Webdunia - Bharat's app for daily news and videos

Install App

9 ವರ್ಷದ ಮಗಳನ್ನು 55 ವರ್ಷದವನಿಗೆ ಮಾರಿದ ತಂದೆ!

Webdunia
ಗುರುವಾರ, 4 ನವೆಂಬರ್ 2021 (09:06 IST)
ಅಫ್ಘಾನಿಸ್ತಾನದಲ್ಲಿ ನೆಲೆಸಿರುವ ಜನರು ಎರಡು ಹೊತ್ತಿನ ಊಟಕ್ಕೂ ಪರದಾಡುತ್ತಿರುವ ಪರಿಸ್ಥಿತಿ ನಿರ್ಮಾಣವಾಗಿದೆ.
ಅದರಲ್ಲೂ ಹೆಣ್ಣುಮಕ್ಕಳ ಸಮಸ್ಯೆಗಳನ್ನು ಕೇಳುವವರೇ ಇಲ್ಲದಂತಾಗಿದೆ. ಸರಿಯಾದ ನಿದ್ರೆ, ಒಂದು ಹೊತ್ತಿನ ಊಟವು ಸಿಗದೆ ಹಲವು ಕುಟುಂಬಗಳು ಸಂಕಷ್ಟದಲ್ಲಿ ಸಿಲುಕಿಕೊಂಡಿದೆ. ಇಂತಹ ಸನ್ನಿವೇಷದಲ್ಲಿ ತಂದೆಯೊಬ್ಬ ತನ್ನ 9 ವರ್ಷದ ಬಾಲಕಿಯನ್ನು 55 ವರ್ಷದ ವ್ಯಕ್ತಿಗೆ ಮಾರಾಟ ಮಾಡಿರುವ ಘಟನೆ ಇದೀಗ ಬೆಳಕಿಗೆ ಬಂದಿದೆ. ಕಷ್ಟದ ಜೀವನವಿರುವಾಗ ಮಗಳನ್ನು ನೋಡಿಕೊಳ್ಳಲು ಕಷ್ಟವಾಗುತ್ತಿದೆ ಎಂಬ ಕಾರಣಕ್ಕೆ ಮಾರಾಟ ಮಾಡಿದ್ದಾನೆ.
ಕುಟುಂಬ ನಿರ್ವಹಣೆಗಾಗಿ ಕಷ್ಟಪಡುವ ತಂದೆ!
ಮಗಳನ್ನು ಮಾರಿದ ತಂದೆಯ ಹೆಸರು ಅಬ್ದುಲ್ ಮಲಿಕ್ ಎಂದಾಗಿದ್ದು, ಆತ ತನ್ನ 9 ವರ್ಷದ ಪರ್ವಾನಾ ಮಲಿಕ್ ಹೆಸರಿನ ಮಗಳನ್ನು ಮಧ್ಯವಯಸ್ಕ ವ್ಯಕ್ತಿಯೊಬ್ಬನಿಗೆ ಮಾರಾಟ ಮಾಡಿದ್ದಾನೆ. ಅಬ್ದುಲ್ ಮಲಿಕ್ ಅವರ ಕುಟುಂಬದಲ್ಲಿ ಎಂಟು ಜನರಿದ್ದು, ಎಲ್ಲರೂ ಪರಿಹಾರ ಶಿಬಿರಗಳಲ್ಲಿ ವಾಸಿಸುತ್ತಿದ್ದಾರೆ. ಕುಟುಂಬವನ್ನು ನೋಡಿಕೊಳ್ಳಲು ಸಾಧ್ಯವಾಗದೆ ಕಷ್ಟಪಡುತ್ತಿರುವ ಅಬ್ದುಲ್ ಕೊನೆಗೆ ಮಗಳನ್ನು ಮಾರಾಟ ಮಾಡುವ ಯೋಚನೆಗೆ ಬಂದಿದ್ದಾನೆ. ಕೊನೆಗೆ  55 ವರ್ಷದ ವ್ಯಕ್ತಿಗೆ ಮಾರಾಟ ಮಾಡಿದ್ದಾನೆ.
ಬಿಕ್ಕಿ ಬಿಕ್ಕಿ ಅತ್ತ ಅಬ್ದುಲ್ ಮಲಿಕ್
ಮಗಳ ಮಾರಾಟ ಒಪ್ಪಂದಕ್ಕೆ ಸಹಿ ಹಾಕಿದ ನಂತರ ಅಬ್ದುಲ್ ಮಲಿಕ್ ಅಳುತ್ತಾ ಮಾತನಾಡಿದ್ದಾನೆ. ಈಗ ಇದು ನಿಮ್ಮ (ಕೊರ್ಬಾನ್) ವಧು, ದಯವಿಟ್ಟು ಅವಳನ್ನು ನೋಡಿಕೊಳ್ಳಿ, ಈಗ ಆಕೆಯನ್ನು ನೋಡಿಕೊಳ್ಳುವ ಜವಾಬ್ದಾರಿ ನಿಮ್ಮದು, ಅವಳನ್ನು ಕೊಲ್ಲಬೇಡಿ' ಎಂದು ಅಬ್ದುಲ್ ಮಲಿಕ್ ಹೇಳಿದ್ದಾನೆ.
ಮಗಳು ಪರ್ವಾನಾ ಈ ಬಗ್ಗೆ ಮಾತನಾಡಿದ್ದು, ನಮಗೆ ತಿನ್ನಲು ಏನೂ ಇಲ್ಲದ ಕಾರಣ ನನ್ನ ತಂದೆ ನನ್ನನ್ನು ಮಾರಿದ್ದಾರೆ. ನನ್ನನ್ನು ಒಬ್ಬ ಮುದುಕನಿಗೆ ಮಾರಾಟ ಮಾಡಿದ್ದಾರೆ ಎಂದು ಹೇಳಿದ್ದಾಳೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Mallikarjun Kharge: ಐಟಿ, ಇಡಿ ಬಿಟ್ಟು ಕಾಂಗ್ರೆಸ್ ಸರ್ಕಾರ ಬೀಳಿಸ್ತಾರೆ ಹುಷಾರ್: ಎಚ್ಚರಿಕೆ ಕೊಟ್ಟ ಖರ್ಗೆ

National Herald case ನಲ್ಲಿ ಸುಮ್ ಸುಮ್ನೇ ಸೋನಿಯಾ ಗಾಂಧಿ, ರಾಹುಲ್ ಗಾಂಧಿಯವರಿಗೆ ತೊಂದರೆ ಕೊಡ್ತಿದೆ ಕೇಂದ್ರ: ಮಲ್ಲಿಕಾರ್ಜುನ ಖರ್ಗೆ

Waqf Bill:ವಕ್ಫ್ ಮಂಡಳಿಯಲ್ಲಿ ಮುಸ್ಲಿಮೇತರರಿರುವಂತೆ ಹಿಂದೂ ಟ್ರಸ್ಟ್ ಗಳಲ್ಲಿ ಮುಸ್ಲಿಮರಿಗೆ ಅವಕಾಶ ಕೊಡ್ತೀರಾ: ಸುಪ್ರೀಂಕೋರ್ಟ್

Bengaluralli ಏನಾಗುತ್ತಿದೆ, ಮಹಿಳೆಗೆ ಮರ್ಮಾಂಗ ತೋರಿಸಿ ಯುವಕನಿಂದ ಅಸಭ್ಯ ವರ್ತನೆ

ಗಣತಿ ಸುನಾಮಿಯಲ್ಲಿ ಸಿಎಂ ಸಿದ್ದರಾಮಯ್ಯ ಕೊಚ್ಚಿ ಹೋಗುತ್ತಾರೆ: ಕುಮಾರಸ್ವಾಮಿ

ಮುಂದಿನ ಸುದ್ದಿ
Show comments