ಮನುಷ್ಯನ ದೇಹಕ್ಕೆ ಹಂದಿಯ ಕಿಡ್ನಿ ಕಸಿ ಮಾಡುವಲ್ಲಿ ಅಮೆರಿಕದ ಸರ್ಜನ್​ಗಳು ಯಶಸ್ವಿ!

Webdunia
ಬುಧವಾರ, 20 ಅಕ್ಟೋಬರ್ 2021 (14:44 IST)
ವಾಷಿಂಗ್ಟನ್ : ಇದೇ ಮೊದಲ ಬಾರಿಗೆ ಹಂದಿಯ ಮೂತ್ರಪಿಂಡವನ್ನು ಮನುಷ್ಯನ ದೇಹಕ್ಕೆ ಅಳವಡಿಸುವಲ್ಲಿ ಅಮೆರಿಕದ ಸರ್ಜನ್ಗಳು ಯಶಸ್ವಿಯಾಗಿದ್ದಾರೆ. ಇದು ವೈದ್ಯಕೀಯ ಕ್ಷೇತ್ರದಲ್ಲಿ ಮಹತ್ವದ ಮೈಲಿಗಲ್ಲಾಗಿದೆ.

ಹಂದಿಯ ಕಿಡ್ನಿಯನ್ನು ಅಳವಡಿಸಿರುವ ರೋಗಿಯ ದೇಹದಲ್ಲಿ ಯಾವುದೇ ಅಡ್ಡಪರಿಣಾಮಗಳು ಕಂಡುಬಂದಿಲ್ಲ.
ನ್ಯೂಯಾರ್ಕ್ ನಗರದ ಎನ್ವೈಯು ಲ್ಯಾಂಗೋನ್ ಹೆಲ್ತ್ಕೇರ್ ಸೆಂಟರ್ನಲ್ಲಿ ಈ ಪರೀಕ್ಷೆಯನ್ನು ಸರ್ಜನ್ಗಳು ಯಶಸ್ವಿಯಾಗಿ ಮಾಡಿದ್ದಾರೆ. ಹಂದಿಯ ಕಿಡ್ನಿಯನ್ನು ರೋಗಿಗೆ ಅಳವಡಿಸುವ ಮುನ್ನ ಅದರ ಜೀನ್ಸ್ ಅನ್ನು ಬದಲಾವಣೆ ಮಾಡಲಾಯಿತು. ಅದರಿಂದ ವಂಶವಾಹಿಗಳು ಬದಲಾಗಿರುವುದರಿಂದ ಅದರ ಅಂಗಾಂಶಗಳು ಯಾವುದಕ್ಕೂ ತಕ್ಷಣವೇ ವ್ಯತಿರಕ್ತವಾಗಿ ಪ್ರತಿಕ್ರಿಯೆ ನೀಡುವುದಿಲ್ಲ. ಅಂದಹಾಗೆ, ಈ ಕಿಡ್ನಿ ಕಸಿಯಾಗಿರುವ ರೋಗಿಯ ಮೆದುಳು ನಿಷ್ಕ್ರಿಯಗೊಂಡಿತ್ತು. ಕಿಡ್ನಿ ವೈಫಲ್ಯದಿಂದ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ವೆಂಟಿಲೇಟರ್ನಲ್ಲಿದ್ದ ಅವರ ಲೈಫ್ ಸಪೋರ್ಟ್ ಅನ್ನು ತೆಗೆಯುವ ಮುನ್ನ ಆಕೆಯ ದೇಹವನ್ನು ವೈದ್ಯಕೀಯ ಪ್ರಯೋಗಕ್ಕೆ ಬಳಸಿಕೊಳ್ಳುವಂತೆ ಆ ರೋಗಿಯ ಕುಟುಂಬಸ್ಥರು ಆಸ್ಪತ್ರೆಯ ವೈದ್ಯರಿಗೆ ಅನುಮತಿ ನೀಡಿದ್ದರು.
ಹೀಗಾಗಿ, ಮೆದುಳು ಡೆಡ್ ಆಗಿದ್ದ ರೋಗಿಯ ಕಿಡ್ನಿಯನ್ನು ತೆಗೆದು ಹಂದಿಯ ಕಿಡ್ನಿಯನ್ನು ಅಳವಡಿಸಿ ಆ ಆಸ್ಪತ್ರೆಯ ಸರ್ಜನ್ಗಳು ಪ್ರಯೋಗ ಮಾಡಿದ್ದಾರೆ. ಈ ಪ್ರಯೋಗದ ಬಳಿಕ ಆ ರೋಗಿಯ ಲೈಫ್ ಸಪೋರ್ಟ್ ಅನ್ನು ತೆಗೆಯಲಾಗಿದೆ. ಅದಕ್ಕೂ ಮೊದಲು 3 ದಿನಗಳವರೆಗೆ ಹೊಸ ಮೂತ್ರಪಿಂಡವನ್ನು ಆಕೆಯ ರಕ್ತನಾಳಗಳಿಗೆ ಜೋಡಿಸಲಾಗಿದೆ. ಹಂದಿಯ ಕಿಡ್ನಿಯನ್ನು ಅಳವಡಿಸಿದ ನಂತರ ಆಕೆಯ ದೇಹದಲ್ಲಿ ಯಾವ ರೀತಿಯ ಬದಲಾವಣೆಗಳು ಕಂಡುಬಂದವು ಎಂಬುದನ್ನು ಪರೀಕ್ಷಿಸಲಾಗಿದೆ. ಹಂದಿಯ ಕಿಡ್ನಿ ಜೋಡಣೆ ಮಾಡಿದ್ದರಿಂದ ಆ ರೋಗಿಯ ದೇಹದಲ್ಲಿ ಹೆಚ್ಚೇನೂ ಬದಲಾವಣೆ ಕಂಡುಬಂದಿಲ್ಲವಾದ್ದರಿಂದ ಈ ಪ್ರಯೋಗ ಯಶಸ್ವಿಯಾಗಿದೆ ಎಂದೇ ಹೇಳಬಹುದು ಎಂದು ಸಂಶೋಧಕರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಅಕ್ಕನನ್ನು ಮಾರಾಟ ಮಾಡ್ಬೇಡಿ, ಅಕ್ಕನ ಮಾತು ಕೇಳಿದ್ರೆ ಕಣ್ಣೀರು ಬರುತ್ತೆ

ವಿಧಾನಸಭೆ ಚುನಾವಣೆ, ಬಿಹಾರದಲ್ಲಿ ರಾಹುಲ್ ಗಾಂಧಿ ಮೊದಲ ರ್ಯಾಲಿ

ದ್ವೇಷ ಭಾಷಣ ಮಾಡುವವರ ಬಗ್ಗೆ ಮಂಗಳೂರಿನಲ್ಲಿ ಗುಡುಗಿದ ಸಿದ್ದರಾಮಯ್ಯ

ಮಹತ್ವದ ಪೋಸ್ಟ್ ಹಂಚಿಕೊಂಡ ಶ್ರೀರಾಮ ಜನ್ಮಭೂಮಿ ಟ್ರಸ್ಟ್‌

ತನ್ನವರನ್ನು ಕಳೆದುಕೊಂಡ ಸಂತ್ರಸ್ತರ ಕುಟುಂಬದ ಜತೆ ವಿಜಯ್ ನಡೆ ಹೇಗಿತ್ತು ಗೊತ್ತಾ

ಮುಂದಿನ ಸುದ್ದಿ
Show comments