Select Your Language

Notifications

webdunia
webdunia
webdunia
webdunia

ಜೆಡ್ಡಾದಿಂದ 362 ಭಾರತೀಯರು ಬೆಂಗಳೂರು ಕಡೆ ಪ್ರಯಾಣ

ಜೆಡ್ಡಾದಿಂದ 362 ಭಾರತೀಯರು ಬೆಂಗಳೂರು ಕಡೆ ಪ್ರಯಾಣ
ರಿಯಾದ್ , ಶನಿವಾರ, 29 ಏಪ್ರಿಲ್ 2023 (13:23 IST)
ರಿಯಾದ್ : ಸೇನಾಪಡೆ ಮತ್ತು ಅರೆಸೇನಾಪಡೆ ನಡುವಿನ ಸಂಘರ್ಷದಿಂದ ನಲುಗಿರುವ ಸುಡಾನ್ನಲ್ಲಿ ಸಂಕಷ್ಟಕ್ಕೆ ಸಲುಕಿರುವ ಭಾರತೀಯರನ್ನು ಕರೆತರಲು ‘ಆಪರೇಷನ್ ಕಾವೇರಿ’ ಹೆಸರಿನಲ್ಲಿ ಕಾರ್ಯಾಚರಣೆ ನಡೆಸಲಾಗುತ್ತಿದೆ.

ಸುಡಾನ್ನಿಂದ ಸೌದಿ ಅರೇಬಿಯಾದ ಜೆಡ್ಡಾಗೆ ಸ್ಥಳಾಂತರಿಸಲಾಗಿದ್ದ 362 ಮಂದಿ ಭಾರತೀಯರ ಬ್ಯಾಚ್ವೊಂದು ಬೆಂಗಳೂರು ಕಡೆ ಪ್ರಯಾಣ ಬೆಳೆಸಿದೆ.

ಭಾರತೀಯರನ್ನು ಸುರಕ್ಷಿತವಾಗಿ ದೇಶಕ್ಕೆ ಕಳುಹಿಸುವ ಜವಾಬ್ದಾರಿಯನ್ನು ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ವಿ ಮುರಳೀಧರನ್ ವಹಿಸಿದ್ದಾರೆ. “ಜೆಡ್ಡಾದಿಂದ ಬೆಂಗಳೂರಿಗೆ ಹೊರಟಿರುವ ವಿಮಾನದಲ್ಲಿ ಸುಡಾನ್ನಿಂದ ಸ್ಥಳಾಂತರಿಸಲ್ಪಟ್ಟ 362 ಭಾರತೀಯರನ್ನು ನೋಡಲು ಸಂತೋಷವಾಗಿದೆ. ಇವರಲ್ಲಿ ಹೆಚ್ಚಿನ ಸಂಖ್ಯೆಯವರು ಹಕ್ಕಿಪಿಕ್ಕಿ ಬುಡಕಟ್ಟು ಜನಾಂಗದವರು” ಎಂದು ಮುರಳೀಧರನ್ ಟ್ವೀಟ್ ಮಾಡಿದ್ದಾರೆ. 

Share this Story:

Follow Webdunia kannada

ಮುಂದಿನ ಸುದ್ದಿ

ಸಾರ್ವಜನಿಕ ಸ್ಥಳದಲ್ಲಿ ನಮಾಜ್ : 1,700 ಮುಖಂಡರ ವಿರುದ್ಧ ಕೇಸ್