Webdunia - Bharat's app for daily news and videos

Install App

ಭಾರತದ ಅರ್ಚಕರನ್ನು ಕೈಬಿಟ್ಟ ನೇಪಾಳ

ನೇಪಾಳದ ಬ್ರಾಹ್ಮಣರಿಗೆ ಮಾವೋವಾದಿ ಸರ್ಕಾರದ ಮಣೆ

Webdunia
ಶನಿವಾರ, 3 ಜನವರಿ 2009 (20:45 IST)
ನೇಪಾಳವನ್ನು ಗಣರಾಜ್ಯವನ್ನಾಗಿ ಪರಿವರ್ತಿಸಲು ಪ್ರಮುಖ ಪಾತ್ರ ವಹಿಸಿದ್ದ ಮಾವೋವಾದಿಗಳು ವಿಶ್ವಪ್ರಸಿದ್ಧ ಪಶಪತಿನಾಥ ದೇವಾಲಯದ ಅದರಲ್ಲೂ ಕರ್ನಾಟಕದ(ಕುಂದಾಪುರ ಮೂಲದ)ಬ್ರಾಹ್ಮಣರನ್ನು ಅರ್ಚಕರನ್ನಾಗಿ ನೇಮಿಸುವ ಮೂರು ಶತಮಾನಗಳಷ್ಟು ಹಳೆಯ ಪದ್ಧತಿಗೆ ತಿಲಾಂಜಲಿ ನೀಡುವಲ್ಲಿ ಯಶಸ್ವಿಯಾಗಿದೆ.

ಅರಸೊತ್ತಿಗೆ ಅಂತ್ಯಗೊಂಡ ತಕ್ಷಣವೇ ಈ ಪ್ರಕ್ರಿಯೆ ಸದ್ದಿಲ್ಲದೆಯೇ ಆರಂಭಗೊಂಡಿತ್ತು. ಕೊನೆಗೂ ಈ ಪದ್ದತಿ ಅಂತ್ಯಗೊಳಿಸಿ ಸ್ಥಳೀಯ ಬ್ರಾಹ್ಮಣರಿಗೆ ಉದ್ಯೋಗಾವಕಾಶ ಕಲ್ಪಿಸಿಕೊಡುವಲ್ಲಿ ಮಾವೋವಾದಿ ಸರ್ಕಾರ ಸಫಲವಾಗಿದೆ.

ಪಶುಪತಿನಾಥ ದೇಗುಲದ ಪೂಜೆಗೆ ದಕ್ಷಿಣ ಭಾರತದ ಭಟ್ಟ ಬ್ರಾಹ್ಮಣರ ಬದಲು ಪ್ರಧಾನ ಅರ್ಚಕ ವಿಷ್ಣು ಪ್ರಸಾದ್ ದಹಲ್ ಸೇರಿದಂತೆ ನೇಪಾಳದ ಭಟ್ಟ ಬ್ರಾಹ್ಮಣರನ್ನು ನೇಮಿಸಲಾಗಿದೆ. ಈ ನಡುವೆ, ದೇಗುಲದ ಪ್ರಧಾನ ಅರ್ಚಕ ಮಹಾಬಲೇಶ್ವರ ಭಟ್ಟ, ಅರ್ಚಕರಾದ ಕೃಷ್ಣಯೋಗ ಭಟ್ಟ ಮತ್ತು ಕೆ.ಪಿ.ರಾಮಚಂದ್ರ ಭಟ್ಟ ಅವರ ರಾಜೀನಾಮೆಯನ್ನು ಪಶುಪತಿ ಪ್ರದೇಶಾಭಿವೃದ್ಧಿ ಮಂಡಳಿ ಅಂಗೀಕರಿಸಿದೆ.

ನೇಪಾಳಿ ಜನರ ಒಳಿತಿಗಾಗಿ ಪ್ರಾರ್ಥನೆ ಮಾಡಿಕೊಳ್ಳುವುದರೊಂದಿಗೆ ತಾವು ಪೂಜಾ ಕೈಂಕರ್ಯ ಆರಂಭಿಸುವುದಾಗಿ ನೂತನ ಪ್ರಧಾನ ಅರ್ಚಕ ದಹಲ್ ಹೇಳಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments