Webdunia - Bharat's app for daily news and videos

Install App

ಅಮೆರಿಕದಲ್ಲಿ ಮತ್ತೆ ನಿತ್ಯ 1 ಲಕ್ಷ ಕೊರೋನಾ ಕೇಸು!

Webdunia
ಭಾನುವಾರ, 8 ಆಗಸ್ಟ್ 2021 (09:27 IST)
ಬಾಲ್ಟಿಮೋರ್(ಆ.08): ಅಮೆರಿಕದಲ್ಲಿ ಮತ್ತೆ ಕೊರೋನಾ ತಾಂಡವ ಆಡಲು ಆರಂಭಿಸಿದ್ದು, ಮತ್ತೆ ನಿತ್ಯ 1 ಲಕ್ಷ ಪ್ರಕರಣಗಳು ದಾಖಲಾಗತೊಡಗಿವೆ. ಜೂನ್ನಲ್ಲಿ 1 ಲಕ್ಷ ಇದ್ದ ಪ್ರಕರಣಗಳ ಸಂಖ್ಯೆ ಈಗ 1 ಲಕ್ಷ ಮೀರಿದ್ದು, ಆತಂಕ ಸೃಷ್ಟಿಸಿದೆ. ಇದು ಡೆಲ್ಟಾಕೊರೋನಾ ತಳಿಯ ಪ್ರಭಾವ ಎಂದು ಹೇಳಲಾಗಿದೆ.

ಕಳೆದ ವರ್ಷ ಜೂನ್ನಲ್ಲಿ ಸರಾಸರಿ 11 ಸಾವಿರ ಪ್ರಕರಣಗಳು ಅಮೆರಿಕದಲ್ಲಿ ದಾಖಲಾಗುತ್ತಿದ್ದವು. ಬಳಿಕ ನವೆಂಬರ್ನಲ್ಲಿ ಪ್ರಕರಣಗಳ ಸಂಖ್ಯೆ 1 ಲಕ್ಷ ಮೀರಿ, ಜನವರಿಯಲ್ಲಿ 3 ಲಕ್ಷ ಪ್ರಕರಣ ಒಂದೇ ದಿನದಲ್ಲಿ ವರದಿಯಾಗಿದ್ದವು. ಆದರೆ ಬಳಿಕ ಕೊರೋನಾ ಇಳಿಕೆ ಕಂಡಿತ್ತು. ದೇಶದಲ್ಲಿ ಈಗ ಶೇ.70 ಜನರಿಗೆ ಕೊರೋನಾ ಲಸಿಕೆ ನೀಡಿದ್ದರೂ ಮತ್ತೆ ಈಗ ಪ್ರಕರಣಗಳ ಸಂಖ್ಯೆ 1 ಲಕ್ಷ ಮೀರತೊಡಗಿದ್ದು, ಶುಕ್ರವಾರ 1.30 ಲಕ್ಷ ಪ್ರಕರಣಗಳು ದಾಖಲಾಗಿವೆ. ಕಳೆದ 4 ದಿನಗಳಿಂದಲೂ ಹೊಸ ಪ್ರಕರಣಗಳ ಸಂಖ್ಯೆ ಲಕ್ಷಕ್ಕಿಂತ ಹೆಚ್ಚೇ ಇದೆ. ಜೊತೆಗೆ 100ರ ಆಸುಪಾಸಿಗೆ ಬಂದಿದ್ದ ದೈನಂದಿನ ಸಾವಿನ ಸಂಖ್ಯೆ ಕೂಡಾ ಮತ್ತೆ 500ರ ಗಡಿ ದಾಟಿದೆ.
ಕೊರೋನಾ ಲಸಿಕೆ ಪಡೆಯದವರಲ್ಲಿ ಹೆಚ್ಚು ಸೋಂಕು ಕಾಣಿಸಿಕೊಳ್ಳತೊಡಗಿದ್ದು, ದಕ್ಷಿಣ ಅಮೆರಿಕದಲ್ಲಿ ಹೆಚ್ಚು ಪ್ರಕರಣಗಳು ವರದಿಯಾಗತೊಡಗಿವೆ ಹಾಗೂ ಆಸ್ಪತ್ರೆ ದಾಖಲಾತಿ ಕೂಡ ಹೆಚ್ಚಿದೆ. ಆಸ್ಪತ್ರೆಯಲ್ಲಿ ಬೆಡ್ಗಳಿಗೂ ಪರದಾಡುವ ಸ್ಥಿತಿ ಎದುರಾಗಿದೆ. ಹೂಸ್ಟನ್ನಲ್ಲಿ ಆಸ್ಪತ್ರೆಗೆ ರೋಗಿಗಳನ್ನು ದಾಖಲಿಸಲು ಆ್ಯಂಬುಲೆನ್ಸ್ಗಳು ಸರದಿ ಸಾಲಿನಲ್ಲಿ ನಿಂತ ದೃಶ್ಯ ಕಾಣಿಸಿದೆ.
ಲಸಿಕೆ ಪಡೆಯದಿದ್ದರೆ ಸ್ಫೋಟ:
ಜನರು ಹೆಚ್ಚು ಸಂಖ್ಯೆಯಲ್ಲಿ ಲಸಿಕೆ ಪಡೆಯದೇ ಹೋದರೆ ಸೋಂಕು ಇನ್ನಷ್ಟುಹೆಚ್ಚಲಿದೆ. ಜನವರಿ ಮಾದರಿಯಲ್ಲೇ 2 ಲಕ್ಷಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗುವ ಅಪಾಯವಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments