Webdunia - Bharat's app for daily news and videos

Install App

ಸೇನಾ ಮುಖ್ಯಸ್ಥ ಬಿಪಿನ್ ಚೀನಾ ಕುರಿತ ಹೇಳಿಕೆಯಿಂದ ಭಾರತಕ್ಕೆ ಸಂಕಷ್ಟ?

Webdunia
ಶುಕ್ರವಾರ, 8 ಸೆಪ್ಟಂಬರ್ 2017 (08:16 IST)
ನವದೆಹಲಿ: ಡೋಕ್ಲಾಂ ಗಡಿ ಬಿಕ್ಕಟ್ಟಿನ ನಂತರ ಚೀನಾ ಸೇಡು ತೀರಿಸಿಕೊಳ್ಳಲು ಕಾಯುತ್ತಿದೆ ಎಂಬ ಭಾರತದ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹೇಳಿಕೆ ಚೀನಾವನ್ನು ಮತ್ತೆ ಕೆರಳಿಸಿದೆ.

 
ಬಿಪಿನ್ ಹೇಳಿಕೆ ಬ್ರಿಕ್ಸ್ ಸಮ್ಮೇಳನದಲ್ಲಿ ಭಾರತದ ಪ್ರಧಾನಿ ಮೋದಿ ಮತ್ತು ಚೀನಾ ಅಧ್ಯಕ್ಷ ಜಿನ್ ಪಿಂಗ್ ಕೈಗೊಂಡ ವಿಶ್ವಾಸಾರ್ಹ ಹಾಗೂ ಪರಸ್ಪರ ಸಹಕಾರ ನೀಡುವ ಆಶಯಗಳಿಗೆ ವಿರುದ್ಧವಾಗಿದೆ ಎಂದು ಚೀನಾ ಆಕ್ಷೇಪ ವ್ಯಕ್ತಪಡಿಸಿದೆ.

‘ಪರಸ್ಪರ ಸ್ನೇಹ ಹಸ್ತ ಚಾಚಿದ ಎರಡೇ ದಿನಗಳಲ್ಲಿ ಅವರು ಈ ರೀತಿ ಹೇಳಿದ್ದು ಸರಿಯಲ್ಲ. ಅಂತಹ ಹೇಳಿಕೆ ಅಧಿಕೃತವೇ ಅಥವಾ ಮಾತಿನ ಭರದಲ್ಲಿ ಹೇಳಿದ್ದೇ ಎಂದು ನಮಗೆ ಗೊತ್ತಿಲ್ಲ’ ಎಂದು ಚೀನಾ ಸರ್ಕಾರದ ವಕ್ತಾರರು ಹೇಳಿದ್ದಾರೆ.

ನಿನ್ನೆಯಷ್ಟೇ ಬಿಪಿನ್ ರಾವತ್, ಚೀನಾ ಸೇಡು ತೀರಿಸಿಕೊಳ್ಳಲು ಕಾಯುತ್ತಿದೆ. ಪಾಕ್ ಪರಿಸ್ಥಿತಿಯ ಲಾಭ ಪಡೆದುಕೊಳ್ಳಲು ಯತ್ನಿಸುತ್ತಿದೆ. ಹಾಗಾಗಿ ನಾವು ಯಾವುದೇ ಸಂದರ್ಭದಲ್ಲೂ ಯುದ್ಧಕ್ಕೆ ಸನ್ನದ್ಧವಾಗಿರಬೇಕು ಎಂದು ಹೇಳಿಕೆ ನೀಡಿದ್ದರು.

ಇದನ್ನೂ ಓದಿ.. ಅರಸಿನ ಪುಡಿ ಹೆಚ್ಚು ತಿನ್ನುವುದೂ ಅಪಾಯ! ಏನಾಗುತ್ತೆ?
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments