Webdunia - Bharat's app for daily news and videos

Install App

ಮೋದಿ, ವಿಪಕ್ಷ ನಾಯಕರ ಭೇಟಿಗೆ ದಿಲ್ಲಿಗೆ ದೀದಿ ಆಗಮನ!

Webdunia
ಮಂಗಳವಾರ, 27 ಜುಲೈ 2021 (14:29 IST)
ನವದೆಹಲಿ/ಕೋಲ್ಕತಾ(ಜು.27): ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹಾಗೂ ವಿಪಕ್ಷಗಳ ನಾಯಕರ ಭೇಟಿಗಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಸೋಮವಾರದಿಂದ 5 ದಿನಗಳ ದೆಹಲಿ ಪ್ರವಾಸ ಆರಂಭಿಸಿದ್ದಾರೆ.

* ಬಂಗಾಳದಲ್ಲಿ ನಕಲಿ ಕೋವಿಡ್ ಲಸಿಕಾಕರಣ, ಚುನಾವಣೋತ್ತರ ಹಿಂಸಾಚಾರಗಳು ಸೇರಿ ಇನ್ನಿತರ ವಿಚಾರಗಳಿಂದ ರಾಜ್ಯದಲ್ಲಿ ದೀದಿ ವಿರುದ್ಧ ಟೀಕೆ
* ಮೋದಿ, ವಿಪಕ್ಷ ನಾಯಕರ ಭೇಟಿಗೆ ದಿಲ್ಲಿಗೆ ದೀದಿ ಆಗಮನ

ಈ ಬಗ್ಗೆ ಮಾತನಾಡಿದ ಬ್ಯಾನರ್ಜಿ ಅವರು, ತಮ್ಮ ಭೇಟಿಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ದಿನಾಂಕ ನಿಗದಿ ಮಾಡಿದ್ದಾರೆ. ಜೊತೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಭೇಟಿಗೆ ದೆಹಲಿ ತೆರಳುತ್ತಿದ್ದೇನೆ ಎಂದಷ್ಟೇ ಹೇಳಿದ್ದಾರೆ. ಆದರೆ ಮೋದಿ ಜತೆಗಿನ ಭೇಟಿ ವೇಳೆ ಏನೆಲ್ಲಾ ಚರ್ಚೆಗಳು ನಡೆಯಲಿವೆ ಎಂಬ ಮಾಹಿತಿಯನ್ನು ಅವರು ಬಹಿರಂಗಪಡಿಸಿಲ್ಲ.
ಆದರೆ ಇತ್ತೀಚೆಗಷ್ಟೇ ಬಿಜೆಪಿಯ ಅಬ್ಬರ ಮತ್ತು ಘಟಾನುಘಟಿ ನಾಯಕರ ಪ್ರಚಾರದ ಹೊರತಾಗಿಯೂ, ಬಂಗಾಳದಲ್ಲಿ ಅಧಿಕಾರ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುವ ದೀದಿ ಅವರು 2024ರ ಲೋಕಸಭೆ ಚುನಾವಣೆ ಮೇಲೆ ಕಣ್ಣಿಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ರಾಷ್ಟ್ರಮಟ್ಟದ ನಾಯಕರ ಬೆಂಬಲ ಪಡೆಯುವ ನಿಟ್ಟಿನಲ್ಲಿ ಮಮತಾ ಈ ಭೇಟಿ ಕೈಗೊಂಡಿದ್ದಾರೆ ಎನ್ನಲಾಗಿದೆ.
ಏತನ್ಮಧ್ಯೆ, ಬಂಗಾಳದಲ್ಲಿ ನಕಲಿ ಕೋವಿಡ್ ಲಸಿಕಾಕರಣ, ಚುನಾವಣೋತ್ತರ ಹಿಂಸಾಚಾರಗಳು ಸೇರಿ ಇನ್ನಿತರ ವಿಚಾರಗಳಿಂದ ರಾಜ್ಯದಲ್ಲಿ ದೀದಿ ವಿರುದ್ಧ ಟೀಕೆಗಳು ವ್ಯಕ್ತವಾಗಿವೆ. ಈ ಹಿನ್ನೆಲೆಯಲ್ಲಿ ಕೆಲ ದಿನ ಬಂಗಾಳದಿಂದ ದೂರ ಉಳಿಯಲು ಮಮತಾ ಬ್ಯಾನರ್ಜಿ ದಿಲ್ಲಿ ಯಾತ್ರೆ ಕೈಗೊಂಡಿದ್ದಾರೆ ಎಂದು ರಾಜ್ಯ ಬಿಜೆಪಿ ವ್ಯಂಗ್ಯವಾಡಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Dehli Airport: ಭಾರೀ ಮಳೆಗೆ ಸೋರುತ್ತಿದೆ ಛಾವಣಿ, Video Viral

ಮಗನ ಇನ್ನೊಂದು ಸಂಬಂಧ ತಿಳಿಯುತ್ತಿದ್ದ ಹಾಗೇ RJDಯಿಂದ ಉಚ್ಛಾಟಿಸಿದ ಲಾಲು

18 ಬಿಜೆಪಿ ಶಾಸಕರ ಅಮಾನತು ವಾಪಾಸ್ ಪಡೆಯುವ ಮುನ್ಸೂಚನೆ ಕೊಟ್ಟ ಸ್ಪೀಕರ್ ಯುಟಿ ಖಾದರ್‌

ಆಪರೇಷನ್ ಸಿಂಧೂರ್‌ ಕೇವಲ ಮಿಲಿಟರಿ ಕಾರ್ಯಾಚರಣೆಯಲ್ಲ, ಭಾರತದ ಪ್ರತಿಬಿಂಬ: ಮನ್ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ

ನಾಲ್ಕನೇ ಅತಿದೊಡ್ಡ ಆರ್ಥಿಕತೆಯ ರಾಷ್ಟ್ರವಾಗಿ ಭಾರತ: ಐದನೇ ಸ್ಥಾನಕ್ಕೆ ಜಾರಿದ ಜಪಾನ್‌

ಮುಂದಿನ ಸುದ್ದಿ
Show comments