Webdunia - Bharat's app for daily news and videos

Install App

ಮೇಘಾಲಯದಲ್ಲಿ ಕಾಂಗ್ರೆಸ್​​ಗೆ ಬಿಗ್ ಶಾಕ್!

Webdunia
ಗುರುವಾರ, 25 ನವೆಂಬರ್ 2021 (08:10 IST)
ಮೇಘಾಲಯದಲ್ಲಿ ಕಾಂಗ್ರೆಸ್ನ ಮಾಜಿ ಮುಖ್ಯಮಂತ್ರಿ ಮುಕುಲ್ ಸಂಗ್ಮಾ ಸೇರಿ 12 ಶಾಸಕರು ತೃಣಮೂಲ ಕಾಂಗ್ರೆಸ್ ಸೇರುವ ಮೂಲಕ ಪಕ್ಷಕ್ಕೆ ದೊಡ್ಡ ಆಘಾತವನ್ನೇ ಕೊಟ್ಟಿದ್ದಾರೆ.
ಅಲ್ಲಿ ಇದ್ದ 18 ಕಾಂಗ್ರೆಸ್ ಶಾಸಕರಲ್ಲಿ 12 ಮಂದಿ ಈಗ ಟಿಎಂಸಿಗೆ ಪಕ್ಷಾಂತರಗೊಂಡಿದ್ದಾರೆ. ಮಾಜಿ ಮುಖ್ಯಮಂತ್ರಿ ಮುಕುಲ್ ಸಂಗ್ಮಾ ಮೇಘಾಲಯದಲ್ಲಿ ಶಾಸಕಾಂಗ ಪಕ್ಷದ ನಾಯಕರಾಗಿದ್ದರು. ಇವರು ಮತ್ತು ಮೇಘಾಲಯ ಪ್ರದೇಶ ಕಾಂಗ್ರೆಸ್ ಸಮಿತಿ ಮುಖ್ಯಸ್ಥ ವಿನ್ಸೆಂಟ್ ಎಚ್.ಪಾಲಾ ನಡುವೆ ಪರಸ್ಪರ ಹೊಂದಾಣಿಕೆ ಇರಲಿಲ್ಲ. ಪ್ರದೇಶ ಕಾಂಗ್ರೆಸ್ ಕಮಿಟಿಗೆ ವಿನ್ಸೆಂಟ್ ಎಚ್.ಪಾಲಾ ಮುಖ್ಯಸ್ಥರಾಗಿ ನೇಮಕರಾದಾಗಿನಿಂದಲೂ ಮುಕುಲ್ ಸಂಗ್ಮಾ ಅಸಮಾಧಾನಗೊಂಡಿದ್ದರು. ಕಳೆದ ತಿಂಗಳಷ್ಟೇ ಮುಕುಲ್ ಸಂಗ್ಮಾ ಮತ್ತು ವಿನ್ಸೆಂಟ್ರನ್ನು ಭೇಟಿಯಾಗಿದ್ದ ರಾಹುಲ್ ಗಾಂಧಿ ಇಬ್ಬರ ಬೇಡಿಕೆಗಳನ್ನೂ ಆಲಿಸಿ ಮಾತುಕತೆ ನಡೆಸಿದ್ದರು.
ನಾನು ಕಾಂಗ್ರೆಸ್ನ ಶಾಸಕಾಂಗ ಪಕ್ಷದ ನಾಯಕನಾಗಿದ್ದರೂ, ವಿನ್ಸೆಂಟ್ ಎಚ್.ಪಾಲಾರನ್ನು ನೇಮಕ ಮಾಡುವಾಗ ಒಂದು ಮಾತು ನನ್ನನ್ನು ಕೇಳಲಿಲ್ಲ ಎಂದು ಬಹಿರಂಗವಾಗಿಯೇ ಬೇಸರ ತೋಡಿಕೊಂಡಿದ್ದರು. ಅದಾದ ಬಳಿಕ ಅವರು ತೃಣಮೂಲ ಕಾಂಗ್ರೆಸ್ ಸೇರಲಿದ್ದಾರೆ ಎಂಬ ಊಹಾಪೋಹಗಳು ಎದ್ದಿದ್ದವು.  ಅದರಂತೆ ಅವರೀಗ ಒಟ್ಟು 11 ಶಾಸಕರೊಟ್ಟಿಗೆ ಟಿಎಂಸಿ ಸೇರ್ಪಡೆಯಾಗಿದ್ದಾರೆ. ಈಗ ಮೇಘಾಲಯದಲ್ಲಿ ತೃಣಮೂಲ ಕಾಂಗ್ರೆಸ್ ಪ್ರಮುಖ ವಿರೋಧಪಕ್ಷವಾಗಿ ಹೊರಹೊಮ್ಮಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments