Webdunia - Bharat's app for daily news and videos

Install App

ಸದ್ದಿಲ್ಲದೆ ಡೋಕ್ಲಾಂ ಗಡಿಯಲ್ಲಿ ಸಕ್ರಿಯವಾಗಿದೆ ಚೀನಾ ಸೇನೆ

Webdunia
ಶುಕ್ರವಾರ, 6 ಅಕ್ಟೋಬರ್ 2017 (09:03 IST)
ನವದೆಹಲಿ: ವಿವಾದಿತ ಡೋಕ್ಲಾಂ ಗಡಿಯಲ್ಲಿ ಮತ್ತೆ ಚೀನಾ ಸೇನೆ ತನ್ನ ರಹಸ್ಯ ಕಾರ್ಯಾಚರಣೆ ಮುಂದುವರಿಸಿದೆ. ವಿವಾದಿತ ಸ್ಥಳದಿಂದ ಕೆಲವೇ ಕಿ.ಮೀ. ದೂರದಲ್ಲಿ ರಸ್ತೆ ಅಗಲೀಕರಣದ ನೆಪದಲ್ಲಿ ಚೀನಾ ಯೋಧರು ಬೀಡು ಬಿಟ್ಟಿದ್ದು ಆತಂಕ ಸೃಷ್ಟಿಸಿದ್ದಾರೆ.

 
ರಸ್ತೆ ಅಗಲೀಕರಣ ನೆಪದಲ್ಲಿ ವಿವಾದಿತ ಸ್ಥಳದಿಂದ 12 ಕಿಮೀ ದೂರದಲ್ಲಿ ಚೀನಾ ಯೋಧರು ಭಾರೀ ಸಂಖ್ಯೆಯಲ್ಲಿ ಬೀಡುಬಿಟ್ಟಿದ್ದಾರೆ ಎಂದು ವಾಯುಸೇನಾ ಮುಖ್ಯಸ್ಥ ಧನೋವಾ ಹೇಳಿದ್ದಾರೆ.

‘ಉಭಯ ಸೇನೆಗಳು ಇದುವರೆಗೆ ಎದುರಾಗಿಲ್ಲ. ಆದರೆ ಚುಂಬಿ ವ್ಯಾಲಿಯಲ್ಲಿ ಅವರ ಸೇನೆ ಇನ್ನೂ ಬೀಡು ಬಿಟ್ಟಿದೆ. ರಸ್ತೆ ಕೆಲಸ ಮುಗಿದ ತಕ್ಷಣ ಅವರು ಸೇನೆ ಹಿಂಪಡೆಯಬಹುದು ಎಂದು ಆಶಿಸುತ್ತೇನೆ. ಇದು ಭಾರತದ ಪಾಲಿಗೆ ನಿಜಕ್ಕೂ ಕಳವಳಕಾರಿ ವಿಷಯ’ ಎಂದು ಧನೋವಾ ಹೇಳಿದ್ದಾರೆ.

ಇತ್ತೀಚೆಗಷ್ಟೇ ಡೋಕ್ಲಾಂ ಗಡಿ ವಿಚಾರದಲ್ಲಿ ಉಭಯ ದೇಶಗಳ ನಡುವೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡು ಯುದ್ಧದ ವಾತಾವರಣ ಸೃಷ್ಟಿಯಾಗಿತ್ತು. ಆದರೆ ಬ್ರಿಕ್ಸ್ ಸಮ್ಮೇಳನಕ್ಕೆ ಪ್ರಧಾನಿ ಮೋದಿ ಚೀನಾ ದೇಶಕ್ಕೆ ಭೇಟಿ ಕೊಡುವ ಮೊದಲು ವಿವಾದವನ್ನು ಮಾತುಕತೆಯ ಮೂಲಕ ಬಗೆಹರಿಸಿ ಉಭಯ ದೇಶಗಳೂ ಗಡಿಯಿಂದ ಸೇನೆ ಹಿಂಪಡೆಯಲು ಒಪ್ಪಿಕೊಂಡಿದ್ದವು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

19ಮಾಜಿ ಮಂತ್ರಿಗಳ ಭದ್ರತೆ ಕೈಬಿಟ್ಟ ಗೃಹ ಸಚಿವಾಲಯ, ಆದರೆ ಸ್ಮೃತಿ ಇರಾನಿಗೆ ಯಾಕೆ ಈ ವಿಶೇಷತೆ

ಛತ್ತೀಸ್‌ಗಢ: ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ಮಹಿಳಾ ಮಾವೋವಾದಿ ಹತ್ಯೆ

ಮದ್ಯದ ಬೆಲೆ ಕೇಳಿಯೇ ನಶೆ ಏರುವಂತಾಗಿದೆ: ಬಿಜೆಪಿ ವ್ಯಂಗ್ಯ

Suhas Shetty Case: ಹತ್ಯೆ ಹಿಂದೆ ಬಜ್ಪೆ ಹೆಡ್‌ ಕಾನ್‌ಸ್ಟೇಬಲ್‌ ಭಾಗಿಯಾಗಿರುವ ಶಂಕೆ

Suhas Shetty Case: ಯುಟಿ ಖಾದರ್ ಸ್ಪೀಕರ್‌ ಆಗಿರುವವರೆಗೆ ಸಾವಿಗೆ ನ್ಯಾಯ ಸಿಗುವ ನಂಬಿಕೆಯಿಲ್ಲ

ಮುಂದಿನ ಸುದ್ದಿ
Show comments