Webdunia - Bharat's app for daily news and videos

Install App

ಬೆಂಗಳೂರು: ಚಿತ್ರಹಿಂಸೆ ನೀಡಿದ ಪ್ರಕರಣ : ಪಿಎಸ್ಸೈ ಹರೀಶ್ ಅಮಾನತು

Webdunia
ಮಂಗಳವಾರ, 7 ಡಿಸೆಂಬರ್ 2021 (20:20 IST)
ಬೆಂಗಳೂರು: ವಿಚಾರಣೆ ನೆಪದಲ್ಲಿ ಯುವಕನ ಗಡ್ಡ ಕತ್ತರಿಸಿ ಮೂತ್ರ ಕುಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ಯಾಟರಾಯನಪುರ ಪೊಲೀಸ್ ಠಾಣೆಯ ಪಿಎಸ್ಸೈ ಹರೀಶ್ ಎಂಬವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.
ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಪಿಎಸ್ಸೈ ಹರೀಶ್ ಅವರನ್ನು ಅಮಾನತುಗೊಳಿಸಿ, ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ್ ಪಾಟೀಲ್ ಆದೇಶ ಹೊರಡಿಸಿದ್ದಾರೆ.
ನೆರೆ ಮನೆಯವರೊಂದಿಗೆ ಜಗಳವಾಡಿದ ಸಂಬಂಧ ಪಾದರಾಯನಪುರ ನಿವಾಸಿ ತೌಸಿಫ್ ಎಂಬಾತನನ್ನು ಬ್ಯಾಟರಾಯನಪುರ ಠಾಣೆಯ ಸಬ್​ ಇನ್ಸ್​ಪೆಕ್ಟರ್​  ಹರೀಶ್ ರಾತ್ರಿ ವಶಕ್ಕೆ ಪಡೆದಿದ್ದರು. ಬಳಿಕ ಆತನನ್ನು ಠಾಣೆಗೆ ಕರೆತಂದು ಗಡ್ಡ ಕತ್ತರಿಸಿ, ನೀರು ಕೇಳಿದಕ್ಕೆ ಮೂತ್ರ ಕುಡಿಸಿರುವುದಾಗಿ ಆರೋಪ ಕೇಳಿ ಬಂದಿತ್ತು.
ಈ ಸಂಬಂಧ ಪೋಷಕರು ಠಾಣೆ ಮುಂದೆ ಜಮಾಯಿಸಿ ಪ್ರತಿಭಟನೆ ನಡೆಸಿದ್ದರು. ಕೆಂಗೇರಿ ಉಪ ವಿಭಾಗದ ಎಸಿಪಿ ಕೋದಂಡರಾಮಯ್ಯ ಈ ಘಟನೆ ಸಂಬಂಧ ಪಿಎಸ್ಸೈ ಹರೀಶ್​ರನ್ನು ವಿಚಾರಣೆ ನಡೆಸಿ ಡಿಸಿಪಿಗೆ ವರದಿ ಸಲ್ಲಿಸಿದ್ದರು. ವರದಿ ಬೆನ್ನಲೆ,  ಹರೀಶ್​ ರನ್ನು ಅಮಾನತು​ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments