ತಮ್ಮ ದೇಶದಲ್ಲಿ ಹಿಂಸಾಚಾರದ ನಡುವೆ ಭಾರತಕ್ಕೆ ಗುಂಪು ಗುಂಪಾಗಿ ನುಸುಳಲು ಪ್ರಯತ್ನಿಸುತ್ತಿರುವ ಬಾಂಗ್ಲಾದೇಶೀಯರು

Krishnaveni K
ಶುಕ್ರವಾರ, 9 ಆಗಸ್ಟ್ 2024 (09:20 IST)
ಢಾಕಾ: ತಮ್ಮ ದೇಶದಲ್ಲಿ ಹಿಂಸಾಚಾರ ತಾರಕಕ್ಕೇರಿರುವ ಬೆನ್ನಲ್ಲೇ ಬಾಂಗ್ಲಾದೇಶೀಯರು ಈಗ ಪಶ್ಚಿಮ ಬಂಗಾಲದ ಮೂಲಕ ಭಾರತಕ್ಕೆ ನುಸುಳಲು ಪ್ರಯತ್ನಿಸುತ್ತಿದ್ದಾರೆ. ಭಾರತದ ಗಡಿ ಭದ್ರತಾ ಪಡೆಗಳಿಗೆ ಈಗ ಇವರನ್ನು ತಡೆಯುವುದೇ ಕೆಲಸವಾಗಿದೆ.

ಬಾಂಗ್ಲಾದೇಶದಲ್ಲಿ ಮೀಸಲಾತಿ ವಿರೋಧಿಸಿ ನಡೆಯುತ್ತಿರುವ ಹೋರಾಟ ಹಿಂಸಾಚಾರಕ್ಕೆ ತಿರುಗಿದೆ. ಶೇಖ್ ಹಸೀನಾ ರಾಜೀನಾಮೆ ನೀಡಿ ಪಲಾಯನಗೈದ ಬಳಿಕ ಅಕ್ಷರಶಃ ದೇಶದಲ್ಲಿ ಅರಾಜಕತೆ ಸೃಷ್ಟಿಯಾಗಿತ್ತು. ಸಿಕ್ಕ ಸಿಕ್ಕಲ್ಲಿ ಕಲ್ಲು ತೂರಾಟ, ದಾಂಧಲೆ, ಬೆಂಕಿ ಹಚ್ಚುವ ಪ್ರಯತ್ನಗಳು ನಡೆಯುತ್ತಿವೆ.

ಇದರ ನಡುವೆ ಬಾಂಗ್ಲಾದ ಜನ ಬಂಗಾಲ ಗಡಿ ಮೂಲಕ ಭಾರತಕ್ಕೆ ನುಸುಳಲು ಪ್ರಯತ್ನಿಸುತ್ತಿದ್ದಾರೆ. ಸಾವಿರದಷ್ಟು ಮಂದಿ ಬಂಗಾಲ ಗಡಿ ಮೂಲಕ ಭಾರತಕ್ಕೆ ಅಕ್ರಮವಾಗಿ ಬಂದು ಸೇರಿಕೊಳ್ಳಲು ರೆಡಿಯಾಗಿದ್ದಾರೆ. ಗುಂಪು ಗುಂಪಾಗಿ ಸ್ಥಳೀಯ ಗ್ರಾಮಸ್ಥರ ಸಹಾಯದಿಂದ ಭಾರತಕ್ಕೆ ಬಂದು ಸೇರಿಕೊಳ್ಳಲು ಯತ್ನಿಸುತ್ತಿದ್ದಾರೆ.

ಆದರೆ ಇದೀಗ ಗಡಿ ಭದ್ರತಾ ಯೋಧರು ಗುಂಡು ಹಾರಿಸುವ ಮೂಲಕ ಅಕ್ರಮ ನುಸುಳುಕೋರರನ್ನು ಹಿಮ್ಮೆಟ್ಟಿಸಿದೆ. ಅಲ್ಲದೆ, ಗ್ರಾಮಸ್ಥರಿಗೂ ಬಾಂಗ್ಲಾದೇಶದಿಂದ ಅಕ್ರಮವಾಗಿ ಬರುವವರಿಗೆ ಆಶ್ರಯ ನೀಡದಂತೆ ಎಚ್ಚರಿಕೆ ನೀಡಿದೆ. ಈಗಾಗಲೇ ಭಾರತದಲ್ಲಿ ಬಾಂಗ್ಲಾದೇಶದಿಂದ ಇಲ್ಲಿಗೆ ಅಕ್ರಮವಾಗಿ ವಲಸೆ ಬಂದು ಇಲ್ಲಿನವರಂತೇ ಜೀವನ ಮಾಡುತ್ತಿರುವ ಅನೇಕರು ಇದ್ದಾರೆ. ರಾಜಕೀಯವಾಗಿ ಇಂತಹವರನ್ನು ಬಳಸಿಕೊಳ್ಳುವುದೂ ನಡೆದೇ ಇದೆ. ಇದರ ನಡುವೆ ಈಗ ಬಾಂಗ್ಲಾದಿಂದ ಮತ್ತಷ್ಟು ನುಸುಳುಕೋರರ ತಲೆನೋವು ಭಾರತಕ್ಕೆ ಎದುರಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಉಡುಪಿ ರೋಡ್ ಶೋ ಆರಂಭ live video

ಅಧಿಕಾರ ಹಂಚಿಕೆ ಫೈಟ್ ನಡುವೆಯೇ ಹೈಕಮಾಂಡ್ ಮೀಟಿಂಗ್ ಬಗ್ಗೆ ಪ್ರಿಯಾಂಕ್ ಖರ್ಗೆ ಸ್ಪೋಟಕ ಹೇಳಿಕೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಕರ್ನಾಟಕ ಕುರ್ಚಿ ಕದನ ಕ್ಲೈಮ್ಯಾಕ್ಸ್ ಹಂತದಲ್ಲಿರುವಾಗಲೇ ತಮ್ಮ ನಿರ್ಧಾರ ಪ್ರಕಟಿಸಿದ ಡಿಕೆ ಶಿವಕುಮಾರ್

ಉಡುಪಿ ಕೃಷ್ಣನ ಊರಿನಲ್ಲಿ ಪ್ರಧಾನಿ ಮೋದಿ ಇಂದು ಏನೇನು ಮಾಡಲಿದ್ದಾರೆ

ಮುಂದಿನ ಸುದ್ದಿ
Show comments