Webdunia - Bharat's app for daily news and videos

Install App

ಬಾಂಗ್ಲಾದೇಶ ಪ್ರತಿಭಟನೆಯಲ್ಲಿ ಈಗ ಹಿಂದೂಗಳೇ ಟಾರ್ಗೆಟ್

Krishnaveni K
ಬುಧವಾರ, 7 ಆಗಸ್ಟ್ 2024 (10:39 IST)
Photo Credit: Facebook
ಢಾಕಾ: ಬಾಂಗ್ಲಾದೇಶದಲ್ಲಿ ಮೀಸಲಾತಿ ವಿರೋಧಿಸಿ ಆರಂಭವಾದ ಹೋರಾಟ ಈಗ ಮೂಲ ಉದ್ದೇಶವೇ ಮರೆತು ಹಳಿ ತಪ್ಪಿದ ಹಿಂಸಾಚಾರವಾಗಿ ಮಾರ್ಪಟ್ಟಿದೆ. ಈಗ ಪ್ರತಿಭಟನಾಕಾರರಿಗೆ ಹಿಂದೂಗಳೇ ಟಾರ್ಗೆಟ್ ಆಗಿದ್ದಾರೆ.

ಸೈನಿಕರ ಕುಟುಂಬಕ್ಕೆ ಶೇ.30 ರಷ್ಟು ಮೀಸಲಾತಿ ನೀಡಿರುವ ಸರ್ಕಾರದ ನೀತಿ ವಿರೋಧಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಇದರ ನಡುವೆ ಸ್ವತಃ ಪ್ರಧಾನಿ ಶೇಖ್ ಹಸೀನಾ ದೇಶ ಬಿಟ್ಟು ಪಲಾಯನ ಮಾಡಿದ್ದಾರೆ. ಪ್ರತಿಭಟನಾಕಾರರು ಪ್ರಧಾನಿ ನಿವಾಸವನ್ನೇ ಕಬ್ಜ ಮಾಡಿಕೊಂಡಿದ್ದಾರೆ.

ಆದರೆ ಇದೀಗ ಈ ಹೋರಾಟವನ್ನು ಕೆಲವರು ತಮ್ಮ ಬೇಳೆ ಬೇಯಿಸಿಕೊಳ್ಳಲು ಬಳಸಿಕೊಳ್ಳುತ್ತಿದ್ದಾರೆ. ವಿಶೇಷವಾಗಿ ಹಿಂದೂ ದೇವಾಲಯಗಳು, ಹಿಂದೂ ಜನ, ಮನೆಗಳೇ ಟಾರ್ಗೆಟ್ ಆಗುತ್ತಿದ್ದಾರೆ. ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರಾಗಿರುವ ಹಿಂದೂಗಳ ಮನೆಗಳ ಮೇಲೆ ದಾಳಿ, ಲೂಟಿ ನಡೆಯುತ್ತಿದೆ.

ಹಿಂದೂಗಳ ಮನೆಗಳನ್ನು ಲೂಟಿ ಮಾಡಲಾಗುತ್ತಿದೆ. ಹಿಂದೂ ಹೆಣ್ಣು ಮಕ್ಕಳನ್ನು ಅಪರಹರಿಸಲಾಗುತ್ತಿದೆ. ಹಿಂದೂಗಳಿಗೆ ಸೇರಿದ ಉದ್ಯಮಗಳ ಮೇಲೂ ದಾಳಿಯಾಗುತ್ತಿದೆ. ಹಿಂದೂಗಳ ಅಂಗಡಿ ಮಳಿಗೆಗಳಿಗೆ ನುಗ್ಗಿ ಸಿಕ್ಕಿದ್ದನ್ನು ದೋಚಲಾಗುತ್ತಿದೆ ಎಂದು ತಿಳಿದುಬಂದಿದೆ. ಇದರಿಂದಾಗಿ ಸದ್ಯಕ್ಕೆ ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳು ಬಾಗಿಲು ಭದ್ರಪಡಿಸಿ ಮನೆಯೊಳಗೇ ಭಯದಲ್ಲೇ ಕೂರುವ ಸ್ಥಿತಿ ನಿರ್ಮಾಣವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raghuvanshi murder: ಇದೊಂದು ಕೆಲಸವಾದ ಮೆಲೆ ಫಸ್ಟ್ ನೈಟ್ ಮಾಡಿಕೊಳ್ಳೋಣ ಎಂದಿದ್ದ ಸೋನಂ

Raghuvanshi Murder Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

Mallikarjun Kharge: 11 ವರ್ಷಗಳ ಮೋದಿಯ ತಪ್ಪುಗಳ ಲೆಕ್ಕ ಕೊಟ್ಟ ಮಲ್ಲಿಕಾರ್ಜುನ ಖರ್ಗೆ

Mangaluru: ಬಾಲ್ಯದ ಕನಸ್ಸಿನಂತೆ ನೌಕಾಪಡೆ ಸೇರಿಕೊಂಡ ಮಂಗಳೂರಿನ ಯುವತಿ

Karnataka Weather: 48 ಗಂಟೆಗಳಲ್ಲಿ ಈ ಭಾಗದಲ್ಲಿ ಭಾರೀ ಮಳೆ, ರೆಡ್ ಅಲರ್ಟ್ ಘೋಷಣೆ

ಮುಂದಿನ ಸುದ್ದಿ
Show comments