಧ್ಯತೆ

Show comments