Webdunia - Bharat's app for daily news and videos

Install App

ದಾಳಿ : ಮೆಟ್ರೋ ನಿಲ್ದಾಣ ಟಾರ್ಗೆಟ್ !

Webdunia
ಶುಕ್ರವಾರ, 4 ಮಾರ್ಚ್ 2022 (08:20 IST)
ಕೀವ್ : ಉಕ್ರೇನ್ ಮೇಲೆ ರಷ್ಯಾ ಪಡೆಗಳು ರಣಹದ್ದುಗಳಂತೆ ಮುಗಿಬಿದ್ದು ಭಾರೀ ವಿಧ್ವಂಸ ಸೃಷ್ಟಿಸುತ್ತಿವೆ.

ಎರಡು ದಿನಗಳಿಂದ ಭಾರೀ ದಾಳಿ ನಡೆಯುತ್ತಿದ್ದು, ರಷ್ಯಾ-ಉಕ್ರೇನ್ ಸೈನಿಕರ ಜೊತೆಗೆ ನಾಗರೀಕರ ಅಪಾರ ಸಂಖ್ಯೆಯಲ್ಲಿ ಸಾವನ್ನಪ್ಪುತ್ತಿದ್ದಾರೆ.

ಪ್ರಧಾನ ನಗರಗಳನ್ನು ಗುರಿಯಾಗಿಸಿಕೊಂಡು ರಷ್ಯಾ ಪಡೆಗಳು ದಾಳಿ ಮುಂದುವರೆಸಿವೆ. ಸರ್ಕಾರಿ ಆಸ್ತಿಗಳು, ಕಚೇರಿಗಳ ಜೊತೆ ಜೊತೆಗೆ ಈಗ ಪೌರರನ್ನು ಗುರಿಯಾಗಿಸಿಕೊಂಡು ವಿಧ್ವಂಸಕಾಂಡ ಸೃಷ್ಟಿಸ್ತಿದೆ. ಆಸ್ಪತ್ರೆಗಳು, ಶಾಲೆಗಳನ್ನು ಉಡೀಸ್ ಮಾಡುತ್ತಿದೆ.

ಡ್ರುಬಿ ನರೋದಿವ್ ಮೆಟ್ರೋ ನಿಲ್ದಾಣದ ಮೇಲೆ ಕ್ಷಿಪಣಿ ದಾಳಿ ನಡೆದು, ಅಪಾರ ಹಾನಿ ಸಂಭವಿಸಿದೆ. ಚೆರ್ನಿಹೀವ್ನಲ್ಲಿ ತೈಲಗಾರಗಳನ್ನು ಸ್ಫೋಟಿಸಲಾಗಿದೆ. ಖಾರ್ಕೀವ್ ನಗರದ ಮೇಲೆ ಈಗಲೂ ದಾಳಿ ಮುಂದುವರೆದಿದ್ದು, ಇಡೀ ನಗರ ಸ್ಮಶಾನ ಸದೃಶವಾಗಿದೆ.

ಕೆಲವೆಡೆ ರಷ್ಯಾ ಪಡೆಗಳು, ನಾಗರಿಕರನ್ನು ನೇರವಾಗಿ ಗುಂಡಿಟ್ಟು ಕೊಲ್ಲುತ್ತಿವೆ. ಜನಭಯಭೀತರಾಗಿದ್ದಾರೆ. ಒಬ್ಲಾಸ್ಟ್, ಬಲಾಕ್ಲಿಯಾ, ಲವಿವ್, ಮೈಕೋಲಿವ್ ನಗರಗಳ ಮೇಲೆಯೂ ದಾಳಿಗಳು ಆರಂಭವಾಗಿವೆ. ಕೀವ್ ತೊರೆಯುತ್ತಿರುವ ಪೌರರಿಗೆ ರಷ್ಯಾ ಸೇನೆ ಅಡ್ಡಿಪಡಿಸುತ್ತಿಲ್ಲ ಎನ್ನಲಾಗಿದೆ. ಈವರೆಗೂ 10ಲಕ್ಷಕ್ಕೂ ಹೆಚ್ಚು ಮಂದಿ ಉಟ್ಟಬಟ್ಟೆಯಲ್ಲಿ ಉಕ್ರೇನ್ ತೊರೆದಿದ್ದಾರೆ ಎಂದು ವರದಿಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments