Webdunia - Bharat's app for daily news and videos

Install App

ಆಝಾನ್, ನಮಾಜ್ ವೇಳೆ ದೇವಾಲಯದಲ್ಲಿ ದುರ್ಗಾ ಪೂಜೆ ನಿಲ್ಲಿಸಬೇಕು

Krishnaveni K
ಗುರುವಾರ, 12 ಸೆಪ್ಟಂಬರ್ 2024 (12:22 IST)
ಢಾಕಾ: ಬಾಂಗ್ಲಾದೇಶದಲ್ಲಿ ನೂತನವಾಗಿ ಜಾರಿಗೆ ಬಂದಿರುವ ಮಧ್ಯಂತರ ಸರ್ಕಾರ ಆಝಾನ್ ಮತ್ತು ನಮಾಜ್ ವೇಳೆ ಹಿಂದೂ ದೇವಾಲಯಗಳಲ್ಲಿ ದುರ್ಗಾ ಪೂಜೆ, ಭಕ್ತಿಗೀತೆಗಳನ್ನು ಹಾಕುವುದನ್ನು ನಿಲ್ಲಿಸಬೇಕು ಎಂದು ಆದೇಶ ಹೊರಡಿಸಿದೆ.

ಬಾಂಗ್ಲಾದೇಶದಲ್ಲಿ ಬಹುಸಂಖ್ಯಾತ ಮುಸ್ಲಿಮರ ಪ್ರಾರ್ಥನೆಗೆ ಭಂಗ ತರಬಾರದು ಎಂದು ಅಲ್ಪಸಂಖ್ಯಾತ ಹಿಂದೂಗಳ ಮೇಲೆ ಸರ್ಕಾರ ಈ ಆದೇಶ ಹೊರಡಿಸಿದೆ. ಇದಕ್ಕೆ ಹಿಂದೂ ಸಮುದಾಯದವರೂ ಒಪ್ಪಿಗೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಹೀಗಾಗಿ ಮುಸಲ್ಮಾನರ ಪ್ರಾರ್ಥನೆ ವೇಳೆ ಅಲ್ಲಿ ದೇವಾಲಯವೂ ಸೈಲೆಂಟ್ ಆಗಲಿದೆ.

ಆಝಾನ್, ನಮಾಜ್ ವೇಳೆ ಹಿಂದೂ ದೇವಾಲಯಗಳಲ್ಲಿ ಭಕ್ತಿ ಗೀತೆಗಳನ್ನು ಪ್ಲೇ ಮಾಡುವುದನ್ನು ನಿಲ್ಲಿಸಬೇಕು ಎಂಬ ಆದೇಶವನ್ನು ಹಿಂದೂ ಸಮುದಾಯದವರೂ ಒಪ್ಪಿಕೊಂಡಿದ್ದಾರೆ ಎಂದು ಗೃಹಸಚಿವಾಲಯದ ಸಲಹೆಗಾರ ಲೆಫ್ಟಿನೆಂಟ್ ಜನರಲ್ ಜಹಾಂಗೀರ್ ಅಲಾಮ್ ಹೇಳಿದ್ದಾರೆ.

ಆಝಾನ್ ಗೆ ಐದು ನಿಮಿಷ ಮೊದಲೇ ದೇವಾಲಯದಲ್ಲಿ ಪ್ಲೇ ಆಗುವ ಹಾಡುಗಳು ಬಂದ್ ಆಗಬೇಕು ಎಂದಿದ್ದಾರೆ. ಇನ್ನೇನು ದುರ್ಗಾ ಪೂಜೆ ಬರಲಿದ್ದು, ಇದಕ್ಕೆ ಮೊದಲು ಹಿಂದೂ ಸಮುದಾಯದವರೊಂದಿಗೆ ಸಭೆ ನಡೆಸಿದ ಬಳಿಕ ಈ ಆದೇಶ ನೀಡಲಾಗಿದೆ. ದುರ್ಗಾ ಪೂಜೆಗೆ ಸರ್ಕಾರವೂ ಅನುವು ಮಾಡಿಕೊಡಲಿದೆ. ಆದರೆ ಈ ನಿಯಮವನ್ನು ಪಾಲಿಸಲೇಬೇಕು ಎಂದು ಜಹಾಂಗೀರ್ ಅಲಾಮ್ ಹೇಳಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬುರುಡೆ ಪ್ರಕರಣಕ್ಕೆ ಮತ್ತೊಂದು ಬಿಗ್‌ ಟಿಸ್ಟ್‌: ಮಾಸ್ಕ್‌ಮ್ಯಾನ್ ಸ್ನೇಹಿತನಿಂದ ಹೊರಬಿತ್ತು ಸ್ಫೋಟಕ ಮಾಹಿತಿ

ನಾಮಪತ್ರ ಸಲ್ಲಿಸಿದ ಬೆನ್ನಲ್ಲೇ ದೇವೇಗೌಡರನ್ನ ಭೇಟಿಯಾದ ಎನ್‌ಡಿಎ ಉಪ ರಾಷ್ಟ್ರಪತಿ ಅಭ್ಯರ್ಥಿ

ಚಿನ್ನ ಖರೀದಿಸುವವರಿಗೆ ಗುಡ್‌ ನ್ಯೂಸ್‌, ಇಳಿಕೆಯತ್ತ ಚಿನ್ನದ ದರ

ರೇಖಾ ಗುಪ್ತಾ ಮೇಲೆ ಕಪಾಳಮೋಕ್ಷ: ಆರೋಪಿ ವಿರುದ್ಧ ದಾಖಲಾಯಿತು ದೊಡ್ಡ ಕೇಸ್‌

ಪ್ರಚೋದನಕಾರಿ ಹೇಳಿಕೆ: ಬಸನಗೌಡ ಪಾಟೀಲ ವಿರುದ್ಧ ಎಫ್‌ಐಆರ್‌

ಮುಂದಿನ ಸುದ್ದಿ
Show comments