Webdunia - Bharat's app for daily news and videos

Install App

Bangladesh Crisis: ಹಿಂದೂ ದೇವಾಲಯಕ್ಕೆ ಎದುರಾಗಿದೆ ದಾಳಿ ಭೀತಿ, 3 ಗಂಟೆ ರಾತ್ರಿಗೆ ಕಾವಲು ಕಾದ ಯುವಕರು

Krishnaveni K
ಮಂಗಳವಾರ, 6 ಆಗಸ್ಟ್ 2024 (10:45 IST)
Photo Credit: Facebook
ಢಾಕಾ: ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹಿಂಸಾಚಾರದಲ್ಲಿ ಪುಂಡರು ಸಿಕ್ಕ ಸಿಕ್ಕಲ್ಲಿ ದಾಳಿ ನಡೆಸುತ್ತಿದ್ದಾರೆ. ಇದೀಗ ಇಲ್ಲಿನ ಖ್ಯಾತ ಹಿಂದೂ ದೇವಾಲಯಕ್ಕೆ ದಾಳಿ ಭೀತಿ ಎದುರಾಗಿದ್ದು ಯುವಕರು 3 ಗಂಟೆ ನಸುಕಿನಲ್ಲೂ ದೇವಾಲಯದ ಮುಂದೆ ಕಾವಲು ಕಾಯುತ್ತಿರುವ ದೃಶ್ಯಗಳು ವೈರಲ್ ಆಗಿವೆ.

ಸ್ವಾತಂತ್ರ್ಯ ಯೋಧರ ಕುಟುಂಬಸ್ಥರಿಗೆ ನೀಡಲಾಗಿರುವ ಶೇ.30 ರಷ್ಟು ಮೀಸಲಾತಿ ವಿರೋಧಿಸಿ ವಿದ್ಯಾರ್ಥಿಗಳು ಆರಂಭಿಸಿದ ಹೋರಾಟ ಈಗ ಹಿಂಸಾರೂಪ ತಾಳಿದೆ. ನಿನ್ನೆ ಪ್ರಧಾನಿ ಶೇಖ್ ಹಸೀನಾ ಭಾರತಕ್ಕೆ ಓಡಿ ಬಂದಿದ್ದು, ಅವರ ಅಧಿಕೃತ ನಿವಾಸದಲ್ಲಿ ಪುಂಡರು ಸಿಕ್ಕ ಸಿಕ್ಕ ವಸ್ತಗಳನ್ನು ದೋಚಿ ಪುಂಡಾಟ ಮೆರೆದಿದ್ದಾರೆ.

ಹಿಂಸಾಚಾರಕ್ಕಿಳಿದಿರುವ ಪುಂಡರು ಹಲವೆಡೆ ಬೆಂಕಿ ಹಚ್ಚಿ, ಪ್ರತಿಮೆಗಳನ್ನು ಧ್ವಂಸ ಮಾಡಿ ವಿಕೃತಿ ಮೆರೆಯುತ್ತಿದ್ದಾರೆ. ಹೀಗಾಗಿ ಹಲವರು ಭೀತಿಯಲ್ಲೇ ಕಾಲ ಕಳೆಯುವಂತಾಗಿದೆ. ಬಾಂಗ್ಲಾದೇಶದಲ್ಲಿ ಮುಸ್ಲಿಮ್ ಧರ್ಮೀಯರು ಬಹುಸಂಖ್ಯಾತರಾಗಿದ್ದರೂ ಕೆಲವೇ ಕೆಲವು ಅಪರೂಪದ ಹಿಂದೂ ದೇವಾಲಯಗಳಿವೆ.

ಈಗ ಆ ದೇವಾಲಯಗಳಿಗೆ ದಾಳಿಯ ಭೀತಿ ಎದುರಾಗಿದೆ. ಢಾಕಾದಲ್ಲಿರುವ ಢಾಕೇಶ್ವರಿ ಮಂದಿರ ಪ್ರಸಿದ್ಧ ಹಿಂದೂ ದೇವಾಲಯವಾಗಿದ್ದು, ಆ ದೇವಾಲಯದ ಮೇಲೆ ದಾಳಿಯಾಗುವ ಭೀತಿ ಎದುರಾಗಿದೆ. ಹೀಗಾಗಿ ನಸುಕಿನಲ್ಲೂ ಕೆಲವು ಯುವಕರ ಗುಂಪು ಢಾಕೇಶ್ವರಿ ದೇವಾಲಯದ ಮುಂಭಾಗ ನಿಂತು ಕಾವಲು ಕಾಯುತ್ತಿರುವ ದೃಶ್ಯಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ನಡುವೆ ಕೆಲವು ಸುಳ್ಳು ಸುದ್ದಿಗಳೂ  ಹರಿದಾಡುತ್ತಿವೆ. ಬಾಂಗ್ಲಾ ಕ್ರಿಕೆಟಿಗ ಲಿಟನ್ ದಾಸ್ ಮನೆ ಮೇಲೆ ದಾಳಿಯಾಗಿದೆ ಎಂಬ ಸುದ್ದಿ ಹರಿದಾಡಿತ್ತು. ಆದರೆ ಅದು ಸುಳ್ಳು ಸುದ್ದಿ ಎಂದು ಬಳಿಕ ಬಯಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಒಂದೇ ದಿನ ವಿಮಾನ ಹತ್ತುವ ವೇಳೆ ಎಡವಿದ ಡೊನಾಲ್ಡ್‌ ಟ್ರಂಪ್‌, ಮಾರ್ಕೊ ರುಬಿಯೋ: ಇಲ್ಲೇನೋ ಸಮಸ್ಯೆ ಇದೆ ಎಂದ ನೆಟ್ಟಿಗರು

Indore Murder case: ಗಂಡನನ್ನು ಕೊಂದ ಆರು ಮಂದಿ ಖತರ್ನಾಕ್ ಪತ್ನಿಯರು ಇವರೇ

Chinnaswamy stampede: ಬಿ ದಯಾನಂದ್ ಮೆಸೇಜ್ ಮಾಡಿದ್ರು: ಶಾಕಿಂಗ್ ಸತ್ಯ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ

Arecanut price today: ಅಡಿಕೆ ಬೆಳೆಗಾರರಿಗೆ ಶಾಕ್, ಇಂದಿನ ಬೆಲೆ ಎಷ್ಟಾಗಿದೆ ನೋಡಿ

11 years for Modi Govt: ಏನೂ ಮಾಡಿಲ್ಲ ಪ್ರಚಾರದಿಂದಲೇ ಬದುಕಿರೋದು ಎಂದ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments