Webdunia - Bharat's app for daily news and videos

Install App

ಬಾಂಗ್ಲಾ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿ ಭಾರತದತ್ತ ಬಂದ್ರ ಶೇಖ್ ಹಸೀನಾ

Sampriya
ಸೋಮವಾರ, 5 ಆಗಸ್ಟ್ 2024 (18:17 IST)
ಢಾಕಾ: ಬಾಂಗ್ಲಾದೇಶದಲ್ಲಿ ಉಲ್ಭಣಿಸಿರುವ ಹಿಂಸಾಚಾರದ ಬೆನ್ನಲ್ಲೇ ಪ್ರಧಾನಿ ಶೇಖ್ ಹಸೀನಾ ಅವರು ರಾಜೀನಾಮೆ ಸಲ್ಲಿಸಿದ್ದು, ದೇಶವನ್ನು ತೊರೆದಿದ್ದಾರೆ ಎಂಬ ಮಾಹಿತಿಯಿದೆ.

ಶೇಖ್ ಹಸೀನಾ ರಾಜೀನಾಮೆಗೆ ಒತ್ತಾಯಿಸಿ ವಿದ್ಯಾರ್ಥಿಗಳು ನಡೆಸುತ್ತಿರುವ ಅಸಹಕಾರ ಚಳವಳಿಯ ಮೊದಲ ದಿನವಾದ ಭಾನುವಾರ, ಪ್ರತಿಭಟನಕಾರರು ಹಾಗೂ ಆಡಳಿತಾರೂಢ ಅವಾಮಿ ಲೀಗ್‌ ಪಕ್ಷದ ಬೆಂಬಲಿಗರ ನಡುವೆ ಘರ್ಷಣೆಯಲ್ಲಿ ಸುಮಾರು 100ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ.

ಹಿಂಸಾಚಾರ ತೀವ್ರ ಸ್ವರೂಪ ಪಡೆಯುತ್ತಿದ್ದ ಹಾಗೇ ಪ್ರಧಾನಿ ಶೇಖ್ ಅವರು ರಾಜೀನಾಮೆ ಸಲ್ಲಿಸಿ, ಇದೀಗ  ತಮ್ಮ ಸಹೋದರಿಯೊಂದಿಗೆ ಢಾಕಾ ತೊರೆದಿದ್ದಾರೆ.

ಪ್ರತಿಭಟನಾಕಾರರು ಪ್ರಧಾನಿ ನಿವಾಸಕ್ಕೆ ನುಗ್ಗಿದ್ದಾರೆ. ಸೇನಾ ಮುಖ್ಯಸ್ಥರು ಶೀಘ್ರದಲ್ಲೇ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡುವ ಸಾಧ್ಯತೆ ಇದೆ.

ಅನಿರ್ದಿಷ್ಟ ಅವಧಿಗೆ ದೇಶದಾದ್ಯಂತ ಕರ್ಫ್ಯೂ ವಿಧಿಸಲು ಗೃಹ ಸಚಿವಾಲಯ ತೀರ್ಮಾನಿಸಿತ್ತು. ಫೇಸ್‌ಬುಕ್‌, ಮೆಸೆಂಜರ್, ವಾಟ್ಸ್‌ಆ್ಯಪ್‌ ಮತ್ತು ಇನ್‌ಸ್ಟಾಗ್ರಾಂ ಸೇವೆಗಳನ್ನು ಸ್ಥಗಿತಗೊಳಿಸಲು ಸರ್ಕಾರ ಆದೇಶಿಸಿತ್ತು. 4ಜಿ ಮೊಬೈಲ್‌ ಇಂಟರ್ನೆಟ್ ಸೇವೆಗಳ ಸ್ಥಗಿತಕ್ಕೂ ಆದೇಶಿಸಲಾಗಿದೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments