Webdunia - Bharat's app for daily news and videos

Install App

ಉಗ್ರರಿಂದ ಆಧಾರ್ ಕಾರ್ಡು ದುರ್ಬಳಕೆ!

Webdunia
ಮಂಗಳವಾರ, 19 ಏಪ್ರಿಲ್ 2022 (12:39 IST)
ಶ್ರೀನಗರ : ಪಾಕಿಸ್ತಾನ ಮೂಲದ ಉಗ್ರರು ಕಾಶ್ಮೀರಕ್ಕೆ ಆಗಮಿಸಿ ಭಾರತದಲ್ಲಿನ ಆಧಾರ್ ಕಾರ್ಡುಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವ ವಿಷಯ ಬೆಳಕಿಗೆ ಬಂದಿದೆ.

ಹೀಗಾಗಿ ಇಂಥ ದುರ್ಬಳಕೆಯನ್ನು ಪತ್ತೆ ಮಾಡಲು ಆ ಕ್ಷಣದಲ್ಲಿ ದುರ್ಬಳಕೆ ಮಾಹಿತಿ ಲಭ್ಯವಾಗುವ ತಂತ್ರಜ್ಞಾನ ರೂಪಿಸುವಂತೆ ಆಧಾರ್ ಪ್ರಾಧಿಕಾರಕ್ಕೆ ಪತ್ರ ಬರೆಯಲು ಜಮ್ಮು-ಕಾಶ್ಮೀರ ಪೊಲೀಸರು ನಿರ್ಧರಿಸಿದ್ದಾರೆ.

ಇತ್ತೀಚೆಗೆ ಸಿಆರ್ಪಿಎಫ್ ಯೋಧರ ಮೇಲೆ ದಾಳಿ ಮಾಡಿದ್ದ ಪಾಕಿಸ್ತಾನ ಮೂಲದ ಇಬ್ಬರು ಉಗ್ರರನ್ನು ಶ್ರೀನಗರದಲ್ಲಿ ಹತ್ಯೆ ಮಾಡಲಾಗಿತ್ತು. ಅವರ ಬಳಿ ಆಗ ಆಧಾರ್ ಕಾರ್ಡುಗಳು ಪತ್ತೆಯಾಗಿದ್ದವು.

ಜಮ್ಮು ವಿಳಾಸದ ಮೂಲ ಆಧಾರ್ ನಂಬರ್ ಇದ್ದ ಆಧಾರ್ ಕಾರ್ಡಿನಲ್ಲಿ ಫೋಟೋವನ್ನು ಮಾತ್ರ ಈ ಉಗ್ರರು ‘ಸೂಪರ್ ಇಂಪೋಸ್’ ಮಾಡಿಕೊಂಡಿದ್ದರು. ಇದು ಭದ್ರತಾ ಪಡೆಗಳ ಕಳವಳಕ್ಕೆ ಕಾರಣವಾಗಿದೆ.

ಹೀಗಾಗಿ ಆಧಾರ್ ದುರ್ಬಳಕೆ ಆಗುತ್ತಿದ್ದರೆ, ಆ ಕ್ಷಣವೇ ಸಂಬಂಧಿಸಿದ ಇಲಾಖೆಗೆ ಮಾಹಿತಿ ಲಭಿಸುವ ತಂತ್ರಜ್ಞಾನ ರೂಪಿಸಬೇಕು ಎಂದು ಆಧಾರ್ ಪ್ರಾಧಿಕಾರಕ್ಕೆ ಪತ್ರ ಬರೆಯಲು ಕಾಶ್ಮೀರ ಪೊಲೀಸರು ನಿರ್ಧರಿಸಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅನುಭವ ಮಂಟಪ ಮುಗಿಸಲು ನಿಮ್ಮ ಡಿ.ಕೆ.ಶಿವಕುಮಾರ್ ಬಿಡುತ್ತಾರಾ: ಬಿ.ವೈ.ವಿಜಯೇಂದ್ರ

CET exam: ಬ್ರಾಹ್ಮಣರ ಜನಿವಾರ ತೆಗೆಸಿದ್ದು ನಿಜ ಆದ್ರೆ ಕ್ರಮ ಕೈಗೊಳ್ತೀವಿ: ಸಚಿವ ಡಾ ಎಂಸಿ ಸುಧಾಕರ್

West Bengal: ಪಶ್ಚಿಮ ಬಂಗಾಲ ಹಿಂಸಾಚಾರದಲ್ಲಿ ಮೂಗುತೂರಿಸಿದ ಬಾಂಗ್ಲಾದೇಶ: ನಿಮ್ದು ನೀವು ನೋಡ್ಕೊಳ್ಳಿ ಎಂದ ಭಾರತ

Arecanut price today: ಅಡಿಕೆ, ಕಾಳುಮೆಣಸಿಗೆ ಬೆಲೆ ಇಂದು ಎಷ್ಟಾಗಿದೆ ನೋಡಿ

Gold Price today: ಚಿನ್ನ ಖರೀದಿ ಮಾಡುವವರಿಗೆ ಮತ್ತೆ ಶಾಕ್: ಇಂದಿನ ದರ ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments