Webdunia - Bharat's app for daily news and videos

Install App

ಲಿಬಿಯಾದಲ್ಲಿ ಐಸಿಸ್ ಉಗ್ರರ ಮುಷ್ಠಿಯಿಂದ ಇಬ್ಬರು ಕನ್ನಡಿಗರ ಬಿಡುಗಡೆ

Webdunia
ಶುಕ್ರವಾರ, 31 ಜುಲೈ 2015 (18:22 IST)
ನಾಲ್ವರು ಭಾರತೀಯರನ್ನು ಅಪಹರಿಸಿದ್ದ ಐಸಿಸ್ ಉಗ್ರಗಾಮಿಗಳು ಇಬ್ಬರು ಭಾರತೀಯರನ್ನು ಬಿಡುಗಡೆ ಮಾಡಿದ್ದಾರೆ ಎಂಬ ಬಗ್ಗೆ ಮಾಹಿತಿ ಲಭ್ಯವಾಗಿದೆ.  ಬೆಳಿಗ್ಗೆಯಿಂದ ಕೇಂದ್ರ ಸರ್ಕಾರ ಭಾರತೀಯರನ್ನು ಬಿಡುಗಡೆ ಮಾಡಿಸುವ ಪ್ರಯತ್ನ ಮಾಡಿತ್ತು. ಕನ್ನಡಿಗರಾದ ಲಕ್ಷ್ಮಿಕಾಂತ್,  ವಿಜಯಕುಮಾರ್ ಇಬ್ಬರೂ ಸುರಕ್ಷಿತವಾಗಿ ಬಿಡುಗಡೆಯಾಗಿದ್ದಾರೆಂದು ವರದಿಯಾಗಿದೆ.

ಮತ್ತಿಬ್ಬರು ಭಾರತೀಯರ ರಕ್ಷಣೆಗೆ ಸರ್ಕಾರ ಪ್ರಯತ್ನ ನಡೆಸಿದೆ. ಲಿಬಿಯಾದ ತ್ರಿಪೋಲಿಯಾದಲ್ಲಿದ್ದ ಭಾರತ ರಾಯಭಾರ ಕಚೇರಿ ಅಧಿಕಾರಿಗಳು ಭಾರತೀಯರ ಬಿಡುಗಡೆಗೆ ಶತಪ್ರಯತ್ನ ಮಾಡಿದ್ದರು. ಆಂಧ್ರಪ್ರದೇಶದ ಇನ್ನಿಬ್ಬರು ಇನ್ನೂ ಲಿಬಿಯಾದಲ್ಲಿ ಐಸಿಸ್ ಉಗ್ರರು ಒತ್ತೆಯಾಳಾಗಿ ಇರಿಸಿಕೊಂಡಿದ್ದು, ಅವರನ್ನು ಕೂಡ ಬಿಡಿಸಬೇಕಾಗಿದೆ.  ಇಬ್ಬರು ಭಾರತೀಯರನ್ನು ಬಿಡುಗಡೆ ಮಾಡಿರುವ ವಿಷಯವನ್ನು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಖಚಿತಪಡಿಸಿದರು.

ರಕ್ಷಣೆಯಾದ ಭಾರತೀಯರು ಶಿರ್ತೆ ವಿವಿಗೆ ಸ್ಥಳಾಂತರಗೊಳಿಸಲಾಗಿದೆ. ವಿದೇಶಾಂಗ ಇಲಾಖೆಯ ವಕ್ತಾರ ವಿಕಾಸ್ ಸ್ವರೂಪ್ ಈ ವಿಷಯದ ಮಾಹಿತಿಯನ್ನು ಟ್ವಿಟರ್‌ನಲ್ಲಿ ನೀಡಿದ್ದಾರೆ. ಆದರೆ ಯಾವ ವಿಧಾನದ ಮೂಲಕ ಅವರಿಬ್ಬರನ್ನು ಬಿಡಿಸಲಾಗಿದೆ ಎಂಬ ಬಗ್ಗೆ ಮಾಹಿತಿ ಸಿಕ್ಕಿಲ್ಲ. ಉಗ್ರರ ವಶದಲ್ಲಿರುವ ತೆಲಂಗಾಣ ಹಾಗೂ ಆಂಧ್ರದ ಇಬ್ಬರೂ ಸೇಫ್ ಆಗಿದ್ದಾರೆಂಬ ವರದಿಗಳು ಬಂದಿವೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments