ದಾಳಿ : ಮೆಟ್ರೋ ನಿಲ್ದಾಣ ಟಾರ್ಗೆಟ್ !

Webdunia
ಶುಕ್ರವಾರ, 4 ಮಾರ್ಚ್ 2022 (08:20 IST)
ಕೀವ್ : ಉಕ್ರೇನ್ ಮೇಲೆ ರಷ್ಯಾ ಪಡೆಗಳು ರಣಹದ್ದುಗಳಂತೆ ಮುಗಿಬಿದ್ದು ಭಾರೀ ವಿಧ್ವಂಸ ಸೃಷ್ಟಿಸುತ್ತಿವೆ.

ಎರಡು ದಿನಗಳಿಂದ ಭಾರೀ ದಾಳಿ ನಡೆಯುತ್ತಿದ್ದು, ರಷ್ಯಾ-ಉಕ್ರೇನ್ ಸೈನಿಕರ ಜೊತೆಗೆ ನಾಗರೀಕರ ಅಪಾರ ಸಂಖ್ಯೆಯಲ್ಲಿ ಸಾವನ್ನಪ್ಪುತ್ತಿದ್ದಾರೆ.

ಪ್ರಧಾನ ನಗರಗಳನ್ನು ಗುರಿಯಾಗಿಸಿಕೊಂಡು ರಷ್ಯಾ ಪಡೆಗಳು ದಾಳಿ ಮುಂದುವರೆಸಿವೆ. ಸರ್ಕಾರಿ ಆಸ್ತಿಗಳು, ಕಚೇರಿಗಳ ಜೊತೆ ಜೊತೆಗೆ ಈಗ ಪೌರರನ್ನು ಗುರಿಯಾಗಿಸಿಕೊಂಡು ವಿಧ್ವಂಸಕಾಂಡ ಸೃಷ್ಟಿಸ್ತಿದೆ. ಆಸ್ಪತ್ರೆಗಳು, ಶಾಲೆಗಳನ್ನು ಉಡೀಸ್ ಮಾಡುತ್ತಿದೆ.

ಡ್ರುಬಿ ನರೋದಿವ್ ಮೆಟ್ರೋ ನಿಲ್ದಾಣದ ಮೇಲೆ ಕ್ಷಿಪಣಿ ದಾಳಿ ನಡೆದು, ಅಪಾರ ಹಾನಿ ಸಂಭವಿಸಿದೆ. ಚೆರ್ನಿಹೀವ್ನಲ್ಲಿ ತೈಲಗಾರಗಳನ್ನು ಸ್ಫೋಟಿಸಲಾಗಿದೆ. ಖಾರ್ಕೀವ್ ನಗರದ ಮೇಲೆ ಈಗಲೂ ದಾಳಿ ಮುಂದುವರೆದಿದ್ದು, ಇಡೀ ನಗರ ಸ್ಮಶಾನ ಸದೃಶವಾಗಿದೆ.

ಕೆಲವೆಡೆ ರಷ್ಯಾ ಪಡೆಗಳು, ನಾಗರಿಕರನ್ನು ನೇರವಾಗಿ ಗುಂಡಿಟ್ಟು ಕೊಲ್ಲುತ್ತಿವೆ. ಜನಭಯಭೀತರಾಗಿದ್ದಾರೆ. ಒಬ್ಲಾಸ್ಟ್, ಬಲಾಕ್ಲಿಯಾ, ಲವಿವ್, ಮೈಕೋಲಿವ್ ನಗರಗಳ ಮೇಲೆಯೂ ದಾಳಿಗಳು ಆರಂಭವಾಗಿವೆ. ಕೀವ್ ತೊರೆಯುತ್ತಿರುವ ಪೌರರಿಗೆ ರಷ್ಯಾ ಸೇನೆ ಅಡ್ಡಿಪಡಿಸುತ್ತಿಲ್ಲ ಎನ್ನಲಾಗಿದೆ. ಈವರೆಗೂ 10ಲಕ್ಷಕ್ಕೂ ಹೆಚ್ಚು ಮಂದಿ ಉಟ್ಟಬಟ್ಟೆಯಲ್ಲಿ ಉಕ್ರೇನ್ ತೊರೆದಿದ್ದಾರೆ ಎಂದು ವರದಿಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ದೆಹಲಿಗೆ ಹೋಗುತ್ತಿದ್ದ ಸಿದ್ದರಾಮಯ್ಯ ಭಾರೀ ಅನಾಹುತದಿಂದ ಪಾರು

ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ಡಿಕೆ ಶಿವಕುಮಾರ್ ದಿಡೀರ್ ದೆಹಲಿಗೆ

ಶಾಲಾ ಭದ್ರತಾ ಸಿಬ್ಬಂದಿ ಮೇಲೆ ಬೀದಿ ನಾಯಿ ಅಟ್ಯಾಕ್: ತಕ್ಷಣವೇ ಅವರು ಮಾಡಿದ್ದೇನು, ಭಯಾನಕ ವಿಡಿಯೋ

ಪಿಂಪ್ರಿ ಚಿಂಚ್ವಡ್ನಲ್ಲಿ ಆಘಾತಕಾರಿ ಘಟನೆ: ಬಟ್ಟೆ ಅಂಗಡಿಯಲ್ಲಿ ಪ್ರೇಯಸಿಗೆ ಯದ್ವಾ ತದ್ವಾ ಹೊಡೆದ ಪ್ರಿಯಕರ Video

ಎಲ್ಲಾ ಇಲ್ಲಿಗೇ ನಿಂತಿಲ್ಲ... ರಾಜೀನಾಮೆ ಬೆನ್ನಲ್ಲೇ ಸಿದ್ದರಾಮಯ್ಯ ಹೇಳಿಕೆ ಗಮನಿಸಲೇಬೇಕು

ಮುಂದಿನ ಸುದ್ದಿ
Show comments