Webdunia - Bharat's app for daily news and videos

Install App

ನೇಪಾಳದಲ್ಲಿರುವ ಭಾರತದ ರಾಯಭಾರಿ ಕಚೇರಿ ಸಮೀಪ ಬಾಂಬ್‌ ಸ್ಫೋಟ

Webdunia
ಮಂಗಳವಾರ, 17 ಏಪ್ರಿಲ್ 2018 (16:53 IST)
ಕಠ್ಮಂಡು : ನೇಪಾಳದ ಬಿರಾತ್‌ನಗರ ಪ್ರದೇಶ‌ದಲ್ಲಿರುವ ಭಾರತ ರಾಯಭಾರಿ ಕಚೇರಿ ಸಮೀಪ ಬಾಂಬ್‌ ಸ್ಫೋಟಗೊಂಡಿರುವುದಾಗಿ ಮಾಹಿತಿ ತಿಳಿದುಬಂದಿದೆ.

ಸೋಮವಾರ ರಾತ್ರಿ 8.20ರ ಸುಮಾರಿಗೆ ಸ್ಫೋಟ ಸಂಭವಿಸಿದ್ದು, ಈ ವೇಳೆ ಕಚೇರಿಯಲ್ಲಿ ಯಾರೂ ಇರಲಿಲ್ಲಎಂಬುದಾಗಿ ತಿಳಿದುಬಂದಿದೆ.

 

ಪ್ರಕರಣದ ಬಗ್ಗೆ ಮಾಹಿತಿ ನೀಡಿರುವ ಮೋರಾಂಗ್‌ ಜಿಲ್ಲಾ ಎಸ್‌ಪಿ ಅರುಣ್‌ಕುಮಾರ್‌ ಬಿ.ಸಿ ಅವರು, 'ಕಚೇರಿಯ ಹಿಂದೆ ಇರುವ ಖಾಲಿ ಜಾಗದಲ್ಲಿ ಸೋಮವಾರ ರಾತ್ರಿ ಸ್ಫೋಟ ಸಂಭವಿಸಿದ್ದು, ಕಾಂಪೌಂಡ್‌ಗೆ ಸಣ್ಣ ಪ್ರಮಾಣದ ಹಾನಿಯಾಗಿದೆ' ಎಂದಿದ್ದಾರೆ. ಈ ಘಟನೆ ಬಳಿಕ ಪ್ರದೇಶದಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿದೆ.

 

ಸೋಮವಾರ ಸ್ಥಳೀಯ ರಾಜಕೀಯ ಪಕ್ಷವೊಂದು ಬಿರಾತ್‌ನಗರ ಬಂದ್‌ ಗೆ ಕರೆ ನೀಡಿದ್ದರಿಂದ ಈ ಕೃತ್ಯಕ್ಕೆ ಸ್ಥಳೀಯ ರಾಜಕೀಯ ಗುಂಪು ಕಾರಣವಿರಬಹುದು ಎಂದು ಪ್ರಕರಣದ ತನಿಖೆ ನಡೆಸುತ್ತಿರುವ ಅಧಿಕಾರಿಗಳು ಅನುಮಾನ ವ್ಯಕ್ತಪಡಿಸಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments