ಮಣಿಪುರದಲ್ಲಿ 40 ಮಂದಿ ದಂಗೆಕೋರರ ಹತ್ಯೆ! ಇಂಟರ್ನೆಟ್ ಸೇವೆ ಬಂದ್

Webdunia
ಸೋಮವಾರ, 29 ಮೇ 2023 (10:19 IST)
ಇಂಫಾಲ್ : ರಾಜ್ಯದಲ್ಲಿ ನಡೆದ ಹಿಂಸಾತ್ಮಕ ಘರ್ಷಣೆಯಲ್ಲಿ ನಾಗರಿಕರ ವಿರುದ್ಧ ಶಸ್ತ್ರಾಸ್ತ್ರ ಬಳಸಿ ದಾಳಿ ನಡೆಸಿದ್ದ ಕನಿಷ್ಠ 40 ಮಂದಿ ದಂಗೆಕೋರರು ಹತರಾಗಿದ್ದಾರೆ. ಇನ್ನೂ ಕೆಲವು ಕಿಡಿಗೇಡಿಗಳನ್ನ ಬಂಧಿಸಲಾಗಿದೆ ಎಂದು ಸಿಎಂ ಎ. ಬಿರೇನ್ ಸಿಂಗ್ ಭಾನುವಾರ ತಿಳಿಸಿದ್ದಾರೆ.

ಮಣಿಪುರದಲ್ಲಿ ಸದ್ಯ ಇನ್ನೂ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿರುವುದರಿಂದ ಮೇ 31ರ ವರೆಗೂ ರಾಜ್ಯಾದ್ಯಂತ ಇಂಟರ್ನೆಟ್ ಸೇವೆ ಸ್ಥಗಿತಗೊಳಿಸಲಾಗಿದೆ. 

ಇದೇ ತಿಂಗಳ ಮೇ 3ರಂದು ಪರಿಶಿಷ್ಟ ಪಂಗಡದ ಸ್ಥಾನಮಾನದ ಕುರಿತು ನ್ಯಾಯಾಲಯದ ಆದೇಶದ ವಿರುದ್ಧ ಬುಡಕಟ್ಟು ಗುಂಪುಗಳು ನಡೆಸುತ್ತಿದ್ದ ಪ್ರತಿಭಟನೆ ವೇಳೆ ವ್ಯಾಪಕ ಹಿಂಸಾಚಾರ ಭುಗಿಲೆದ್ದಿತ್ತು. ಎಸ್ಟಿ ಸ್ಥಾನಮಾನ ನೀಡಬೇಕೆಂಬ ಮೀಟೈ ಸಮುದಾಯದ ಬೇಡಿಕೆಯನ್ನ ವಿರೋಧಿಸಲಾಗಿತ್ತು. ಆ ನಂತರ ಹಿಂಸಾಚಾರ ಭುಗಿಲೆದ್ದಿತ್ತು.

ಭಾನುವಾರ (ಮೇ 28) ಹಿಂಸಾಚಾರ ಪೀಡಿತ ಸ್ಥಳಕ್ಕೆ ಕೇಂದ್ರ ಗೃಹಸಚಿವ ಅಮಿತ್ ಶಾ ಭೇಟಿ ನೀಡಿ ಪರಿಶೀಲಿಸಿದರು. ಇದಕ್ಕೆ ಮೂರು ದಿನ ಮುಂಚಿತವಾಗಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ ಸಹ ಮಣಿಪುರ ರಾಜಧಾನಿಗೆ ಭೇಟಿ ನೀಡಿದ್ದರು. ಘರ್ಷಣೆ ನಡೆದು ಒಂದು ತಿಂಗಳಾದರೂ ಮಣಿಪುರದಲ್ಲಿ ಇನ್ನೂ ಅಶಾಂತಿ ವಾತಾವರಣ ಮುಂದುವರಿದಿದೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮತ್ತಷ್ಟು ಹಣ ಕೊಡದಿದ್ದರೆ ಬೆತ್ತಲೆ ಫೋಟೋ ವೈರಲ್ ಬೆದರಿಕೆ, ಯುವಕ ಆತ್ಮಹತ್ಯೆ

ಮೋದಿ ಬಳಿಕ ಬಿಜೆಪಿಯಿಂದ ಪ್ರಧಾನಿ ಅಭ್ಯರ್ಥಿ ಯಾರು: ಕೊನೆಗೂ ತಿಳಿಸಿದ ಮೋಹನ್ ಭಾಗವತ್

ಸಿದ್ದರಾಮಯ್ಯ ಇರುವಷ್ಟು ದಿನ ಉತ್ತಮ ಹೆಜ್ಜೆ ಇಡಲಿ: ವಿಜಯೇಂದ್ರ

ಅಮಗಾಂವ್ ನಿವಾಸಿಗಳ ಸ್ಥಳಾಂತರದ ಬಗ್ಗೆ ಸಚಿವ ಈಶ್ವರ್ ಖಂಡ್ರೆ ದಿಟ್ಟ ಹೆಜ್ಜೆ

ತಾಯೊಯೊಬ್ಬಳು ಚಿರತೆ ಬಾಯಿಂದ ಮಗನನ್ನು ರಕ್ಷಿಸಿದ್ದ, ಮಗುವಿನ ಆರೋಗ್ಯ ಹೇಗಿದೆ ಗೊತ್ತಾ

ಮುಂದಿನ ಸುದ್ದಿ
Show comments