Webdunia - Bharat's app for daily news and videos

Install App

Operation Sindoor ಮೂಲಕ ಹಳೆಯ ಸೇಡು ತೀರಿಸಿಕೊಂಡ ಅಜಿತ್ ದೋವಲ್

Krishnaveni K
ಗುರುವಾರ, 8 ಮೇ 2025 (15:19 IST)
Photo Credit: X
ಲಾಹೋರ್: 1999 ರಲ್ಲಿ ಏರ್ ಇಂಡಿಯಾ ವಿಮಾನ ಅಪಹರಿಸಿ ಉಗ್ರ ಮಸೂದ್ ಅಜರ್ ಬಿಡುಗಡೆಗೆ ಕಾರಣವಾಗಿದ್ದ ಉಗ್ರ ಅಬ್ದುಲ್ ರೌಫ್ ಮಸೂದ್ ಇದೀಗ ಆಪರೇಷನ್ ಸಿಂಧೂರ್ ನಲ್ಲಿ ಫಿನಿಶ್ ಆಗಿದ್ದಾನೆ ಎಂಬ ಸುದ್ದಿ ಬಂದಿದೆ. ಆ ಮೂಲಕ ಹಳೆಯ ಸೇಡಿಗೆ ಅಜಿತ್ ದೋವಲ್ ಸೇಡು ತೀರಿಸಿಕೊಂಡಂತಾಗಿದೆ.

1999 ರಲ್ಲಿ ಅಟಲ್ ಬಿಹಾರಿ ವಾಜಪೇಯಿ ಪ್ರಧಾನಿಯಾಗಿದ್ದಾಗ ಏರ್ ಇಂಡಿಯಾ ವಿಮಾನ ಅಪಹರಣವಾಗಿತ್ತು. ವಿಮಾನದಲ್ಲಿದ್ದ ಪ್ರಯಾಣಿಕರನ್ನು ಒತ್ತೆಯಾಳುಗಳನ್ನಾಗಿಸಿದ್ದ ಉಗ್ರರು ಭಾರತದ ವಶದಲ್ಲಿದ್ದ ಪ್ರಮುಖ ಉಗ್ರ ಮಸೂದ್ ಅಜರ್ ಬಿಡುಗಡೆಗೆ ಬೇಡಿಕೆಯಿಟ್ಟಿದ್ದರು. ಆಗ ಹಾಲಿ ಭದ್ರತಾ ಸಲಹೆಗಾರ ಅಜಿತ್ ದೋವಲ್ ಗುಪ್ತಚರ ಇಲಾಖೆ ಮುಖ್ಯಸ್ಥರಾಗಿದ್ದರು. ಪ್ರಯಾಣಿಕರ ಬದಲಿಗೆ ಉಗ್ರನನ್ನು ಬಿಡುಗಡೆ ಮಾಡುವ ವಿಚಾರದಲ್ಲಿ ಅಜಿತ್ ದೋವಲ್ ಅಂದು ಮೃದು ಧೋರಣೆ ತಳೆದರು ಎಂಬ ಅಪವಾದ ಅವರ ಮೇಲಿತ್ತು. ಇಂದು ಅದೇ ಅಜಿತ್ ದೋವಲ್ ನೇತೃತ್ವದಲ್ಲೇ ಅದೇ ಉಗ್ರನನ್ನು ಭಾರತೀಯ ಸೇನೆ ಫಿನಿಶ್ ಮಾಡಿ ಸೇಡು ತೀರಿಸಿಕೊಂಡಂತಾಗಿದೆ.

Photo Credit: X
ಈ ವಿಮಾನ ಅಪಹರಣದ ಪ್ರಮುಖ ರೂವಾರಿ ಅಬ್ದುಲ್ ರೌಫ್ ಮಸೂದ್. ಈತ ಜೈಶ್ ಎ ಮೊಹಮ್ಮದ್ ಸಂಘಟನೆಯ ಪ್ರಮುಖ ನಾಯಕ. ನಿನ್ನೆ ತಡರಾತ್ರಿ ಭಾರತೀಯ ಸೇನೆ ನಡೆಸಿದ್ದ ಆಪರೇಷನ್ ಸಿಂಧೂರ್ ನಲ್ಲಿ ಈತನೂ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.

ಈತ ಮಸೂದ್ ಅಜರ್ ನ ಸಹೋದರನೂ ಹೌದು. ನಿನ್ನೆಯ ಭಾರತೀಯ ಸೇನೆಯ ದಾಳಿಯಲ್ಲಿ ಮಸೂದ್ ಅಜರ್ ನ ಕುಟುಂಬ ಸದಸ್ಯರೆಲ್ಲರೂ ಸಾವನ್ನಪ್ಪಿದ್ದರು. ಈ ಪೈಕಿ ಅಬ್ದುಲ್ ರೌಫ್ ಕೂಡಾ ಸೇರ್ಪಡೆಯಾಗಿದ್ದಾನೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಪಿಎಸ್‍ಸಿ ಪರೀಕ್ಷಾರ್ಥಿಗಳ ಹೋರಾಟಕ್ಕೆ ಬಿಜೆಪಿ ಬೆಂಬಲ: ಛಲವಾದಿ ನಾರಾಯಣಸ್ವಾಮಿ

Operation Sindoor: ಸೇನಾ ಕಾರ್ಯಾಚರಣೆಯಲ್ಲಿ 100 ಉಗ್ರರು ಫಿನೀಷ್‌: ವಿಪಕ್ಷಗಳಿಗೆ ರಾಜನಾಥ್‌ ಮಾಹಿತಿ

Karnataka BJP: ಆಪರೇಷನ್ ಸಿಂಧೂರ್ ಯಶಸ್ವಿಯಾಗಲೆಂದು ಬಿಜೆಪಿ ಪೂಜೆ

Rahul Gandhi: ಆಪರೇಷನ್ ಸಿಂದೂರ ಬಳಿಕ ರಾಹುಲ್ ಗಾಂಧಿ, ಖರ್ಗೆ ಇಷ್ಟು ಗಂಭೀರ ಯಾಕೆ: ನೆಟ್ಟಿಗರ ಪ್ರಶ್ನೆ

Operation Sindoor: ಸರ್ವಪಕ್ಷ ಸಭೆಗೆ ಮತ್ತೆ ಪ್ರಧಾನಿ ಮೋದಿ ಗೈರು: ವಿಪಕ್ಷಗಳ ಕೆಂಗಣ್ಣು

ಮುಂದಿನ ಸುದ್ದಿ
Show comments