Webdunia - Bharat's app for daily news and videos

Install App

ಕುರ್ಚಿ ಉಳಿಸಿಕೊಳ್ಳಲು ಭಾರತದ ಜೊತೆಗೇ ಯುದ್ಧ ಮಾಡಲು ಹೊರಟಿದ್ದರಂತೆ ಬಾಂಗ್ಲಾ ಪ್ರಧಾನಿ ಯೂನಸ್

Krishnaveni K
ಗುರುವಾರ, 12 ಜೂನ್ 2025 (10:46 IST)
Photo Credit: X
ಢಾಕಾ: ಆಂತರಿಕ ಕಚ್ಚಾಟಗಳಿಂದ ಬೆಂದು ಹೋಗಿದ್ದ ಬಾಂಗ್ಲಾದೇಶ ಹಂಗಾಮಿ ಪ್ರಧಾನಿ ಮೊಹಮ್ಮದ್ ಯೂನಸ್ ಭಾರತದ ಜೊತೆಗೇ ಯುದ್ಧ ಮಾಡಿ ತನ್ನ ಕುರ್ಚಿ ಉಳಿಸಿಕೊಳ್ಳಲು ಯತ್ನಿಸಿದ್ದರು ಎಂಬ ಅಂಶ ಬೆಳಕಿಗೆ ಬರುತ್ತಿದೆ.

ಭಾರತದ ಗಡಿಯಲ್ಲಿ ಘರ್ಷಣೆ ಮಾಡಿದರೆ ದೇಶದ ಗಮನ ಇತ್ತ ಸರಿಯುತ್ತದೆ. ಆಗ ಆಂತರಿಕ ಕಲಹಗಳಿಂದ ತಮ್ಮ ಸ್ಥಾನಕ್ಕೆ ಕುತ್ತು ಬರುವುದು ತಪ್ಪುತ್ತದೆ. ಬೇಗ ಚುನಾವಣೆ ನಡೆಸಿ ಎಂಬ ಬೇಡಿಕೆಯನ್ನೂ ತಣ್ಣಗಾಗಿಸಬಹುದು ಎಂದು ಯೂನಸ್ ಸಂಚು ರೂಪಿಸಿದ್ದರಂತೆ.

ಬಾಂಗ್ಲಾದೇಶದಲ್ಲಿ ತಮ್ಮ ಆಪ್ತ ನಾಯಕರ ಗುಂಪಿನ ಜೊತೆ ಚರ್ಚಿಸಿ ಮೊಹಮ್ಮದ್ ಯೂನಸ್ ಭಾರತದ ಜೊತೆಗೆ ಯುದ್ಧಕ್ಕೆ ಸಿದ್ಧತೆ ನಡೆಸಿದ್ದರು. ಭಾರತ ಆಪರೇಷನ್ ಸಿಂಧೂರ್ ನಡೆಸುತ್ತಿದ್ದಾಗಲೇ ಯೂನಸ್ ಕೂಡಾ ಭಾರತದ ಮೇಲೆ ದಾಳಿಗೆ ಯೋಜನೆ ರೂಪಿಸಿದ್ದರು.

ಆದರೆ ಇಂತಹ ಕೃತ್ಯವೆಸಗಿದರೆ ಭಾರತ ಸುಮ್ಮನೇ ಕೂರದು. ಇದರಿಂದ ನಷ್ಟವಾಗುವುದು ಬಾಂಗ್ಲಾದೇಶಕ್ಕೇ ಎಂದು ಸೇನಾ ಮುಖ್ಯಸ್ಥ ವಕಾರ್ ಉಜ್ ಜಮಾನ್ ಸಲಹೆ ನೀಡಿದರು. ಹೀಗಾಗಿ ಬಾಂಗ್ಲಾದೇಶ ಈ ಯೋಜನೆಯನ್ನು ಕೈ ಬಿಟ್ಟಿತು ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡೇಟಾ ನೆಟ್‌ವರ್ಕ್‌ ಸ್ಥಗಿತ: ಮುಂಬೈ ವಿಮಾನ ಹಾರಾಟದಲ್ಲಿ ಕೆಲ ವ್ಯತ್ಯ‌ಯ

ರಾಹುಲ್ ಭಾಷಣ ಶಿವಕಾಶಿಯಿಂದ ತಂದು ಮಳೆಯಲ್ಲಿ ನೆನೆದ ಟುಸ್ ಪಟಾಕಿ: ಸುರೇಶ್ ಕುಮಾರ್ ವ್ಯಂಗ್ಯ

ನಾಳೆ ರಾಜ್ಯಕ್ಕೆ ಮೋದಿ, ಹೇಗಿರಲಿದೆ ಗೊತ್ತಾ ಪ್ರಧಾನಿ ವೇಳಾಪಟ್ಟಿ

2ತಿಂಗ್ಳ ಬಳಿಕ ಮತ್ತೇ ಸಮುದ್ರಕ್ಕಿಳಿದ ಬೋಟ್‌ಗಳು, ವಾರದ ನಂತರ ಮೀನಿನ ಬೆಲೆಯಲ್ಲಿ ಇಳಿಕೆ ಸಾಧ್ಯತೆ

ಲೋಕಸಭೆ ಚುನಾವಣೆಯಲ್ಲಿ ನಡೆದ ಮತಗಳ್ಳತನದ ತನಿಖೆ ನಡೆಸುತ್ತೇವೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments