Webdunia - Bharat's app for daily news and videos

Install App

ಚೀನಾ ಗಡಿ ಒಪ್ಪಂದವನ್ನು ಕಡೆಗಣಿಸಿದೆ: ಜೈಶಂಕರ್

Webdunia
ಸೋಮವಾರ, 22 ಆಗಸ್ಟ್ 2022 (07:02 IST)
ಬ್ರೆಸಿಲಿಯಾ : ಚೀನಾ ಭಾರತದೊಂದಿಗಿನ ಗಡಿ ಒಪ್ಪಂದವನ್ನು ಕಡೆಗಣಿಸಿದೆ. ಗಲ್ವಾನ್ ಕಣಿವೆಯ ಬಿಕ್ಕಟ್ಟಿನಿಂದಾಗಿ ಉಭಯ ರಾಷ್ಟ್ರಗಳ ನಡುವಿನ ಸಂಬಂಧ ಹದಗೆಡುತ್ತಿದೆ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಹೇಳಿದರು.

ಬ್ರೆಜಿಲ್ನ ಸಾವೋ ಪಾಲೋದಲ್ಲಿ ಭಾರತೀಯ ಸಮುದಾಯದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಜೈಶಂಕರ್ ಈ ವೇಳೆ ಮಾತನಾಡಿ, ನಾವು 1990ರ ದಶಕದಿಂದ ಚೀನಾದೊಂದಿಗೆ ಗಡಿ ಪ್ರದೇಶದಲ್ಲಿ ದೊಡ್ಡ ಸಂಖ್ಯೆಯ ಪಡೆಗಳನ್ನು ನಿಯೋಜಿಸುವುದನ್ನು ನಿಷೇಧಿಸುವ ಒಪ್ಪಂದ ಮಾಡಿಕೊಂಡಿದ್ದೇವೆ.

ಆದರೆ ಅವರು ಆ ಒಪ್ಪಂದವನ್ನು ನಿರ್ಲಕ್ಷಿಸಿದ್ದಾರೆ. ಗಲ್ವಾನ್ ಕಣಿವೆಯಲ್ಲಿ ಏನಾಗಿದೆ ಎಂಬುದು ಎಲ್ಲರಿಗೂ ತಿಳಿದಿದೆ. ಆ ಸಮಸ್ಯೆ ಇನ್ನೂ ಬಗೆಹರಿದಿಲ್ಲ ಎಂದು ತಿಳಿಸಿದರು.

ಭಾರತ-ಚೀನಾ ನಡುವಿನ ಗಡಿ ಪರಿಸ್ಥಿತಿ ಕುರಿತು ಮಾತನಾಡಿದ ಜೈಶಂಕರ್, ಸಂಬಂಧಗಳು ಏಕಮುಖವಾಗಿರಬಾರದು. ಸಂಬಂಧಗಳನ್ನು ಉಳಿಸಿಕೊಳ್ಳಲು ಪರಸ್ಪರ ಗೌರವ ಇರುವುದು ಮುಖ್ಯ. ಅವರು ನಮ್ಮ ನೆರೆಹೊರೆಯವರು. ಪ್ರತಿಯೊಬ್ಬರೂ ನೆರೆಹೊರೆಯವರೊಂದಿಗೆ ಬೆರೆಯಲು ಬಯಸುತ್ತಾರೆ. ಅದು ವೈಯಕ್ತಿಕ ಜೀವನ, ದೇಶಗಳ ನಡುವೆಯೂ ಅನ್ವಯಿಸುತ್ತದೆ ಎಂದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments