Webdunia - Bharat's app for daily news and videos

Install App

ಬಲೂಚಿಸ್ತಾನ್ ಜನತೆ ಯಾವತ್ತೂ ಭಾರತದ ಗುಲಾಮರಾಗುವುದಿಲ್ಲ: ಬಲೂಚಿಸ್ತಾನ್ ಸಿಎಂ

Webdunia
ಸೋಮವಾರ, 17 ಏಪ್ರಿಲ್ 2017 (20:40 IST)
ಬೆರಳೆಣಿಕೆಯಷ್ಟು ದುಷ್ಟಶಕ್ತಿಗಳ ಆಣತಿಯಂತೆ ಬಲೂಚಿಸ್ಥಾನ ಪ್ರಾಂತ್ಯದ ಜನತೆ ಭಾರತದ "ಗುಲಾಮರಾಗಲು ಎಂದಿಗೂ ಒಪ್ಪುವುದಿಲ್ಲ ಎಂದು ಬಲೂಚಿಸ್ತಾನ್ ಮುಖ್ಯಮಂತ್ರಿ ಹೇಳಿದ್ದಾರೆ.  
ಬಲೂಚಿಸ್ತಾನದ ಅಂಜೇರಾ ಕಾಲತ್ ಪ್ರದೇಶದಲ್ಲಿ ಆಯೋಜಿಸಲಾದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ನವಾಬ್ ಸನಾಉಲ್ಲಾ ಝೆಹ್ರಿ, ಬಲೂಚಿಸ್ತಾನ ಜನತೆ ಸಹೋದರರಂತೆ ಪಾಕಿಸ್ತಾನದಲ್ಲಿಯೇ ಜೀವನ ಸಾಗಿಸಲಿದ್ದಾರೆ ಎಂದು ತಿಳಿಸಿದ್ದಾರೆ.
 
ಶತ್ರುಗಳ ಅಜೆಂಡಾವನ್ನು ಪ್ರಚಾರ ಮಾಡುತ್ತಿರುವ ಬೆರಳೆಣಿಕೆಯಷ್ಟು ದುಷ್ಟಶಕ್ತಿಗಳ ಆಣತಿಯಂತೆ ಬಲೂಚಿಸ್ತಾನ್ ಜನತೆ "ಭಾರತದ ಗುಲಾಮರಾಗುವುದಿಲ್ಲ. ವಿದೇಶದಲ್ಲಿ ಕುಳಿತಿರುವ ಕೆಲ ವಿಚ್ಚಿದ್ರಕಾರಿ ಶಕ್ತಿಗಳು, ತಮ್ಮ ಮಹಾಪಾತಕದ ಕೃತ್ಯಗಳಿಗಾಗಿ ನಮ್ಮ ಯುವಕರನ್ನು ಬಳಸಲು ಪ್ರಯತ್ನಿಸುತ್ತಿವೆ ಎಂದು ಕಿಡಿಕಾರಿದರು.
 
ಸಾಮಾಜಿಕ ಮಾಧ್ಯಮ ವಿಮೋಚನೆಗೆ ಮಾನದಂಡವಲ್ಲ. ವಾಸ್ತವವಾಗಿ, ಬಲೊಚ್ ಜನರು ಶ್ರೀಮಂತ ಮತ್ತು ಶಾಂತಿಯುತ ಪಾಕಿಸ್ತಾನ ಬಯಸುತ್ತಾರೆ ಎಂದು ಬಲೂಚಿಸ್ತಾನ್ ಮುಖ್ಯಮಂತ್ರಿ ನವಾಬ್ ಸನಾಉಲ್ಲಾ ಝೆಹ್ರಿ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments