Select Your Language

Notifications

webdunia
webdunia
webdunia
webdunia

ಪ್ರಧಾನಿ ಮೋದಿಗೆ ಹೆದರಿ ಆಗಾಗ ನೆಲೆ ಬದಲಿಸಿದ್ದ ದಾವೂದ್

ಪ್ರಧಾನಿ ಮೋದಿಗೆ ಹೆದರಿ ಆಗಾಗ ನೆಲೆ ಬದಲಿಸಿದ್ದ ದಾವೂದ್
ನವದೆಹಲಿ , ಶುಕ್ರವಾರ, 22 ಸೆಪ್ಟಂಬರ್ 2017 (09:14 IST)
ನವದೆಹಲಿ: ಭಾರತದಲ್ಲಿ ಪ್ರಧಾನಿ ಮೋದಿ ಅಧಿಕಾರಕ್ಕೆ ಬರುತ್ತಿದ್ದಂತೆ ದಾಳಿಯ ಭೀತಿಯಿಂದ ಪಾಕ್ ನಲ್ಲಿ ಅಡಗಿರುವ ಭೂಗತ ಲೋಕದ ಪಾತಕಿ ದಾವೂದ್ ಇಬ್ರಾಹಿಂದ 4 ಕಡೆ ತನ್ನ ವಾಸಸ್ಥಳ ಬದಲಿಸಿದ್ದನಂತೆ! ಹಾಗಂತ ಮುಂಬೈ ಪೊಲೀಸರ ವಶದಲ್ಲಿರುವ ದಾವೂದ್ ಸಹೋದರ ಕಸ್ಕರ್ ಬಾಯ್ಬಿಟ್ಟಿದ್ದಾನೆ!

 
ಉದ್ಯಮಿಯೊಬ್ಬರಿಗೆ ಹಣಕಾಸಿಗೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬಂಧಿತನಾಗಿರುವ ಕಸ್ಕರ್ ದಾವೂದ್ ಗೆ ಸಂಬಂಧಿಸಿದ ಅನೇಕ ಸ್ಪೋಟಕ ಸತ್ಯಗಳನ್ನು ಹೊರ ಹಾಕಿದ್ದಾನೆ. ಮೋದಿ ಸರ್ಕಾರ ಅಸ್ಥಿತ್ವಕ್ಕೆ ಬಂದಾಗಿನಿಂದ ಭಯಭೀತನಾಗಿರುವ ದಾವೂದ್ ಆಗಾಗ ವಾಸಸ್ಥಳ ಬದಲಿಸಿದ್ದಾನೆ ಎಂಬುದಾಗಿ ಹೇಳಿಕೊಂಡಿದ್ದಾನೆ.

ಆದರೆ ಇದರ ನಡುವೆಯೇ ಮಹಾರಾಷ್ಟ್ರ ನವ ನಿರ್ಮಾಣ ಸೇನೆ ಮುಖ್ಯಸ್ಥ ರಾಜ್ ಠಾಕ್ರೆ ಕೇಂದ್ರದ ಜತೆ ದಾವೂದ್ ಒಪ್ಪಂದ ಮಾಡಿಕೊಂಡಿದ್ದಾನೆ ಎಂದು ಬಾಂಬ್ ಸಿಡಿಸಿದ್ದಾರೆ. ಪಾತಕಿ ಭಾರತಕ್ಕೆ ವಾಪಸಾಗುವ ಕುರಿತಂತೆ ಮಾತುಕತೆ ನಡೆಸಿದ್ದಾನೆ ಎಂದು ಅವರು ಹೇಳಿಕೊಂಡಿದ್ದಾರೆ. ಫೇಸ್ ಬುಕ್ ನಲ್ಲಿ ಇಂತಹದ್ದೊಂದು ವಿಚಾರವನ್ನು ಅವರು ಬರೆದುಕೊಂಡಿದ್ದಾರೆ.

ಇದನ್ನೂ ಓದಿ.. ಕ್ಯಾಚ್ ಹಿಡಿದರೂ ಔಟಾಗದ ಹಾರ್ದಿಕ್ ಪಾಂಡ್ಯ !
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಅಥಣಿಯಿಂದ ಸ್ಪರ್ಧಿಸುವಂತೆ ಸಿಎಂ ಸಿದ್ದರಾಮಯ್ಯಗೆ ಮನವಿ: ರಮೇಶ್ ಜಾರಕಿಹೊಳಿ