Webdunia - Bharat's app for daily news and videos

Install App

ಅರುಣಾಚಲ ಜನತೆ ಭಾರತದ ಅಕ್ರಮ ಅಡಳಿತದಿಂದ ಬೇಸತ್ತಿದ್ದಾರೆ: ಚೀನಾ ಡೈಲಿ

Webdunia
ಬುಧವಾರ, 12 ಏಪ್ರಿಲ್ 2017 (15:39 IST)
ಅರುಣಾಚಲ ಪ್ರದೇಶದ ತವಂಗ್ ಜಿಲ್ಲೆಗೆ ಟಿಬೆಟ್ ಧರ್ಮಗುರು ದಲೈ ಲಾಮಾ ಭೇಟಿ ನೀಡುವುದನ್ನು ಸದಾ ವಿರೋಧಿಸುತ್ತಿರುವ ಚೀನಾ, ಭಾರತದ ಅಕ್ರಮ ಅಡಳಿತದಿಂದ ಜನತೆ ಬೇಸತ್ತಿದ್ದಾರೆ ಎಂದು ವರದಿ ಮಾಡಿದೆ. 
 
ಭಾರತ ಸರಕಾರದ ಆಕ್ರಮ ಅಡಳಿತದಿಂದಾಗಿ ಅರುಣಾಚಲ ಪ್ರದೇಶದ ಜನತೆ ಕಠಿಣ ಪರಿಸ್ಥಿತಿಯಲ್ಲಿ ಜೀವನ ಸಾಗಿಸುತ್ತಿದ್ದು ಚೀನಾ ದೇಶಕ್ಕೆ ಸೇರ್ಪಡೆಯಾಗಲು ಬಯಸಿದ್ದಾರೆ. ದಲೈ ಲಾಮಾ ಅವರು ತವಂಗ್ ಭೇಟಿ ನೀಡಲು ಅವಕಾಶ ನೀಡಿರುವ ಭಾರತ ಸರಕಾರವನ್ನು ಸರಕಾರಿ ಸ್ವಾಮ್ಯದ ಚೀನಾ ಡೈಲಿ ಟೀಕಿಸಿದೆ.  
 
ಚೀನಾ ಸರಕಾರದ ದೌರ್ಜನ್ಯದಿಂದ ಸಾವಿರಾರು ಟಿಬೆಟ್ ಯುವಕರು ಆತಂಕದ ಸ್ಥಿತಿ ಎದುರಿಸುತ್ತಿದ್ದು 120ಕ್ಕೂ ಹೆಚ್ಚು ಪ್ರತಿಭಟನಾಕಾರರು ಸಜೀವವಾಗಿ ದಹಿಸಿಕೊಂಡಿದ್ದಾರೆ. ಆದಾಗ್ಯೂ ಟಿಬೆಟ್‌ನ ದಕ್ಷಿಣ ಭಾಗದ ಜನತೆ ಭಾರತ ಸರಕಾರದ ಕಿರುಕುಳ ಎದುರಿಸುತ್ತಿದ್ದಾರೆ ಎನ್ನುವ ಆರೋಪ ಚೀನಾ ಮಾಡಿದೆ.
 
ಟಿಬೆಟ್ ಬೌದ್ಧದರ್ಮದ ಕೇಂದ್ರಸ್ಥಾನವಾದ ತವಂಗ್ ಜಿಲ್ಲೆಗೆ ದಲೈಲಾಮಾ ಭೇಟಿಗೆ ಅವಕಾಶ ನೀಡಿದ ಭಾರತ ಸರಕಾರ ಅವರನ್ನು ಬೆಂಬಲಿಸುತ್ತಿದೆ ಎಂದು ಚೀನಾ ಡೈಲಿ ಪತ್ರಿಕೆ ಆಕ್ರೋಶ ವ್ಯಕ್ತಪಡಿಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಪರೇಷನ್ ಸಿಂಧೂರ್‌ನಿಂದ ಪಾಕ್‌ ಗಡಿಯಲ್ಲಿ ಪ್ರತಿ ಹೆಜ್ಜೆಯಿಡುವಾಗಲೂ ಯೋಚಿಸುವಂತೆ ಮಾಡಿದೆ: ಶಶಿ ತರೂರ್‌

Karnataka Weather: ವಾರದ ಮಳೆಗೆಯೇ ಸುಸ್ತಾದ ದಕ್ಷಿಣ ಕನ್ನಡ ಜನತೆ

Dehli Rain: ವಿಮಾನ ಹಾರಾಟಗಳಲ್ಲೂ ವ್ಯತ್ಯಯ ಸಾಧ್ಯತೆ, ಪ್ರಯಾಣಿಕರಿಗೆ ಹೊಸ ಸಂದೇಶ

Covid 19: ಕೋವಿಡ್‌ಗೆ ರಾಜ್ಯದಲ್ಲಿ ಮೊದಲ ಬಲಿ, ಹೆಚ್ಚಿದ ಆತಂಕ

ಅವರೇ ಹೇಳಿರುವಂತೆ ನಾಯಿಯೇ ನಾರಾಯಣ, ಹಾಗಾದ್ರೆ ನಾರಾಯಣಸ್ವಾಮಿಯನ್ನು ಏನೆಂದು ಕರೆಯಬೇಕು: ಪ್ರಿಯಾಂಕ್ ಖರ್ಗೆ

ಮುಂದಿನ ಸುದ್ದಿ
Show comments