Webdunia - Bharat's app for daily news and videos

Install App

ಭಾರತ ಮಾತುಕತೆಗೆ ಒಪ್ಪದಿದ್ದರೆ, ಪಾಕ್ ಯುದ್ಧಕ್ಕೆ ಸಿದ್ಧ: ಜಮಾತ್ ದವಾಹ್!

Webdunia
ಭಾನುವಾರ, 28 ಫೆಬ್ರವರಿ 2010 (17:25 IST)
ಭಾರತ ಪಾಕಿಸ್ತಾನದ ಜೊತೆಗೆ ಮಾತುಕತೆಗೆ ಸಿದ್ಧವಾಗಿಲ್ಲವಾದರೆ, ಪಾಕಿಸ್ತಾನ ಯುದ್ಧಕ್ಕೆ ಸಿದ್ಧವಾಗಬೇಕಾದ ಅಗತ್ಯವಿದೆ ಎಂದು ಜಮಾತ್ ಉದ್ ದವಾಹ್ ಸಂಘಟನೆಯ ಮುಖ್ಯಸ್ಥ ಹಫೀಸ್ ಮಹಮ್ಮದ್ ಸಯೀದ್ ಅಭಿಪ್ರಾಯಪಟ್ಟಿದ್ದಾರೆ.

ಭಾರತ ಯುದ್ಧವನ್ನೇ ಬಯಸಿದೆ. ಒಂದು ವೇಳೆ ಭಾರತ ಮಾತುಕತೆಗೆ ಸಿದ್ಧವಿಲ್ಲವೆಂದಾದರೆ ಪಾಕಿಸ್ತಾನ ಖಂಡಿತವಾಗಿಯೂ ಯುದ್ಧಕ್ಕೆ ತಯಾರಿದೆ ಎಂದು ಹಫೀಸ್ ಮಹಮ್ಮದ್ ಸಯೀದ್ ಹೇಳಿದರು.

ಮುಂಬೈ ದಾಳಿಯಲ್ಲಿ ನಿಮ್ಮ ಸಂಘಟನೆಯ ಕೈವಾಡವಿದೆಯೆಂದು ಭಾರತ ಹೇಳಿದ್ದಕ್ಕೆ ನೀವೇನು ಪ್ರತಿಕ್ರಿಯಿಸುತ್ತೇನೆ ಎಂಬುದಕ್ಕೆ ಪ್ರತಿಕ್ರಿಯಿಸಿದ ಅವರು, ಭಾರತ ಇದನ್ನು ಕೋರ್ಟಿನಲ್ಲಿ ಸಾಬೀತು ಪಡಿಸಿದರೆ, ಅದು ಮಾಡಿದ ಆರೋಪವನ್ನು ನಾನು ಒಪ್ಪಿಕೊಳ್ಳುತ್ತೇನೆ ಎಂದರು.

ಫೆ.25ರಂದು ಭಾರತ ಹಾಗೂ ಪಾಕಿಸ್ತಾನದ ವಿದೇಶಾಂಗ ಕಾರ್ಯದರ್ಶಿಗಳ ನಡುವೆ ನವದೆಹಲಿಯಲ್ಲಿ ಮಾತುಕತೆ ನಡೆದ ನಂತರ ಅವರು ಈ ರೀತಿ ಪ್ರತಿಕ್ರಿಯಿಸಿದ್ದಾರೆ.

ಸಯೀದ್ ಈಗಾಗಲೇ ನಿಷೇಧಿಸಲ್ಪಟ್ಟಿರುವ ಲಷ್ಟರ್ ಇ ತೊಯ್ಬಾದ ಸ್ಥಾಪಕನಾಗಿದ್ದು, 2008ರಲ್ಲಿ ಮುಂಬೈ ದಾಳಿಯ ನಂತರ ಜಮಾತ್ ದ್ ದವಾಹ್ ಕೂಡಾ ಒಂದು ಉಗ್ರಗಾಮಿ ಸಂಘಟನೆಯೆಂದು ವಿಶ್ವಸಂಸ್ಥೆಯ ರಕ್ಷಣಾ ಮಂಡಳಿ ಪ್ರಕಟಿಸಿದ ನಂತರ, ಲಾಹೋರ್‌ನಲ್ಲಿ ಗೃಹಬಂಧನದಲ್ಲಿದ್ದರು. ಲಾಹೋರ್ ಹೈಕೋರ್ಟ್ ಆದೇಶದ ನಂತರ ಆರು ತಿಂಗಳ ನಂತರ ಬಿಡುಗಡೆ ಕಂಡಿದ್ದರು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments