Webdunia - Bharat's app for daily news and videos

Install App

ಅಟ್ಲಂಟಾ ಸಂಸ್ಥೆಯಿಂದ 15 ಸಾವಿರ ಪುಸ್ತಕಗಳ ಕೊಡುಗೆ

Webdunia
ಮಂಗಳವಾರ, 29 ಜೂನ್ 2021 (10:37 IST)
ಅಮೇರಿಕಾದ ಅಟ್ಲಾಂಟಾ ವಿ-ಸ‌ರ್ವ್ ಇಂಟರ್ ನ್ಯಾಷನಲ್ ಫೌಂಡೇಷನ್ ಸಂಸ್ಥೆ ಬೆಂಗಳೂರು ನಗರದ ನಗರ ಕೇಂದ್ರ ಗ್ರಂಥಾಲಯಕ್ಕೆ ರೂಪಾಯಿ ಒಂದೂವರೆ ಕೋಟಿ ಮೌಲ್ಯದ‌ 15 ಸಾವಿರ ಅತ್ಯತ್ಕೃಷ್ಟ ಪುಸ್ತಕಗಳನ್ನು ನೀಡಿದೆ ಎಂದು ಪ್ರಾಥಮಿಕ
ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ. 
 
ಸೋಮವಾರ ಸುದ್ದಿಗೋಷ್ಠಿಯಲ್ಲಿ ಪುಸ್ತಕಗಳನ್ನು ಇಲಾಖೆ ಪರವಾಗಿ ಸ್ವೀಕರಿಸಿ ಮಾತನಾಡಿದ ಅವರು, ವಿ-ಸರ್ವ್ ಇಂಟರ್ ನ್ಯಾಷನಲ್ ಫೌಂಡೇಷನ್ ಸಂಸ್ಥೆ ಅಧ್ಯಕ್ಷ ಡಾ. ವಿಜಯರಾಘವನ್  ಅವರು ತಮ್ಮ ಸಂಸ್ಥೆಯಿಂದ ನೀಡಿದ ಮೌಲ್ಯಯುತ ಪುಸ್ತಕಗಳನ್ನು ಬೆಂಗಳೂರು ನಗರ ಮತ್ತು ಗ್ರಾಮಾಂತರ ರೋಟರಿ ಸಂಸ್ಥೆಯ ಜಿಲ್ಲಾ ಗೌರ್ನರ್ ಡಾ. ನಾಗೇಂದ್ರ ಪ್ರಸಾದ್ ನಗರ ಕೇಂದ್ರ ಗ್ರಂಥಾಲಯಕ್ಕೆ ಹಸ್ತಾಂತರಿಸಿದ್ದಾರೆ ಎಂದರು.
 
ಅಮೇರಿಕಾದ ಅಟ್ಲಾಂಟದಲ್ಲಿ ಎ.ಕೆ. ಎಜು-ಸ್ಯಾಟ್  ಸಂಸ್ಥೆಯು ಭಾರತದ ಇಸ್ರೋ ಸಂಸ್ಥೆಯೊಂದಿಗೆ ಒಡಂಬಡಿಕೆ ಮಾಡಿಕೊಂಡಿದ್ದು, ಭಾರತದಲ್ಲಿನ ಮೂಲಭೂತ ಸೌಕರ್ಯಗಳಿಲ್ಲದ ಕಟ್ಟಕಡೆಯ ಗ್ರಾಮಗಳಲ್ಲಿನ ಶಿಕ್ಷಣ ವಂಚಿತ ಮಕ್ಕಳಿಗೆ ಎ.ಕೆ. ಎಜು-ಸ್ಯಾಟ್  ಮೂಲಕ ಮೂಲಭೂತ ಶಿಕ್ಷಣ ನೀಡುವ ನಿಟ್ಟಿನಲ್ಲಿ ಕಾ‌ರ್ಯನಿರ್ವಹಿಸುತ್ತಿದ್ದು, ಅದರ ಭಾಗವಾಗಿ ಪುಸ್ತಕಗಳನ್ನು ಒದಗಿಸಿದೆ  ಎಂದು ಅವರು ಹೇಳಿದರು.
 
ಈ ಪುಸ್ತಕಗಳು ಅತ್ಯಂತ ಮೌಲ್ಯಯುತವಾಗಿದ್ದು, ಕ್ರೀಡೆ, ವೈದ್ಯಕೀಯ ಶಿಕ್ಷಣ ಮತ್ತು ವಿಜ್ಞಾನ, ಶಾಸ್ತ್ರೀಯ ಹಾಗೂ ನವನವೀನ ಕಾದಂಬರಿಗಳು, ಪ್ರಸಿದ್ಧ ವ್ಯಕ್ತಿಗಳ ಜೀವನ ಚರಿತ್ರೆಗಳು, ಮಾಹಿತಿ ಮತ್ತುತಂತ್ರಜ್ಞಾನಕ್ಕೆ ಸಂಬಂಧಿಸಿದ ಪುಸ್ತಕಗಳು ಮತ್ತು ಮೆಕ್ಯಾನಿಕಲ್‍ಇಂಜಿನಿಯರಿಂಗ್ ಸೇರಿದಂತೆ ಹಲವಾರು ಪ್ರಾಕಾರದ ಪುಸ್ತಕಗಳನ್ನು ಒಳಗೊಂಡಿವೆ ಎಂದು ಸುರೇಶ್ ಕುಮಾರ್ ತಿಳಿಸಿದರು.
 
ಬೆಂಗಳೂರು ನಗರದ ನಗರ ಕೇಂದ್ರ ಗ್ರಂಥಾಲಯಕ್ಕೆ ಅಮೇರಿಕಾದ ಅಟ್ಲಾಂಟಾದ ವಿ-ಸರ್ವ್ ಇಂಟರ್‍ನ್ಯಾಷನಲ್ ಫೌಂಡೇಷನ್ ಅಧ್ಯಕ್ಷ ವಿಜಯರಾಘವನ್, ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಯ ಡಿಸ್ಟ್ರಿಕ್ ಗೌರ್ನರ್ ಶ್ರೀ ನಾಗೇಂದ್ರ ಪ್ರಸಾದ್ ಅವರಿಗೆ ಸುರೇಶ್ ಕುಮಾರ್ ಕೃತಜ್ಞತೆ ವ್ಯಕ್ತಪಡಿಸಿದರು.
 
ರಾಜ್ಯದ ಜನತೆ ಈ ಪುಸ್ತಕಗಳ ಪ್ರಯೋಜನ ಪಡೆದುಕೊಳ್ಳುವಂತೆ ಸಚಿವರು ಕೋರಿದರು.
ಪುಸ್ತಕ ದಾನ ಅಭಿಯಾನ ಕಾರ್ಯಕ್ರಮದಲ್ಲಿ  ಬೆಂಗಳೂರು ರೋಟರಿ ಸಂಸ್ಥೆಯ ಗವನ೵ರ್   ನಾಗೇಂದ್ರ ಪ್ರಸಾದ್,   ರವಿಶಂಕರ್,   ಶ್ರೀನಿವಾಸಮೂರ್ತಿ, ಅರುಣ್ ಬೇಲೂರ್,   ನೀಲ್‍ಜೋಸೆಫ್,    ರಿತೇಶ್‍ಗೋಯಲ್, ಸಾರ್ವಜನಿಕ ಗ್ರಂಥಾಲಯ ಇಲಾಖೆ ನಿರ್ದೇಶಕ ಡಾ. ಸತೀಶ್ ಕುಮಾರ ಎಸ್. ಹೊಸಮನಿ ಮತ್ತು ಶಿಕ್ಷಣ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments