ಶಾಂತಿ ಸ್ಥಾಪನೆ ಉದ್ದೇಶ ನಮ್ಮ ದೌರ್ಬಲ್ಯವಲ್ಲ : ನವಾಜ್ ಷರೀಫ್ ಎಚ್ಚರಿಕೆ

Webdunia
ಗುರುವಾರ, 29 ಸೆಪ್ಟಂಬರ್ 2016 (15:03 IST)
ಭಾರತೀಯ ಸೇನಾ ಕಾರ್ಯಾಚರಣೆ ಪ್ರಧಾನ ನಿರ್ದೇಶಕ (ಡಿಜಿಎಂಓ) ಜನರಲ್ ರಣಬೀರ್ ಸಿಂಗ್, ಪಾಕ್ ಆಕ್ರಮಿತ ಕಾಶ್ಮಿರದ ಮೇಲೆ ದಾಳಿ ನಡೆಸಿ 38 ಉಗ್ರರನ್ನು ಹತ್ಯೆ ಮಾಡಲಾಗಿದೆ ಎನ್ನುವ ಹೇಳಿಕೆ ಹೊರಬೀಳುತ್ತಿದ್ದಂತೆ ಪ್ರತಿಕ್ರಿಯೆ ನೀಡಿದ ಪಾಕ್ ಪ್ರಧಾನಿ ನವಾಜ್ ಷರೀಫ್, ಭಾರತೀಯ ಸೇನಾ ನಡೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. 
 
ಗಡಿ ರೇಖೆ ನಿಯಂತ್ರಣದಲ್ಲಿರುವ ಪಾಕ್ ಆಕ್ರಮಿತ ಕಾಶ್ಮಿರದ ಮೇಲೆ ನಡೆದ ಭಾರತೀಯ ಸೇನಾ ದಾಳಿ ಆಕ್ರಮಣಕಾರಿ ಮನೋಭಾವವನ್ನು ತೋರುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
 
ನಾವು ಭಾರತೀಯ ಸೇನೆಯ ದಾಳಿಯನ್ನು ತೀವ್ರವಾಗಿ ಖಂಡಿಸುತ್ತೇವೆ. ನಾವು ಶಾಂತಿ ಬಯಸುತ್ತೇವೆ ಎಂದರೆ ದುರ್ಬಲರು ಎಂದರ್ಥವಲ್ಲ. ದೇಶದ ಸಾರ್ವಭೌಮತೆಯನ್ನು ಕಾಪಾಡಲು ಪಾಕ್ ಸೇನೆ ಸನ್ನದ್ಧವಾಗಿದೆ. ಯಾವುದೇ ದಾಳಿಯನ್ನು ಎದುರಿಸಲು ಸೇನೆ ಸಜ್ಜಾಗಿದೆ ಎಂದು ಗುಡುಗಿದ್ದಾರೆ.
 
ಸರ್ಜಿಕಲ್ ದಾಳಿಯಲ್ಲಿ ಉಗ್ರರೊಂದಿಗೆ ಅವರ ಬೆಂಬಲಿಗರು ಕೂಡಾ ಗಾಯಗೊಂಡಿದ್ದಾರೆ. ಆದರೆ, ಭಾರತೀಯ ಸೇನಾಯೋಧರಲ್ಲಿ ಯಾರೊಬ್ಬರು ಗಾಯಗೊಂಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
 
ಸೀಮಿತ ದಾಳಿಯ ಬಗ್ಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಉಪರಾಷ್ಟ್ರಪತಿ ಹಮೀದ್ ಅನ್ಸಾರಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಮತ್ತು ಜಮ್ಮು ಕಾಶ್ಮಿರ ರಾಜ್ಯಪಾಲ ನರೀಂದರ್ ನಾಥ್ ವೋಹರಾ ಮತ್ತು ಜಮ್ಮು ಕಾಶ್ಮಿರ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿಯವರಿಗೆ ಮಾಹಿತಿ ನೀಡಲಾಗಿದೆ ಎಂದು ಡಿಜಿಎಂಓ ರಣಬೀರ್ ಸಿಂಗ್ ತಿಳಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಿಸ್ಟರ್ ಕ್ಲೀನ್, ಸ್ಮಶಾನ ಭೂಮಿ, ಕೆರೆ ಅಂಗಳವನ್ನು ತಮ್ಮ ಹೆಸರಿಗೆ ಮಾಡಿಕೊಂಡದ್ದು ಹೇಗೆ

ಆರೋಗ್ಯದಲ್ಲಿ ಏರುಪೇರು, ವಿಶ್ರಾಂತಿಯಲ್ಲಿರುವ ಸಿದ್ದರಾಮಯ್ಯರನ್ನು ಭೇಟಿಯಾದ ಪುತ್ರ ಯತೀಂದ್ರ

ಎಐ ದುರ್ಬಳಕೆ ಬಗ್ಗೆ ಶ್ರೀಲೀಲಾ ಗರಂ, ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡ ನಟಿ

ಗೋವಾ ನೈಟ್‌ಕ್ಲಬ್ ದುರಂತ, ಪರಾರಿಯಾಗಿದ್ದ ಮಾಲಕ ಸಹೋದರರ ವಿಚಾರಣೆ

ಖಾಕಿ ಮೇಲೆ ಕೈ ಹಾಕಿದ ಮೂವರು ಮೂವರಿಗೆ 7 ವರ್ಷ ಜೈಲೇ ಗತಿ

ಮುಂದಿನ ಸುದ್ದಿ
Show comments