Webdunia - Bharat's app for daily news and videos

Install App

ಭಾರತ ಪಾಕಿಸ್ತಾನದಂತೆ ಇಸ್ರೇಲ್ ಇರಾನ್ ನಡುವೆ ಕದನ ವಿರಾಮ ಘೋಷಿಸಿದ ಟ್ರಂಪ್: ಆದರೆ ಆಗಿದ್ದೇನು

Krishnaveni K
ಮಂಗಳವಾರ, 24 ಜೂನ್ 2025 (09:09 IST)
ನವದೆಹಲಿ: ಭಾರತ ಮತ್ತು ಪಾಕಿಸ್ತಾನದ ನಡುವೆ ಕದನ ವಾತಾವರಣವಿದ್ದಾಗ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಾವೇ ಕದನ ವಿರಾಮವಾಗಿದೆ ಎಂದು ಎಕ್ಸ್ ನಲ್ಲಿ ಘೋಷಣೆ ಮಾಡಿದ್ದರು. ಇದೀಗ ಇಸ್ರೇಲ್-ಇರಾನ್ ನಡುವಿನ ಯುದ್ಧದಲ್ಲೂ ತಾವೇ ಕದನ ವಿರಾಮವಾಗಿದೆ ಎಂದು ಘೋಷಿಸಿದ್ದಾರೆ. ಆದರೆ ಇಲ್ಲಿ ಆಗಿದ್ದೇನು ಗೊತ್ತಾ?

ಭಾರತ ಮತ್ತು ಪಾಕಿಸ್ತಾನ ನಡುವೆ ಕದನ ವಿರಾಮ ಘೋಷಿಸಿದ್ದು ನಾನೇ ಎಂದು  ಡೊನಾಲ್ಡ್ ಟ್ರಂಪ್ ಟ್ವೀಟ್ ಮಾಡಿ ಘೋಷಿಸಿದ್ದರು. ಅದಾದ ಬಳಿಕ ಎಲ್ಲೇ ಹೋದರೂ ಭಾರತ ಮತ್ತು ಪಾಕಿಸ್ತಾನ ನಡುವೆ ನಾನೇ ಕದನ ವಿರಾಮ ಮಾಡಿಸಿದ್ದು ಎಂದು ಪೋಸ್ ಕೊಡುತ್ತಲೇ ಇದ್ದರು. ಭಾರತ ಸರ್ಕಾರವೂ ನೇರವಾಗಿ ಪಾಕಿಸ್ತಾನದಿಂದ ಪ್ರಸ್ತಾಪ ಬಂದಿದ್ದಕ್ಕೇ ಒಪ್ಪಿಕೊಂಡಿದ್ದು ಎಂದು ಸ್ಪಷ್ಟನೆ ಕೊಟ್ಟಿತ್ತು. ಆದರೂ ಟ್ರಂಪ್ ಹೇಳುವುದನ್ನು ಮಾತ್ರ ಬಿಡಲಿಲ್ಲ. ಅದೇನೇ ಇರಲಿ, ಟ್ರಂಪ್ ಕದನ ವಿರಾಮ ಘೋಷಿಸಿದ ಬೆನ್ನಲ್ಲೇ ಎರಡೂ ದೇಶಗಳೂ ಸೈಲೆಂಟ್ ಆಗಿದ್ದವು.

ಈಗ ಇಸ್ರೇಲ್ ಮತ್ತು ಇರಾನ್ ನಡುವೆಯೂ ಡೊನಾಲ್ಡ್ ಟ್ರಂಪ್ ತಾವೇ ಕದನವಿರಾಮವಾಗಿದೆ ಎಂದು ಘೋಷಿಸಿದ್ದಾರೆ. ಆದರೆ ಇಷ್ಟಕ್ಕೇ ಎರಡು ದೇಶಗಳೂ ಸೈಲೆಂಟ್ ಆಗಿಲ್ಲ. ಇಸ್ರೇಲ್ ನಿಂದ ದಾಳಿ ನಿಲ್ಲುವವರೆಗೂ ನಾವು ಕದನ ವಿರಾಮ ಒಪ್ಪಲ್ಲ ಎಂದು ಇರಾನ್ ಹೇಳಿದೆ. ಅತ್ತ ಇಸ್ರೇಲ್ ಕೂಡಾ ಟ್ರಂಪ್ ಕದನ ವಿರಾಮ ಘೋಷಿಸಿದ ಬೆನ್ನಲ್ಲೇ ಮಿಸೈಲ್ ದಾಳಿಗೆ ಸೈರನ್ ಮೊಳಗಿಸಿದೆ. ಮೊದಲು ದಾಳಿ ನಡೆಸಿದ್ದು ಇಸ್ರೇಲ್ ಹೀಗಾಗಿ ಇಸ್ರೇಲ್ ದಾಳಿ ನಿಲ್ಲಿಸುವವರೆಗೂ ನಾವು ನಿಲ್ಲಿಸಲ್ಲ. ಕೊನೆಯ ಹನಿ ರಕ್ತ ಇರುವವರೆಗೂ ದಾಳಿ ನಡೆಸುತ್ತೇವೆ ಎಂದು ಇರಾನ್ ಹೇಳಿಕೊಂಡಿದೆ. ಹೀಗಾಗಿ ಇಲ್ಲಿ ಟ್ರಂಪ್ ಘೋಷಣೆ ಅಷ್ಟರಮಟ್ಟಿಗೆ ಸಕ್ಸಸ್ ಆಗಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Rains: ರಾಜ್ಯದ ಈ ಜಿಲ್ಲೆಗಳಿಗೆ ಇಂದು ತೀವ್ರ ಮಳೆಯ ಎಚ್ಚರಿಕೆ

ಕಾಂಗ್ರೆಸ್ ಭಿನ್ನರ ಬಗ್ಗೆ ಬಿಎಸ್ ಯಡಿಯೂರಪ್ಪ ಸ್ಪೋಟಕ ಹೇಳಿಕೆ

ಇದು ಸೇವೆಗಾಗಿ ಬಂದ ಕಾಂಗ್ರೆಸ್ ಅಲ್ಲ, ವ್ಯಾಪಾರಕ್ಕಾಗಿ ಬಂದಿದ್ದು: ಛಲವಾದಿ ನಾರಾಯಣಸ್ವಾಮಿ

ಸಾಲಗಾರನ ಮಗಳನ್ನು ಕರೆದೊಯ್ದ ಪ್ರಕರಣ: ಆರೋಪಿ ಅರೆಸ್ಟ್‌

ನನ್ನ ಶೂ ನೆಕ್ಕಲು ಸಹ ಅರ್ಹನಲ್ಲ: ಅಧಿಕಾರಿಗಳ ವಿರುದ್ಧ ಜಾತಿ ನಿಂದನೆ ದೂರು ಕೊಟ್ಟ ಇಂಡಿಗೋ ಸಿಬ್ಬಂದಿ

ಮುಂದಿನ ಸುದ್ದಿ
Show comments