Webdunia - Bharat's app for daily news and videos

Install App

ಭಾರತ-ಚೀನಾ ವಿವಾದಕ್ಕೆ ತುಪ್ಪ ಸುರಿಯಲು ಯತ್ನಿಸುತ್ತಿರುವ ಪಾಕ್

Webdunia
ಶುಕ್ರವಾರ, 21 ಜುಲೈ 2017 (11:12 IST)
ನವದೆಹಲಿ: ಸಿಕ್ಕಿಂ ಗಡಿಯಲ್ಲಿ ಭಾರತ ಮತ್ತು ಚೀನಾ ನಡುವೆ ಸಂಘರ್ಷ ನಡೆಯುತ್ತಿದ್ದರ, ಇತ್ತ ಭಾರತದ ಶತ್ರು ರಾಷ್ಟ್ರ ಪಾಕಿಸ್ತಾನ ಮೂಗು ತೂರಿಸಲು ಹೊರಟಿರುವುದು ಉರಿಯುತ್ತಿರುವ ಬೆಂಕಿಗೆ ತುಪ್ಪ ಸುರಿಯುವುದು ಖಚಿತವಾಗಿದೆ.


ಭಾರತ ಮತ್ತು ಚೀನಾ ನಡುವೆ ಉದ್ವಿಗ್ನ ವಾತಾವರಣ ಸೃಷ್ಟಿಯಾದ ಬೆನ್ನಲ್ಲೇ ಭಾರತದಲ್ಲಿರುವ ಪಾಕ್ ರಾಯಭಾರಿ ಅಬ್ದುಲ್ ಬಾಸಿತ್ ಚೀನಾ ರಾಯಭಾರಿಯನ್ನು ಭೇಟಿಯಾಗಿ ಮಾತುಕತೆ ನಡೆಸಿರುವುದು ಹಲವರ ಹುಬ್ಬೇರುವಂತೆ ಮಾಡಿದೆ. ಸಿಕ್ಕಿಂ ಗಡಿಯಲ್ಲಿ ಚೀನಾ ಪಡೆಗಳು ರಸ್ತೆ ನಿರ್ಮಿಸಲು ಹೊರಟಿರುವುದನ್ನು ಭಾರತೀಯ ಸೇನೆ ತಡೆದಿರುವುದು ಈ ಸಂದರ್ಭದಲ್ಲಿ ಚರ್ಚೆಯಾಯಿತು ಎನ್ನಲಾಗಿದೆ.

ಇಷ್ಟೇ ಅಲ್ಲದೆ, ಪಾಕ್ ರಾಯಭಾರಿ ಸಿಕ್ಕಿಂ ಗಡಿಗೆ ಹೊಂದಿಕೊಂಡಿರುವ ಇನ್ನೊಂದು ರಾಷ್ಟ್ರ ಭೂತಾನ್ ರಾಯಭಾರಿಯನ್ನೂ ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ಮೂಲಕ ಭಾರತ-ಚೀನಾ ಗಡಿ ವಿವಾದದಲ್ಲಿ ಪಾಕ್ ಮೂಗು ತೂರಿಸುತ್ತಿರುವುದು ಇನ್ನಷ್ಟು ಅಸಮಾಧಾನಕ್ಕೆ ಕಾರಣವಾಗಬಹುದೆಂದು ವಿಶ್ಲೇಷಿಸಲಾಗಿದೆ.

ಇದನ್ನೂ ಓದಿ..  ರಿಲಯನ್ಸ್ ಜಿಯೋ ಫೋನ್ ಇಂದು ಘೋಷಣೆ ಮಾಡ್ತಾರಾ ಮುಕೇಶ್ ಅಂಬಾನಿ?

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments