Webdunia - Bharat's app for daily news and videos

Install App

ಭಾರತ-ಅಮೆರಿಕ ನಡುವಣ ಸ್ನೇಹ ಇನ್ನಷ್ಟು ಗಟ್ಟಿಯಾಗಲಿದೆ ಎಂದ ಬೈಡನ್

Webdunia
ಶನಿವಾರ, 25 ಸೆಪ್ಟಂಬರ್ 2021 (11:19 IST)
ವಾಷಿಂಗ್ಟನ್ : ಅಮೆರಿಕ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಅಧ್ಯಕ್ಷ ಜೋ ಬೈಡನ್ ಅವರೊಂದಿಗೆ ಶ್ವೇತಭವನದಲ್ಲಿ ದ್ವಿಪಕ್ಷೀಯ ಮಾತುಕತೆ ನಡೆಸಿದ್ದು, ಈ ವೇಳೆ ಇಬ್ಬರೂ ನಾಯಕರು ಭಾರತ-ಅಮೆರಿಕ ನಡುವಣ ಸ್ನೇಹ ಇನ್ನಷ್ಟು ಗಟ್ಟಿಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
Photo Courtesy: Google

ಅಮೆರಿಕ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಇಂದು ಶ್ವೇತಭವನಕ್ಕೆ ಭೇಟಿ ನೀಡಿದರು. ಈ ವೇಳೆ ಮೋದಿ ಅಮೆರಿಕ ಅಧ್ಯಕ್ಷ ಜೋ ಬೈಡನ್ ಮತ್ತು ಇತರೆ ಪ್ರಮುಖ ಅಧಿಕಾರಿಗಳನ್ನು ಭೇಟಿ ಮಾಡಿದರು. ಕೆಲ ಹೊತ್ತು ದ್ವಿಪಕ್ಷೀಯ ಮಾತುಕತೆ ನಡೆಸಿದ ಪ್ರಧಾನಿ ಮೋದಿ ಮತ್ತು ಜೋ ಬೈಡನ್ ಹಲವು ಮಹತ್ವದ ವಿಚಾರಗಳ ಕುರಿತು ಚರ್ಚೆ ನಡೆಸಿದರು.
ಈ ವೇಳೆ ಮಾತನಾಡಿದ ಪ್ರಧಾನಿ ಮೋದಿ, 'ಇಂದಿನ ದ್ವಿಪಕ್ಷೀಯ ಮಾತುಕತೆ ಬಹಳ ಮಹತ್ವದ್ದು. ಈ ಶತಮಾನದ ಮೂರನೇ ದಶಕದ ಆರಂಭದಲ್ಲಿ ನಾವು ಮಾತುಕತೆ ನಡೆಸುತ್ತಿದ್ದೇವೆ. ಈ ದಶಕವು ಹೇಗೆ ರೂಪುಗೊಳ್ಳುತ್ತದೆ ಎಂಬುದರಲ್ಲಿ ನಿಮ್ಮ (ಬೈಡನ್) ನಾಯಕತ್ವವು ಖಂಡಿತವಾಗಿಯೂ ಪ್ರಮುಖ ಪಾತ್ರ ವಹಿಸುತ್ತದೆ. ಭಾರತ ಮತ್ತು ಅಮೆರಿಕ ನಡುವಣ ಸ್ನೇಹವನ್ನು ಇನ್ನಷ್ಟು ಗಟ್ಟಿಗೊಳಿಸಲು ಈಗ ಬೀಜವನ್ನು ಬಿತ್ತಲಾಗಿದೆ ಎಂದು ಮೋದಿ ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಅಂತೆಯೇ 'ತಂತ್ರಜ್ಞಾನವು ಪ್ರೇರಕ ಇಂದು ಶಕ್ತಿಯಾಗುತ್ತಿದೆ. ಜಾಗತಿಕ ಒಳಿತಿಗಾಗಿ ತಂತ್ರಜ್ಞಾನವನ್ನು ಬಳಸಿಕೊಳ್ಳಲು ನಾವು ನಮ್ಮ ಪ್ರತಿಭೆಯನ್ನು ಬಳಸಿಕೊಳ್ಳಬೇಕು. ಅಧ್ಯಕ್ಷ ಬೈಡನ್ ಪ್ರಸ್ತಾಪಿಸಿದ ಪ್ರತಿಯೊಂದು ವಿಷಯಗಳೂ ಭಾರತ-ಅಮೆರಿಕ ಸ್ನೇಹದ ವಿಚಾರದಲ್ಲಿ ನಿರ್ಣಾಯಕವಾಗಿವೆ. ಬೈಡನ್ ಅವರು ಮಹಾತ್ಮ ಗಾಂಧೀಜಿ ಅವರ ಜಯಂತಿ ಬಗ್ಗೆ ಪ್ರಸ್ತಾಪಿಸಿದರು. ಗಾಂಧೀಜಿ ಅವರು ನಂಬಿಕೆ-ವಿಶ್ವಾಸಗಳ ಬಗ್ಗೆ ಪ್ರತಿಪಾದಿಸಿದ್ದವರು. ಮುಂದಿನ ದಿನಗಳಲ್ಲಿ ಗಾಂಧಿ ತತ್ವವು ಪ್ರಪಂಚಕ್ಕೆ ಬಹಳ ಮಹತ್ವದ್ದಾಗಲಿದೆ ಎಂದು ಬೈಡನ್ ಹೇಳಿರುವುದಾಗಿ ಮೋದಿ ತಿಳಿಸಿದರು.
ಇದಕ್ಕೂ ಮುನ್ನ ಮಾತನಾಡಿದ್ದ ಜೋ ಬೈಡನ್, 'ಇಂದು ನಾನು ಪ್ರಧಾನಿ ನರೇಂದ್ರ ಮೋದಿ ಅವರ ಜೊತೆ ಶ್ವೇತ ಭವನದಲ್ಲಿ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದೇನೆ. ಅಮೆರಿಕ-ಭಾರತ ನಡುವಣ ಬಾಂಧವ್ಯವನ್ನು ಮತ್ತಷ್ಟು ಗಟ್ಟಿಗೊಳಿಸುವುದನ್ನು ಎದುರು ನೋಡುತ್ತಿದ್ದೇನೆ. ಹವಾಮಾನ ಬದಲಾವಣೆಯಿಂದ ತೊಡಗಿ ಕೋವಿಡ್ ಬಿಕ್ಕಟ್ಟಿನ ವರೆಗೆ ಎಲ್ಲ ಸಮಸ್ಯೆಗಳನ್ನು ಎದುರಿಸುವ ನಿಟ್ಟಿನಲ್ಲಿ ಮಾತುಕತೆ ನಡೆಸಲಿದ್ದೇವೆ ಎಂದು ಹೇಳಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Liverpool Univesity: ಯುಕೆಯ ವಿದ್ಯಾಭ್ಯಾಸ ಬೆಂಗಳೂರಿನಲ್ಲಿ ಮಾಡಬೇಕುನ್ನುವವರಿಗೆ Good News

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಪ್ರೊಪೆಸರ್‌ಗೆ ಬಿಗ್‌ ರಿಲೀಫ್‌

Operation Sindoor ಬಳಿಕ ಮತ್ತೇ ಅಣಕು ಪ್ರದರ್ಶನದಲ್ಲಿ ತೊಡಗಿದ ಭಾರತ, ಇದರ ಅರ್ಥವೇನು

Bantwal Abdul Rahim Case: ಬಿಜೆಪಿ ಶವಗಳ ಮೇಲೆ ರಾಜಕೀಯ ಮಾಡುತ್ತಿದೆ, ದಿನೇಶ್‌ ಗುಂಡೂರಾವ್‌

Abdul Rahim Case: 15 ಮಂದಿಯ ವಿರುದ್ಧ ಬಿತ್ತು ಎಫ್‌ಐಆರ್‌, ಚುರುಕುಗೊಂಡ ತನಿಖೆ

ಮುಂದಿನ ಸುದ್ದಿ
Show comments