Webdunia - Bharat's app for daily news and videos

Install App

ಅಮೆರಿಕದಲ್ಲಿ ಟ್ರಂಪ್‌ ಜಯಿಸುತ್ತಿದ್ದಂತೆ ಡಾಲರ್‌ ಚೇತರಿಕೆ, ರೂಪಾಯಿ ಸೇರಿದಂತೆ ವಿವಿಧ ಕರೆನ್ಸಿ ಕುಸಿತ

Sampriya
ಬುಧವಾರ, 6 ನವೆಂಬರ್ 2024 (19:06 IST)
Photo Courtesy X
ನವದೆಹಲಿ:  ರಿಪಬ್ಲಿಕನ್ ಪಕ್ಷದ ಡೊನಾಲ್ಡ್ ಟ್ರಂಪ್‌ ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ಎರಡನೇ ಬಾರಿ ಗೆಲುವು ದಾಖಲಿಸಿರುವುದಾಗಿ ಘೋಷಿಸುತ್ತಿದ್ದಂತೆ, ಭಾರತದ ರೂಪಾಯಿ ಸೇರಿದಂತೆ ವಿವಿಧ ರಾಷ್ಟ್ರಗಳ ಕರೆನ್ಸಿಗಳ ಮೌಲ್ಯ ದಾಖಲೆಯ ಕುಸಿತ ಕಂಡಿವೆ.

ರೂಪಾಯಿ ಮೌಲ್ಯವು ಕಳೆದ ನಾಲ್ಕು ತಿಂಗಳ ಕನಿಷ್ಠಕ್ಕೆ ಕುಸಿದಿದೆ. ಹಿಂದಿನ ದರಕ್ಕಿಂತ ಶೇ 0.2ರಷ್ಟು ಕುಸಿತ ದಾಖಲಿಸಿರುವ  ಭಾರತದ ರೂಪಾಯಿ, ಬುಧವಾರ ಪ್ರತಿ ಡಾಲರ್‌ಗೆ ₹84.28ರಷ್ಟು ದಾಖಲಿಸಿದೆ.

2024ರ ಅಮೆರಿಕದ ಚುನಾವಣೆಯಲ್ಲಿ ಡೆಮಾಕ್ರೆಟಿಕ್ ಪಕ್ಷದ ಕಮಲಾ ಹ್ಯಾರಿಸ್ ವಿರುದ್ಧ ರಿಪಬ್ಲಿಕನ್ ಪಕ್ಷದ ಡೊನಾಲ್ಡ್ ಟ್ರಂಪ್ ವಿಜಯ ಸಾಧಿಸಿದ್ದಾರೆ ಎಂದು ಫಾಕ್ಸ್‌ ನ್ಯೂಸ್‌ ಈಗಾಗಲೇ ಘೋಷಿಸಿದೆ. ಆದರೆ ಉಳಿದ ಮಾಧ್ಯಮಗಳು ಇನ್ನಷ್ಟೇ ಫಲಿತಾಂಶ ಪ್ರಕಟಿಸಬೇಕಿದೆ. ಇದರ ಬೆನ್ನಲ್ಲೇ ಡಾಲರ್‌ ತನ್ನ ಮೌಲ್ಯ ಹೆಚ್ಚಿಸಿಕೊಂಡಿದೆ.

ಡಾಲರ್‌ ಮೌಲ್ಯವು ಶೇ 1.5ರಷ್ಟು ಹೆಚ್ಚಳವಾಗಿದೆ. ಮತ್ತೊಂದೆಡೆ ಚೀನಾದ ಯಾನ್‌ ಶೇ 1.1ರಷ್ಟು ಕುಸಿದಿದೆ. ಒಂದೊಮ್ಮೆ ಯಾನ್‌ ತ್ವರಿತವಾಗಿ ಪ್ರತಿಕ್ರಿಯಿಸಿದರೆ, ಆರ್‌ಬಿಐ ದುತ್ತನೆ ಎದುರಾಗಿರುವ ಪರಿಸ್ಥಿತಿಯನ್ನು ನಿಭಾಯಿಸಲು ಪ್ರಯತ್ನಿಸಲಿದೆ. ಆದರೆ ಸದ್ಯಕ್ಕೆ ರೂಪಾಯಿ ದುರ್ಬಲವಾಗಲು ಕೇಂದ್ರೀಯ ಬ್ಯಾಂಕ್‌ ಬಿಡುವ ಸಾಧ್ಯತೆಯೇ ಹೆಚ್ಚು ಎಂದಿದ್ದಾರೆ.

ಆಮದು ವಸ್ತುಗಳ ಮೇಲೆ ಶೇ 10ರಷ್ಟು ಹಾಗೂ ಚೀನಾದ ವಸ್ತುಗಳ ಮೇಲೆ ಶೇ 60ರಷ್ಟು ಆಮದು ಶುಲ್ಕ ವಿಧಿಸಲಾಗುವುದು ಎಂದು ಡೊನಾಲ್ಡ್ ಟ್ರಂಪ್‌ ತಮ್ಮ ಚುನಾವಣಾ ಪ್ರಚಾರದಲ್ಲಿ ಹೇಳಿದ್ದರು. ಟ್ರಂಪ್ ಅವರ ಮಾತಿನಂತೆಯೇ ವಲಸೆ ನೀತಿ, ತೆರಿಗೆ ಪದ್ಧತಿ ಹಾಗೂ ಸುಂಕ ಬದಲಾವಣೆ ನೀತಿ ಜಾರಿಗೆ ಬಂದಿದ್ದೇ ಆದಲ್ಲಿ, ಅಮೆರಿಕದಲ್ಲಿ ಹಣದುಬ್ಬರ ಪ್ರಮಾಣ ಏರಿಕೆಯಾಗಲಿದೆ ಎಂಬ ಲೆಕ್ಕಾಚಾರ ನಡೆಯುತ್ತಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಷಪ್ರಾಶನದಿಂದ ಐದು ಹುಲಿಗಳು ಸಾವು ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಎಂದ ಸಿದ್ದರಾಮಯ್ಯ

ಒಡಿಶಾದ ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ: ಮೂರು ಮಂದಿ ಸಾವು, ಹಲವರಿಗೆ ಗಾಯ

ಉತ್ತರಾಖಂಡದ ಬಾಲಿಗಢದಲ್ಲಿ ಭೀಕರ ಮೇಘಸ್ಫೋಟ: ಪ್ರವಾಹದಲ್ಲಿ ಸಿಲುಕಿ 9 ಕಾರ್ಮಿಕರ ಕಣ್ಮರೆ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಮುಂದಿನ ಸುದ್ದಿ
Show comments