Webdunia - Bharat's app for daily news and videos

Install App

ಕೊರೊನಾವೈರಸ್ ಭೀತಿ: ಚೀನಾದಿಂದ ಪಾಕ್ ವಿದ್ಯಾರ್ಥಿಗಳನ್ನು ಕರೆತರಲು ಭಾರತ ಸಹಾಯ?

Webdunia
ಶುಕ್ರವಾರ, 7 ಫೆಬ್ರವರಿ 2020 (11:32 IST)
ನವದೆಹಲಿ: ಚೀನಾದ ವುಹಾನ್ ನಲ್ಲಿ ಕೊರೋನಾವೈರಸ್ ಭೀತಿ ಹೆಚ್ಚಾಗಿದ್ದು, ಈ ಪ್ರದೇಶದಲ್ಲಿ ಸಿಲುಕಿಕೊಂಡಿದ್ದ ಭಾರತೀಯರನ್ನು ಸುರಕ್ಷಿತವಾಗಿ ವಿಶೇಷ ವಿಮಾನಗಳ ಮೂಲಕ ಭಾರತ ವಿದೇಶಾಂಗ ಇಲಾಖೆ ಸ್ವದೇಶಕ್ಕೆ ಕರೆತಂದಿತ್ತು.


ಭಾರತ ಈ ರೀತಿ ತನ್ನ ನಾಗರಿಕರ ರಕ್ಷಣೆಗೆ ಧಾವಿಸಿರುವುದನ್ನು ನೋಡಿದ ಕೆಲವು ಪಾಕ್ ವಿದ್ಯಾರ್ಥಿಗಳು ತಮ್ಮ ದೇಶದ ಪ್ರಧಾನಿ ಇಮ್ರಾನ್ ಖಾನ್ ಗೆ ನಮ್ಮನ್ನೂ ಇದೇ ರೀತಿ ಕಾಪಾಡಿ ಎಂದು ಮೊರೆಯಿಟ್ಟಿದ್ದರು.

ಭಾರತವನ್ನು ನೋಡಿ ಕಲಿಯಿರಿ. ಆದರೆ ನಮ್ಮ ದೇಶದ ಸರ್ಕಾರ ನಮ್ಮ ಕಡೆಗೆ ತಿರುಗಿಯೂ ನೋಡುತ್ತಿಲ್ಲ. ನಾಚಿಕೆಯಾಗಬೇಕು ನಿಮಗೆ ಎಂದು ಕೆಲವರು ಸಾಮಾಜಿಕ ಜಾಲತಾಣಗಳ ಮೂಲಕ ಪಾಕ್ ಸರ್ಕಾರಕ್ಕೆ ಛೀಮಾರಿ ಹಾಕಿದ್ದರು.

ಇದೀಗ ಭಾರತ ಪಾಕ್ ವಿದ್ಯಾರ್ಥಿಗಳನ್ನು ಸ್ವದೇಶಕ್ಕೆ ಕಳುಹಿಸಲು ನೆರವಾಗುತ್ತದೆ ಎಂಬ ಸುದ್ದಿ ಹರಿದಾಡುತ್ತಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಭಾರತದ ವಿದೇಶಾಂಗ ಇಲಾಖೆ ‘ಈ ಬಗ್ಗೆ ನಮಗೆ ಇದುವರೆಗೆ ಪಾಕಿಸ್ತಾನ ಸರ್ಕಾರದಿಂದ ಮನವಿ ಬಂದಿಲ್ಲ. ಒಂದು ವೇಳೆ ಇಮ್ರಾನ್ ಸರ್ಕಾರ ಸಹಾಯ ಕೋರಿದರೆ ಪರಿಶೀಲಿಸೋಣ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments