Webdunia - Bharat's app for daily news and videos

Install App

ಬ್ಯಾಂಕ್ ದಿವಾಳಿ : ಮಾಧ್ಯಮಗಳ ಪ್ರಶ್ನೆ ನಿರ್ಲಕ್ಷಿಸಿ ಹೊರನಡೆದ ಬೈಡನ್

Webdunia
ಬುಧವಾರ, 15 ಮಾರ್ಚ್ 2023 (09:37 IST)
ವಾಷಿಂಗ್ಟನ್ : ಅಮೆರಿಕದಲ್ಲಿ ಬ್ಯಾಂಕ್ಗಳು ದಿವಾಳಿಯಾಗುತ್ತಿರುವ ಹಿನ್ನೆಲೆ ಅಧ್ಯಕ್ಷ ಜೋ ಬೈಡನ್ಗೆ ಸುದ್ದಿಗೋಷ್ಠಿಯಲ್ಲಿ ಮಾಧ್ಯಮದವರು ಈ ಕುರಿತು ಪ್ರಶ್ನೆಯನ್ನು ಕೇಳಿದ್ದರು. ಆದರೆ ಯುಎಸ್ ಅಧ್ಯಕ್ಷ ಅವರ ಪ್ರಶ್ನೆಗಳನ್ನು ನಿರ್ಲಕ್ಷಿಸಿ ಹೊರನಡೆದಿದ್ದಾರೆ. ಇದರಿಂದ ಬೈಡನ್ ಭಾರೀ ಟೀಕೆಗೆ ಗುರಿಯಾಗಿದ್ದಾರೆ.
 
ಬೈಡನ್ ಸುದ್ದಿಗೋಷ್ಠಿಯಲ್ಲಿ ಕೊನೆಯದಾಗಿ ಚೇತರಿಸಿಕೊಳ್ಳುವ ಬ್ಯಾಂಕಿಂಗ್ ವ್ಯವಸ್ಥೆಯನ್ನು ನಿರ್ವಹಿಸುವುದು ಹಾಗೂ ನಮ್ಮ ಐತಿಹಾಸಿಕ ಚೇತರಿಕೆಯನ್ನು ರಕ್ಷಿಸುವಲ್ಲಿ ಕೆಲಸ ಮಾಡುವುದಾಗಿ ತಿಳಿಸಿ ಮಾತನ್ನು ಮುಗಿಸಿದ್ದಾರೆ.

ಈ ವೇಳೆ ವರದಿಗಾರರೊಬ್ಬರು, ಬ್ಯಾಂಕ್ಗಳು ಏಕೆ ದಿವಾಳಿಯಾಗುತ್ತಿದೆ? ನೀವು ಇನ್ನು ಮುಂದೆ ಈ ರೀತಿ ಬ್ಯಾಂಕ್ಗಳು ದಿವಾಳಿಯಾಗುವುದಿಲ್ಲ ಎಂದು ಅಮೆರಿಕನ್ನರಿಗೆ ಭರವಸೆ ನೀಡಬಹುದೇ ಎಂದು ಪ್ರಶ್ನಿಸಿದ್ದಾರೆ.

ಅಮೆರಿಕ ಅಧ್ಯಕ್ಷ ವರದಿಗಾರರ ಪ್ರಶ್ನೆಗೆ ಉತ್ತರಿಸದೇ ಅಲ್ಲಿಂದ ಕಾಲ್ಕಿತ್ತಿದ್ದಾರೆ. ಇದೇ ವೇಳೆ ಮತ್ತೊಬ್ಬ ವರದಿಗಾರರು ಈಗಾಗಲೇ ದಿವಾಳಿಯಾಗಿರುವ ಬ್ಯಾಂಕುಗಳಂತೆ ಇತರ ಬ್ಯಾಂಕುಗಳ ಸ್ಥಿತಿಯೂ ಆಗುತ್ತದೆಯೇ ಎಂದು ಪ್ರಶ್ನಿಸಿದ್ದಾರೆ. ಆದರೆ ಬೈಡನ್ ವರದಿಗಾರರೆಡೆ ಕಣ್ಣು ಹಾಯಿಸದೇ ಸುದ್ದಿಗೋಷ್ಠಿ ನಡೆಯುತ್ತಿದ್ದ ಕೊಠಡಿಯನ್ನು ತೊರೆದಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂಸತ್‌ ಕ್ಯಾಂಟೀನ್‌ನಲ್ಲಿ ಪೌಷ್ಟಿಕಾಂಶಯುಕ್ತ ಆಹಾರ, ಮೆನುವಿನಲ್ಲಿ ಭಾರೀ ಬದಲಾವಣೆ ತಂದ ಸ್ಪೀಕರ್‌

ಒಡಿಶಾ, ಶಿಕ್ಷಕನ ಲೈಂಗಿಕ ಕಿರುಕುಳಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ, ಪ್ರತಿಭಟನಕಾರರನ್ನು ಚದುರಿಸಲು ಜಲಫಿರಂಗಿ ಪ್ರಯೋಗ

ಪ್ರಧಾನಿ ಮೋದಿ ವಾರಕ್ಕೆ 100 ಗಂಟೆ ಕೆಲಸ ಮಾಡುವ ಏಕೈಕ ವ್ಯಕ್ತಿ: ನಾರಾಯಣ ಮೂರ್ತಿ

Karnataka Rain Alert: ಮುಂದಿನ 7 ದಿನಗಳ ಕಾಲ ಈ ಪ್ರದೇಶದಲ್ಲಿ ಭಾರೀ ಮಳೆ

ಬಿಜೆಪಿ, ಜೆಡಿಎಸ್ ಬೆಂಗಳೂರಿನ ಪರಿಸರ ಹಾಳು ಮಾಡುತ್ತಿದೆ: ರಣದೀಪ್ ಸುರ್ಜೇವಾಲ

ಮುಂದಿನ ಸುದ್ದಿ
Show comments